ಬ್ರೇಕಿಂಗ್ ನ್ಯೂಸ್
04-03-22 11:38 am Mangalore Correspondent ಕ್ರೈಂ
ಪುತ್ತೂರು, ಮಾ.4: 16 ವರ್ಷಗಳ ಹಿಂದೆ ನಡೆದಿದ್ದ ಮನೆ ಕಳವು ಪ್ರಕರಣದಲ್ಲಿ ಆರೋಪಿಯಾಗಿ ಜೈಲಿನಲ್ಲಿರುವ ವ್ಯಕಿಗೆ ಪುತ್ತೂರು ನ್ಯಾಯಾಲಯ ಐದು ವರ್ಷಗಳ ಶಿಕ್ಷೆ ಪ್ರಕಟಿಸಿದೆ.
2006 ರ ಮಾರ್ಚ್ 14 ಮತ್ತು 16ರ ಮಧ್ಯೆ ಪುತ್ತೂರು ತಾಲೂಕಿನ ಕೆಮ್ಮಿಂಜೆ ಗ್ರಾಮದ ಮೊಟ್ಟೆತ್ತಡ್ಕ ಎಂಬಲ್ಲಿ ಮಹೇಂದ್ರ ಕುಮಾರ್ ಎಂಬವರ ಮನೆಯಿಂದ ಕಳವು ನಡೆದಿತ್ತು. ಮನೆಯ ಬಾಗಿಲಿನ ಬೀಗವನ್ನು ಒಡೆದು ಸೂಟ್ ಕೇಸ್ ನಲ್ಲಿದ್ದ 50.930 ಗ್ರಾಮ್ ಚಿನ್ನದ ಆಭರಣಗಳನ್ನು ಕಳವು ಮಾಡಲಾಗಿತ್ತು. ಕೃತ್ಯದ ಬಗ್ಗೆ ತನಿಖೆ ನಡೆಸಿದ್ದ ಜಿಲ್ಲಾ ಅಪರಾಧ ಪತ್ತೆದಳವು ಆರೋಪಿಗಳಾದ ಸಂತೋಷ್ ಮತ್ತು ನಾಗರಾಜ ಬಳೆಗಾರ ಎಂಬವರನ್ನು ಬಂಧಿಸಿದ್ದರು.
ಆಗಿನ ಜಿಲ್ಲಾ ಅಪರಾಧ ಪತ್ತೆದಳದ ಪೊಲೀಸ್ ನಿರೀಕ್ಷಕ ತಿಲಕಚಂದ್ರ, ಆರೋಪಿಗಳನ್ನು ಪುತ್ತೂರು ನಗರ ಠಾಣೆಗೆ ಹಸ್ತಾಂತರ ಮಾಡಿದ್ದರು. ಬಳಿಕ ಪುತ್ತೂರು ನಗರ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಎಸ್ಐ ಕೃಷ್ಣ ನಾಯ್ಕ್ ನ್ಯಾಯಾಲಯಕ್ಕೆ ದೋಷಾರಾಪ ಪಟ್ಟಿ ಸಲ್ಲಿಸಿದ್ದರು. ಸುರತ್ಕಲ್ ಹೊನ್ನಕಟ್ಟೆ ನಿವಾಸಿ ನಾಗರಾಜ ಬಳೆಗಾರ ವಿರುದ್ಧ ಆನಂತರ ಹಲವು ಕಳವು ಕೇಸುಗಳು ದಾಖಲಾಗಿ ಕಲಬುರ್ಗಿ ಜೈಲಿನಲ್ಲಿ ಇಡಲಾಗಿತ್ತು. ಈಗಲೂ ಅದೇ ಜೈಲಿನಲ್ಲಿ ಇದ್ದಾನೆ. ಸದ್ರಿ ಅಪರಾಧದ ಬಗ್ಗೆ ಪುತ್ತೂರಿನ ನ್ಯಾಯಾಲಯದಲ್ಲಿ 2014 ರಿಂದ ವಿಚಾರಣೆ ನಡೆದಿದ್ದು ಒಂದನೇ ಆರೋಪಿ ನಾಗರಾಜ ಬಳೆಗಾರ ವಿರುದ್ಧ ಅಪರಾಧ ಸಾಬೀತಾಗಿದ್ದರಿಂದ 2022 ರ ಮಾರ್ಚ್ 3 ರಂದು ಕೋರ್ಟ್ ಶಿಕ್ಷೆ ಪ್ರಕಟಿಸಿದೆ.
ಐದು ವರ್ಷಗಳ ಕಠಿಣ ಶಿಕ್ಷೆ, 5 ಸಾವಿರ ರೂ. ದಂಡ, ತೆರಲು ತಪ್ಪಿದಲ್ಲಿ ಹೆಚ್ಚುವರಿ 6 ತಿಂಗಳ ಶಿಕ್ಷೆ ಅನುಭವಿಸಬೇಕೆಂದು ತೀರ್ಪು ಹೇಳಿದೆ. ಆರೋಪಿಯು ಈಗಾಗಲೇ 5 ವರ್ಷಕ್ಕಿಂತ ಹೆಚ್ಚು ಕಾಲ ಶಿಕ್ಷೆ ಅನುಭವಿಸಿದ್ದಲ್ಲಿ ಇತರ ಪ್ರಕರಣಗಳಲ್ಲಿ ಅಪರಾಧ ಸಾಬೀತು ಆಗಿರದೇ ಇದ್ದರೆ ಜೈಲಿನಿಂದ ಬಿಡುಗಡೆಯಾಗಿ ಬರುವ ಸಾಧ್ಯತೆಯಿದೆ. ಆದರೆ ಆರೋಪಿ ನಾಗರಾಜ ಬಳೆಗಾರ ಉಡುಪಿ ಜೈಲಿನಲ್ಲಿದ್ದಾಗ ವಿನೋದ್ ಶೆಟ್ಟಿಗಾರ್ ಎಂಬಾತನ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದು ಕಲಬುರಗಿ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾನೆ. ಹೀಗಾಗಿ ಕಳವು ಪ್ರಕರಣದ ಶಿಕ್ಷೆಯನ್ನು ಜೈಲಧಿಕಾರಿಗಳು ಪ್ರತ್ಯೇಕವಾಗಿ ಪರಿಗಣಿಸುತ್ತಾರೆ.
The police here have arrested Chandrashekhar (57) from Bandaje village on the charges of raping a mentally retarded lady. It is said that the lady was raped by him near Kanyoor in the taluk.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm