ಬ್ರೇಕಿಂಗ್ ನ್ಯೂಸ್
28-02-22 09:59 pm Bengaluru Correspondent ಕ್ರೈಂ
ಬೆಂಗಳೂರು, ಫೆ 28: ಇಲ್ಲೊಬ್ಬ ಭೂಪ, ವಿಚ್ಛೇದನಕ್ಕಾಗಿ ಪತ್ನಿಯ ನಗ್ನ ಫೋಟೋ ಇಟ್ಟುಕೊಂಡು ಆಕೆಗೆ ಕೊಟ್ಟ ಕಾಟ ಅಷ್ಟಿಷ್ಟಲ್ಲ. ಮನನೊಂದ ಪತ್ನಿ, ಗಂಡನ ವಿರುದ್ಧ ಕ್ರಮ ಕೈಗೊಳ್ಳುವಂತೆ ಪತ್ನಿ ಬಸವನಗುಡಿ ಮಹಿಳಾ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ.
ಲಕ್ಕಸಂದ್ರದ ನಿವಾಸಿ 26 ವರ್ಷದ ಮಹಿಳೆ ಕೊಟ್ಟ ದೂರಿನ ಆಧಾರದ ಮೇರೆಗೆ ಬಸವನಗುಡಿ ಮಹಿಳಾ ಠಾಣೆ ಪೊಲೀಸರು ಉದ್ಯಮಿ ಹನುಮಂತನಗರದ ನಿವಾಸಿ ಪ್ರಗತ್ ಪುರುಷೋತ್ತಮ್ (32) ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. 2015ರಲ್ಲಿ ಮಹಿಳೆ ಜತೆ ಪ್ರಗತ್ ವಿವಾಹವಾಗಿದ್ದ.
ವಿವಾಹವಾಗುವ ವೇಳೆ ಅರ್ಧ ಕೆ.ಜಿ. ಚಿನ್ನಾಭರಣ, 15 ಕೆ.ಜಿ. ಬೆಳ್ಳಿ ಸೇರಿ ಲಕ್ಷಾಂತರ ರೂ. ಮೌಲ್ಯದ ವಸ್ತುಗಳನ್ನು ವರದಕ್ಷಿಣೆಯಾಗಿ ಪಡೆದಿದ್ದ. ಆರಂಭದಲ್ಲಿ ದಂಪತಿ ಅನ್ಯೋನ್ಯವಾಗಿದ್ದರು. ಬಳಿಕ ವರದಣೆ ತರುವಂತೆ ಆರೋಪಿ ಪ್ರಗತ್ ಪೀಡಿಸುತ್ತಿದ್ದ. ಈ ವಿಚಾರ ಮಹಿಳೆಯ ಪಾಲಕರಿಗೆ ತಿಳಿದು, ಅವರು ಮತ್ತೆ 40 ಲಕ್ಷ ರೂ. ವರದಕ್ಷಿಣೆ ಕೊಟ್ಟಿದ್ದರು. ಇಷ್ಟಕ್ಕೆ ಸುಮ್ಮನಾಗದ ಪ್ರಗತ್, ಮದ್ಯಪಾನ ಮಾಡಿಕೊಂಡು ಬಂದು ಬಲವಂತವಾಗಿ ಪತ್ನಿಯ ನಗ್ನ ಫೋಟೊಗಳನ್ನು ಆಗಾಗ ಮೊಬೈಲ್ನಲ್ಲಿ ಸೆರೆಹಿಡಿಯುತ್ತಿದ್ದ. ಈ ವಿಚಾರವನ್ನು ಬೇರೆ ಯಾರಿಗಾದರೂ ತಿಳಿಸಿದರೆ, ಜೀವಸಹಿತ ಬಿಡುವುದಿಲ್ಲ ಎಂದು ಪ್ರಾಣ ಬೆದರಿಕೆ ಹಾಕಿದ್ದ.
'ತವರುಮನೆಯಿಂದ ನಿನ್ನ ತಂದೆಯ ಅರ್ಧ ಆಸ್ತಿಯನ್ನು ವರದಕ್ಷಿಣೆ ರೂಪದಲ್ಲಿ ತನ್ನ ಹೆಸರಿಗೆ ಬರೆಸಬೇಕು. ನಂತರ ವಿಚ್ಛೇದನ ಕೊಡಬೇಕು. ಇಲ್ಲದಿದ್ದರೆ ನಗ್ನ ಫೋಟೊಗಳನ್ನು ಜಾಲತಾಣಗಳಲ್ಲಿ ಅಪ್ಲೋಡ್ ಮಾಡುತ್ತೇನೆ' ಎಂದು ಪತ್ನಿಗೆ ಧಮಕಿ ಹಾಕಿದ್ದ. ಇದರಿಂದ ಆತಂಕಗೊಂಡ ಪತ್ನಿ ನ್ಯಾಯಕ್ಕಾಗಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾಳೆ.
A 26-year-old woman went to the police seeking action against her husband who allegedly was threatening her of posting her nude pictures to his friends and blackmailed her for dowry.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm