ಬ್ರೇಕಿಂಗ್ ನ್ಯೂಸ್
28-02-22 09:59 pm Bengaluru Correspondent ಕ್ರೈಂ
ಬೆಂಗಳೂರು, ಫೆ 28: ಇಲ್ಲೊಬ್ಬ ಭೂಪ, ವಿಚ್ಛೇದನಕ್ಕಾಗಿ ಪತ್ನಿಯ ನಗ್ನ ಫೋಟೋ ಇಟ್ಟುಕೊಂಡು ಆಕೆಗೆ ಕೊಟ್ಟ ಕಾಟ ಅಷ್ಟಿಷ್ಟಲ್ಲ. ಮನನೊಂದ ಪತ್ನಿ, ಗಂಡನ ವಿರುದ್ಧ ಕ್ರಮ ಕೈಗೊಳ್ಳುವಂತೆ ಪತ್ನಿ ಬಸವನಗುಡಿ ಮಹಿಳಾ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ.
ಲಕ್ಕಸಂದ್ರದ ನಿವಾಸಿ 26 ವರ್ಷದ ಮಹಿಳೆ ಕೊಟ್ಟ ದೂರಿನ ಆಧಾರದ ಮೇರೆಗೆ ಬಸವನಗುಡಿ ಮಹಿಳಾ ಠಾಣೆ ಪೊಲೀಸರು ಉದ್ಯಮಿ ಹನುಮಂತನಗರದ ನಿವಾಸಿ ಪ್ರಗತ್ ಪುರುಷೋತ್ತಮ್ (32) ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. 2015ರಲ್ಲಿ ಮಹಿಳೆ ಜತೆ ಪ್ರಗತ್ ವಿವಾಹವಾಗಿದ್ದ.
ವಿವಾಹವಾಗುವ ವೇಳೆ ಅರ್ಧ ಕೆ.ಜಿ. ಚಿನ್ನಾಭರಣ, 15 ಕೆ.ಜಿ. ಬೆಳ್ಳಿ ಸೇರಿ ಲಕ್ಷಾಂತರ ರೂ. ಮೌಲ್ಯದ ವಸ್ತುಗಳನ್ನು ವರದಕ್ಷಿಣೆಯಾಗಿ ಪಡೆದಿದ್ದ. ಆರಂಭದಲ್ಲಿ ದಂಪತಿ ಅನ್ಯೋನ್ಯವಾಗಿದ್ದರು. ಬಳಿಕ ವರದಣೆ ತರುವಂತೆ ಆರೋಪಿ ಪ್ರಗತ್ ಪೀಡಿಸುತ್ತಿದ್ದ. ಈ ವಿಚಾರ ಮಹಿಳೆಯ ಪಾಲಕರಿಗೆ ತಿಳಿದು, ಅವರು ಮತ್ತೆ 40 ಲಕ್ಷ ರೂ. ವರದಕ್ಷಿಣೆ ಕೊಟ್ಟಿದ್ದರು. ಇಷ್ಟಕ್ಕೆ ಸುಮ್ಮನಾಗದ ಪ್ರಗತ್, ಮದ್ಯಪಾನ ಮಾಡಿಕೊಂಡು ಬಂದು ಬಲವಂತವಾಗಿ ಪತ್ನಿಯ ನಗ್ನ ಫೋಟೊಗಳನ್ನು ಆಗಾಗ ಮೊಬೈಲ್ನಲ್ಲಿ ಸೆರೆಹಿಡಿಯುತ್ತಿದ್ದ. ಈ ವಿಚಾರವನ್ನು ಬೇರೆ ಯಾರಿಗಾದರೂ ತಿಳಿಸಿದರೆ, ಜೀವಸಹಿತ ಬಿಡುವುದಿಲ್ಲ ಎಂದು ಪ್ರಾಣ ಬೆದರಿಕೆ ಹಾಕಿದ್ದ.
'ತವರುಮನೆಯಿಂದ ನಿನ್ನ ತಂದೆಯ ಅರ್ಧ ಆಸ್ತಿಯನ್ನು ವರದಕ್ಷಿಣೆ ರೂಪದಲ್ಲಿ ತನ್ನ ಹೆಸರಿಗೆ ಬರೆಸಬೇಕು. ನಂತರ ವಿಚ್ಛೇದನ ಕೊಡಬೇಕು. ಇಲ್ಲದಿದ್ದರೆ ನಗ್ನ ಫೋಟೊಗಳನ್ನು ಜಾಲತಾಣಗಳಲ್ಲಿ ಅಪ್ಲೋಡ್ ಮಾಡುತ್ತೇನೆ' ಎಂದು ಪತ್ನಿಗೆ ಧಮಕಿ ಹಾಕಿದ್ದ. ಇದರಿಂದ ಆತಂಕಗೊಂಡ ಪತ್ನಿ ನ್ಯಾಯಕ್ಕಾಗಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾಳೆ.
A 26-year-old woman went to the police seeking action against her husband who allegedly was threatening her of posting her nude pictures to his friends and blackmailed her for dowry.
03-08-26 01:46 pm
HK News Staffer
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
03-08-26 01:48 pm
HK News Staffer
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm