ಬ್ರೇಕಿಂಗ್ ನ್ಯೂಸ್
01-03-22 12:25 pm Udupi Correspondent ಕ್ರೈಂ
ಉಡುಪಿ, ಮಾ.1 : ಯುವತಿಯ ಮುಖಕ್ಕೆ ಉರಿಯುವ ಸಿಗರೇಟನ್ನು ಇಟ್ಟು ಅವಾಚ್ಯವಾಗಿ ನಿಂದಿಸುವ ವಿಡಿಯೋ ವೈರಲ್ ಆಗಿದ್ದು, ವರದಕ್ಷಿಣೆ ಕಿರುಕುಳ ಅನ್ನುವ ದೂರು ಕೇಳಿಬಂದಿದೆ.
ಕುಂದಾಪುರ ಕನ್ನಡ ಭಾಷೆಯಲ್ಲಿ ಮಾತನಾಡುತ್ತಿದ್ದು, ಪತಿರಾಯನೇ ಪತ್ನಿಯ ಜೊತೆಗೆ ವಿಕೃತವಾಗಿ ನಡೆದುಕೊಂಡಿದ್ದಾನೆ. ಈ ಬಗ್ಗೆ ಕುಂದಾಪುರ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳ ದಾಖಲಾಗಿದ್ದು, ಆರೋಪಿ ಪ್ರದೀಪ್ ಪೂಜಾರಿ ವಿರುದ್ಧ ಪತ್ನಿಯೇ ದೂರು ನೀಡಿದ್ದಾಳೆ.
ವಿಡಿಯೋದಲ್ಲಿ ತನ್ನ ತಾಯಿಗೆ ದೂರು ಹೇಳಿರುವ ಪತ್ನಿಯನ್ನು ಆರೋಪಿ ಪತಿ ಸಿಗರೇಟು ತೋರಿಸಿ ಹೆದರಿಸುತ್ತಿದ್ದಾನೆ. ಯುವತಿ ತನಗೆ ಬೆನ್ನು ನೋವು, ಉಷಾರಿಲ್ಲ ಎಂದು ಹೇಳಿಕೊಳ್ಳುತ್ತಿದ್ದರೂ, ಪತಿರಾಯ ಸಿಗರೇಟು ಹೊಗೆ ಬಿಡುತ್ತಾ ಉರಿಯುವ ಸಿಗರೇಟು ತುಂಡನ್ನು ಆಕೆಯ ಮುಖಕ್ಕೆ ತಾಗಿಸುತ್ತಾನೆ. ಅಲ್ಲದೆ, ತನ್ನದೇ ಮೊಬೈಲಿನಲ್ಲಿ ವಿಡಿಯೋ ಮಾಡುತ್ತಾನೆ. ನಿನ್ನ ತಾಯಿ ನನಗೆ ಫೋನ್ ಮಾಡಿ ಹೆದರಿಸುತ್ತಿದ್ದಾಳೆ. ಆಕೆಯಲ್ಲಿ ನೀನೇ ಫೋನ್ ಮಾಡಿ, ನನಗೆ ಕರೆ ಮಾಡಿ ಕ್ಷಮೆ ಕೇಳುವಂತೆ ಮಾಡಬೇಕು ಎಂದು ನಿಂದಿಸುತ್ತಾನೆ.
ಯುವತಿ ಮತ್ತು ಪತಿಯ ತಾಯಿ ಅಂಗಲಾಚುತ್ತಿದ್ದು, ಈ ರೀತಿ ವಿಕೃತವಾಗಿ ವರ್ತಿಸಬೇಡ. ನಿನಗೆ ದೋಷ ತಟ್ಟೀತು ಎಂದು ಹೇಳುತ್ತಾರೆ. ಇದರ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.
ಮೂರು ದಿನಗಳ ಹಿಂದೆಯೇ ಕುಂದಾಪುರ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಜಾಲತಾಣದಲ್ಲಿ ವಿಡಿಯೋ ಆಧರಿಸಿ ಆರೋಪಿಯನ್ನು ಬಂಧಿಸಬೇಕು, ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಜನರು ಆಗ್ರಹ ಮಾಡಿದ್ದಾರೆ.
Kundapur husband tortured wife for dowry, burns her with cigarette asking to call her father to get the dowry amount. The video of this has gone viral on social media.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 10:43 am
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
31-03-26 03:01 pm
HK News Staffer
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm