ಬ್ರೇಕಿಂಗ್ ನ್ಯೂಸ್
01-03-22 12:25 pm Udupi Correspondent ಕ್ರೈಂ
ಉಡುಪಿ, ಮಾ.1 : ಯುವತಿಯ ಮುಖಕ್ಕೆ ಉರಿಯುವ ಸಿಗರೇಟನ್ನು ಇಟ್ಟು ಅವಾಚ್ಯವಾಗಿ ನಿಂದಿಸುವ ವಿಡಿಯೋ ವೈರಲ್ ಆಗಿದ್ದು, ವರದಕ್ಷಿಣೆ ಕಿರುಕುಳ ಅನ್ನುವ ದೂರು ಕೇಳಿಬಂದಿದೆ.
ಕುಂದಾಪುರ ಕನ್ನಡ ಭಾಷೆಯಲ್ಲಿ ಮಾತನಾಡುತ್ತಿದ್ದು, ಪತಿರಾಯನೇ ಪತ್ನಿಯ ಜೊತೆಗೆ ವಿಕೃತವಾಗಿ ನಡೆದುಕೊಂಡಿದ್ದಾನೆ. ಈ ಬಗ್ಗೆ ಕುಂದಾಪುರ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳ ದಾಖಲಾಗಿದ್ದು, ಆರೋಪಿ ಪ್ರದೀಪ್ ಪೂಜಾರಿ ವಿರುದ್ಧ ಪತ್ನಿಯೇ ದೂರು ನೀಡಿದ್ದಾಳೆ.
ವಿಡಿಯೋದಲ್ಲಿ ತನ್ನ ತಾಯಿಗೆ ದೂರು ಹೇಳಿರುವ ಪತ್ನಿಯನ್ನು ಆರೋಪಿ ಪತಿ ಸಿಗರೇಟು ತೋರಿಸಿ ಹೆದರಿಸುತ್ತಿದ್ದಾನೆ. ಯುವತಿ ತನಗೆ ಬೆನ್ನು ನೋವು, ಉಷಾರಿಲ್ಲ ಎಂದು ಹೇಳಿಕೊಳ್ಳುತ್ತಿದ್ದರೂ, ಪತಿರಾಯ ಸಿಗರೇಟು ಹೊಗೆ ಬಿಡುತ್ತಾ ಉರಿಯುವ ಸಿಗರೇಟು ತುಂಡನ್ನು ಆಕೆಯ ಮುಖಕ್ಕೆ ತಾಗಿಸುತ್ತಾನೆ. ಅಲ್ಲದೆ, ತನ್ನದೇ ಮೊಬೈಲಿನಲ್ಲಿ ವಿಡಿಯೋ ಮಾಡುತ್ತಾನೆ. ನಿನ್ನ ತಾಯಿ ನನಗೆ ಫೋನ್ ಮಾಡಿ ಹೆದರಿಸುತ್ತಿದ್ದಾಳೆ. ಆಕೆಯಲ್ಲಿ ನೀನೇ ಫೋನ್ ಮಾಡಿ, ನನಗೆ ಕರೆ ಮಾಡಿ ಕ್ಷಮೆ ಕೇಳುವಂತೆ ಮಾಡಬೇಕು ಎಂದು ನಿಂದಿಸುತ್ತಾನೆ.
ಯುವತಿ ಮತ್ತು ಪತಿಯ ತಾಯಿ ಅಂಗಲಾಚುತ್ತಿದ್ದು, ಈ ರೀತಿ ವಿಕೃತವಾಗಿ ವರ್ತಿಸಬೇಡ. ನಿನಗೆ ದೋಷ ತಟ್ಟೀತು ಎಂದು ಹೇಳುತ್ತಾರೆ. ಇದರ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.
ಮೂರು ದಿನಗಳ ಹಿಂದೆಯೇ ಕುಂದಾಪುರ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಜಾಲತಾಣದಲ್ಲಿ ವಿಡಿಯೋ ಆಧರಿಸಿ ಆರೋಪಿಯನ್ನು ಬಂಧಿಸಬೇಕು, ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಜನರು ಆಗ್ರಹ ಮಾಡಿದ್ದಾರೆ.
Kundapur husband tortured wife for dowry, burns her with cigarette asking to call her father to get the dowry amount. The video of this has gone viral on social media.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm