ಬ್ರೇಕಿಂಗ್ ನ್ಯೂಸ್
05-03-22 10:27 pm Mangalore Correspondent ಕ್ರೈಂ
ಪುತ್ತೂರು, ಮಾ.5: ಕಾಲೇಜು ವಿದ್ಯಾರ್ಥಿನಿ, ಅಪ್ರಾಪ್ತ ಯುವತಿಗೆ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದು ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ.
ಸುಳ್ಯ ಐವರ್ನಾಡು ಗ್ರಾಮದ ರಕ್ಷಿತ್ ಬಂಧಿತ ಆರೋಪಿ. ವಿದ್ಯಾರ್ಥಿನಿ ಪುತ್ತೂರಿನ ಹಾಸ್ಟೆಲ್ನಲ್ಲಿ ಇದ್ದುಕೊಂಡು ಶಿಕ್ಷಣ ಪಡೆಯುತ್ತಿದ್ದಳು. ಈ ವೇಳೆ, ರಕ್ಷಿತ್ ಆಕೆಯನ್ನು ಪ್ರೀತಿಸುತ್ತಿದ್ದ ಎನ್ನಲಾಗಿದ್ದು ವಿಚಾರ ಬಾಲಕಿ ಮನೆಯವರಿಗೆ ತಿಳಿದು, ರಕ್ಷಿತ್ನನ್ನು ಕರೆದು ಬುದ್ಧಿವಾದ ಹೇಳಿದ್ದರು. ಇದೇ ವಿಚಾರದಲ್ಲಿ ಬಾಲಕಿ ತಂದೆ, ಸಹೋದರ ಹಾಗೂ ಆರೋಪಿಯ ಮಧ್ಯೆ ಎರಡು ತಿಂಗಳ ಹಿಂದೆ ಗಲಾಟೆ ನಡೆದಿದ್ದು ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು. ಆ ಸಂದರ್ಭ ಬಾಲಕಿಯ ತಂದೆ ನೀಡಿದ ದೂರಿನಂತೆ ಆರೋಪಿ ರಕ್ಷಿತ್ ವಿರುದ್ಧ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆನಂತರವೂ ಆರೋಪಿ ರಕ್ಷಿತ್ ಬಾಲಕಿ ವಾಸ್ತವ್ಯ ಹೂಡಿದ್ದ ಪುತ್ತೂರಿನ ಹಾಸ್ಟೆಲ್ ವಾರ್ಡನ್ಗೆ ಕರೆ ಮಾಡಿ ತಾನು ಬಾಲಕಿಯ ಅಣ್ಣನೆಂದು ಸುಳ್ಳು ಹೇಳಿ ಆಕೆಗೆ ಫೋನ್ ನೀಡಲು ತಿಳಿಸುತ್ತಿದ್ದ. ಈ ವೇಳೆ ಬಾಲಕಿಯಲ್ಲಿ ಹೊರಗಡೆ ಭೇಟಿಯಾಗುವಂತೆ ಒತ್ತಾಯಿಸುತ್ತಿದ್ದ. ಬಾಲಕಿ ಬರಲು ನಿರಾಕರಿಸಿದಾಗ ಕೊಲ್ಲುವ ಬೆದರಿಕೆ ಹಾಕುತ್ತಿದ್ದ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಆರೋಪಿಯ ಜೀವ ಬೆದರಿಕೆಯಿಂದ ಹೆದರಿದ ಬಾಲಕಿ ಫೆ.27ರಂದು ಪುತ್ತೂರಿನ ಯಾತ್ರಿ ಸ್ಥಳ ಬೀರಮಲೆಗುಡ್ಡೆಗೆ ಬರುವುದಾಗಿ ತಿಳಿಸಿದ್ದಳು. ಅಲ್ಲಿಗೆ ಆಕೆ ತೆರಳಿದ ಸಂದರ್ಭ ಆರೋಪಿ ಆಕೆಯನ್ನು ಬಲವಂತವಾಗಿ ಅಪ್ಪಿಕೊಂಡು ಮುತ್ತಿಕ್ಕಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ದೂರಲಾಗಿದೆ. ಬಾಲಕಿ ಅಲ್ಲಿಂದ ತಪ್ಪಿಸಿಕೊಂಡು ಹಾಸ್ಟೆಲ್ಗೆ ಬಂದಿದ್ದಾಳೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪುತ್ತೂರು ಮಹಿಳಾ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
Sexual harassment to college girl in the name of love, accused arrested by Puttur police. The arrested has been identified as Rakshith.
03-08-26 03:23 pm
HK News Staffer
ಡಿಕೆಶಿ ಸರ್ಕಾರದ ಮೆಗಾ ಸಂಪುಟ ವಿಸ್ತರಣೆ ; ಸಂಜೆ 4ಕ್...
03-08-26 01:46 pm
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
03-08-26 01:48 pm
HK News Staffer
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm