ಬ್ರೇಕಿಂಗ್ ನ್ಯೂಸ್
04-03-22 02:12 pm Bengaluru Correspondent ಕ್ರೈಂ
ಬೆಂಗಳೂರು, ಮಾ.4: ಏರ್ಟೆಲ್ ಸಿಮ್ ಹೊಂದಿರುವ ಗ್ರಾಹಕರೇ ಎಚ್ಚರ. ನಿಮ್ಮ ಹೆಸರಲ್ಲೇ ಸಿಮ್ ಪಡೆದು ಸೈಬರ್ ವಂಚನೆ ಮಾಡೋರಿದ್ದಾರೆ, ಎಂಬುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಸೈಬರ್ ವಂಚನೆ ಪ್ರಕರಣದಲ್ಲಿ ಬೆಂಗಳೂರು ಪೊಲೀಸರು ಏರ್ಟೆಲ್ ಕಂಪನಿಯ ಇಬ್ಬರು ಎಕ್ಸಿಕ್ಯುಟಿವ್ ಗಳನ್ನೇ ಬಂಧಿಸಿದ್ದಾರೆ.
ಹರ್ಷ(24) ಹಾಗೂ ಚೇತನ್(27) ಬಂಧಿತ ಆರೋಪಿಗಳು. ಕಳೆದ ಜನವರಿಯಲ್ಲಿ ರಾಜೇಶ್ವರ್ ಎಂಬ ಸೈಬರ್ ವಂಚಕನನ್ನ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದರು. ರೇವಾ ಯುನಿವರ್ಸಿಟಿಯಲ್ಲಿ ಸೀಟು ಕೊಡಿಸೋದಾಗಿ ವಂಚಿಸಿದ್ದ ಆರೋಪಿಯನ್ನು ಬಂಧಿಸಲಾಗಿತ್ತು. ಆತನ ಸಿಮ್ ತಪಾಸಣೆ ನಡೆಸಿದಾಗ, ನಕಲಿ ಸಿಮ್ ಮೂಲಕ ಕರೆ ಮಾಡಿದ್ದು ಕಂಡುಬಂದಿತ್ತು. ಸೀಟು ಕೊಡಿಸುವುದಾಗಿ ಹೇಳಿ 1.25 ಲಕ್ಷ ರೂ. ವಂಚಿಸಿದ್ದ.

ಇದೇ ರೀತಿ ಆರೋಪಿ ರಾಜೇಶ್ವರ್ ಹಲವರಿಗೆ ವಂಚಿಸಿರುವುದು ಪೊಲೀಸರ ವಿಚಾರಣೆಯಲ್ಲಿ ಪತ್ತೆಯಾಗಿತ್ತು. ಸಿಮ್ ಸಿಕ್ಕಿದ್ದು ಹೇಗೆ ಎಂದು ತಪಾಸಣೆ ನಡೆಸಿದ ವೇಳೆ ಏರ್ಟೆಲ್ ಕಂಪನಿಯ ಇಬ್ಬರು ಸೇಲ್ಸ್ ಎಕ್ಸಿಕ್ಯೂಟಿವ್ ಗಳೇ ಈತನಿಗೆ ಸಹಕಾರ ನೀಡಿರುವುದು ಗಮನಕ್ಕೆ ಬಂದಿತ್ತು. ಅದರಂತೆ, ಪೊಲೀಸರು ಸೈಬರ್ ವಂಚಕನಿಗೆ ಸಹಕಾರ ನೀಡಿರುವ ಆರೋಪದಲ್ಲಿ ಇಬ್ಬರು ಎಕ್ಸಿಕ್ಯುಟಿವ್ ಗಳನ್ನು ಬಂಧಿಸಿದ್ದಾರೆ.

ನಮ್ಮ ಬಳಿಯಿಂದಲೇ ಹೆಚ್ಚುವರಿ ದಾಖಲಾತಿ ಪಡೆದು ಪ್ರತ್ಯೇಕ ಸಿಮ್ ಖರೀದಿ ಮಾಡುತ್ತಿದ್ದ ಇವರು, ಅದನ್ನ ಸೈಬರ್ ವಂಚಕರಿಗೆ ನೀಡುತ್ತಿದ್ದರು. ಏರ್ಟೆಲ್ ಕಚೇರಿಯಲ್ಲೇ ಕುಳಿತು ಸೈಬರ್ ವಂಚಕರ ಪರ ಕೆಲಸ ಮಾಡುತ್ತಿದ್ದರು. ಗ್ರಾಹಕರ ಬಳಿ ಹೆಚ್ಚುವರಿ ದಾಖಲಾತಿ ಶೇಖರಿಸಿ ಸಿಮ್ ಗಳನ್ನು ಪಡೆಯುತ್ತಿದ್ದ ಆರೋಪಿಗಳು, ಅದನ್ನು ಸೈಬರ್ ವಂಚಕರಿಗೆ ನೀಡುತ್ತಿದ್ದರು.
Bangalore Two Airtel executives staffs arrested for using customers sim and committing cyber crime. The duo have duped people in lakhs.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm