ಬ್ರೇಕಿಂಗ್ ನ್ಯೂಸ್
05-03-22 10:27 pm Mangalore Correspondent ಕ್ರೈಂ
ಪುತ್ತೂರು, ಮಾ.5: ಕಾಲೇಜು ವಿದ್ಯಾರ್ಥಿನಿ, ಅಪ್ರಾಪ್ತ ಯುವತಿಗೆ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದು ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ.
ಸುಳ್ಯ ಐವರ್ನಾಡು ಗ್ರಾಮದ ರಕ್ಷಿತ್ ಬಂಧಿತ ಆರೋಪಿ. ವಿದ್ಯಾರ್ಥಿನಿ ಪುತ್ತೂರಿನ ಹಾಸ್ಟೆಲ್ನಲ್ಲಿ ಇದ್ದುಕೊಂಡು ಶಿಕ್ಷಣ ಪಡೆಯುತ್ತಿದ್ದಳು. ಈ ವೇಳೆ, ರಕ್ಷಿತ್ ಆಕೆಯನ್ನು ಪ್ರೀತಿಸುತ್ತಿದ್ದ ಎನ್ನಲಾಗಿದ್ದು ವಿಚಾರ ಬಾಲಕಿ ಮನೆಯವರಿಗೆ ತಿಳಿದು, ರಕ್ಷಿತ್ನನ್ನು ಕರೆದು ಬುದ್ಧಿವಾದ ಹೇಳಿದ್ದರು. ಇದೇ ವಿಚಾರದಲ್ಲಿ ಬಾಲಕಿ ತಂದೆ, ಸಹೋದರ ಹಾಗೂ ಆರೋಪಿಯ ಮಧ್ಯೆ ಎರಡು ತಿಂಗಳ ಹಿಂದೆ ಗಲಾಟೆ ನಡೆದಿದ್ದು ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು. ಆ ಸಂದರ್ಭ ಬಾಲಕಿಯ ತಂದೆ ನೀಡಿದ ದೂರಿನಂತೆ ಆರೋಪಿ ರಕ್ಷಿತ್ ವಿರುದ್ಧ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆನಂತರವೂ ಆರೋಪಿ ರಕ್ಷಿತ್ ಬಾಲಕಿ ವಾಸ್ತವ್ಯ ಹೂಡಿದ್ದ ಪುತ್ತೂರಿನ ಹಾಸ್ಟೆಲ್ ವಾರ್ಡನ್ಗೆ ಕರೆ ಮಾಡಿ ತಾನು ಬಾಲಕಿಯ ಅಣ್ಣನೆಂದು ಸುಳ್ಳು ಹೇಳಿ ಆಕೆಗೆ ಫೋನ್ ನೀಡಲು ತಿಳಿಸುತ್ತಿದ್ದ. ಈ ವೇಳೆ ಬಾಲಕಿಯಲ್ಲಿ ಹೊರಗಡೆ ಭೇಟಿಯಾಗುವಂತೆ ಒತ್ತಾಯಿಸುತ್ತಿದ್ದ. ಬಾಲಕಿ ಬರಲು ನಿರಾಕರಿಸಿದಾಗ ಕೊಲ್ಲುವ ಬೆದರಿಕೆ ಹಾಕುತ್ತಿದ್ದ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಆರೋಪಿಯ ಜೀವ ಬೆದರಿಕೆಯಿಂದ ಹೆದರಿದ ಬಾಲಕಿ ಫೆ.27ರಂದು ಪುತ್ತೂರಿನ ಯಾತ್ರಿ ಸ್ಥಳ ಬೀರಮಲೆಗುಡ್ಡೆಗೆ ಬರುವುದಾಗಿ ತಿಳಿಸಿದ್ದಳು. ಅಲ್ಲಿಗೆ ಆಕೆ ತೆರಳಿದ ಸಂದರ್ಭ ಆರೋಪಿ ಆಕೆಯನ್ನು ಬಲವಂತವಾಗಿ ಅಪ್ಪಿಕೊಂಡು ಮುತ್ತಿಕ್ಕಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ದೂರಲಾಗಿದೆ. ಬಾಲಕಿ ಅಲ್ಲಿಂದ ತಪ್ಪಿಸಿಕೊಂಡು ಹಾಸ್ಟೆಲ್ಗೆ ಬಂದಿದ್ದಾಳೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪುತ್ತೂರು ಮಹಿಳಾ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
Sexual harassment to college girl in the name of love, accused arrested by Puttur police. The arrested has been identified as Rakshith.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm