ಬ್ರೇಕಿಂಗ್ ನ್ಯೂಸ್
08-03-22 02:12 pm Bengalore Correspondent ಕ್ರೈಂ
ಬೆಂಗಳೂರು, ಮಾ.8: ಮುಂಬೈನಲ್ಲಿ ಕೊಲೆ, ದರೋಡೆ, ಹಫ್ತಾ ವಸೂಲಿ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಇಲಿಯಾಸ್ ಅಬ್ದುಲ್ ಆಸಿಫ್ ಅಕಾ ಬಕ್ಕಣ್ಣ ಎಂಬಾತನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಮುಂಬೈನಲ್ಲಿ ಕೊಲೆ, ಕೊಲೆಯತ್ನ, ದರೋಡೆ, ಹಫ್ತಾ , ಡಕಾಯಿತಿ ಹೀಗೆ 37 ಪ್ರಕರಣಗಳನ್ನು ಆರೋಪಿ ಎದುರಿಸುತ್ತಿದ್ದ. ಆರೋಪಿ ಇಲಿಯಾಸ್, ಬೆಂಗಳೂರಿನ ರೆಸ್ಟೋರೆಂಟ್ ಒಂದರಲ್ಲಿ ಅಡಗಿಕೊಂಡಿರುವ ಬಗ್ಗೆ ಮಾಹಿತಿ ತಿಳಿದು ಬೆಂಗಳೂರು ಗ್ರಾಮಾಂತರ ಎಸ್ಪಿ ವಂಶಿ ಕೃಷ್ಣ , ಎಎಸ್ಪಿ ಲಕ್ಷ್ಮೀ ಗಣೇಶ್, ಆನೇಕಲ್ ಡೆಪ್ಯುಟಿ ಎಂ. ಮಲ್ಲೇಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.
ಪೊಲೀಸರು ಬೆನ್ನುಬಿದ್ದಾಗ, ಆರೋಪಿ ಇಲಿಯಾಸ್ ತನ್ನಲ್ಲಿದ್ದ ಗನ್ ತೆಗೆದು ತಿರುಗಿ ಬೀಳಲು ಸಜ್ಜಾಗಿದ್ದ. ಆದರೆ ಪೊಲೀಸರು ಶಸ್ತ್ರ ಸಜ್ಜಿತರಾಗಿ ಹೆಚ್ಚಿನ ಸಂಖ್ಯೆಯಲ್ಲಿದ್ದರಿಂದ ಪ್ರತಿದಾಳಿ ನಡೆಸಲು ಮುಂದಾಗದೆ ಶರಣಾಗಿದ್ದಾನೆ. ಆರೋಪಿ ಬಳಿಯಿಂದ ನಾಲ್ಕು ಸಜೀವ ಗುಂಡು, ಒಂದು ಪಿಸ್ತೂಲ್, 15 ಸಿಮ್ ಕಾರ್ಡ್, ಆರು ಮೊಬೈಲ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮುಂಬೈನಲ್ಲಿ ಇತ್ತೀಚೆಗೆ ಸಿಕಂದರ್ ರಾಜು ಲೂಲಾಡಿಯಾ ಎಂಬ ಉದ್ಯಮಿಯನ್ನು ಆತನ ಕಚೇರಿಯಲ್ಲೇ ಹಣಕ್ಕಾಗಿ ಕಬ್ಬಣದ ರಾಡ್ ನಿಂದ ಹೊಡೆದು ಹಲ್ಲೆ ಮಾಡಲಾಗಿತ್ತು. ಅದರಲ್ಲಿ ಪ್ರಮುಖ ಆರೋಪಿಯಾಗಿದ್ದ ಇಲಿಯಾಸ್ ಅಬ್ದುಲ್ ಆಸಿಫ್ ನನ್ನು ಬಂಧಿಸಲು ಪೊಲೀಸರು ಮುಂದಾಗಿದ್ದರು. ಮುಂಬೈ ನಗರ ಮತ್ತು ಮಹಾರಾಷ್ಟ್ರದಾದ್ಯಂತ ಆರೋಪಿ ಪತ್ತೆಗೆ ಹುಡುಕಾಟ ನಡೆದಿತ್ತು. ಹಾಗಾಗಿ ಕರ್ನಾಟಕಕ್ಕೆ ಬಂದು ದಕ್ಷಿಣ ಬೆಂಗಳೂರಿನ ನಿಗೂಢ ಜಾಗದಲ್ಲಿ ಅವಿತುಕೊಂಡಿದ್ದ. ಈ ಬಗ್ಗೆ ಮುಂಬೈ ಪೊಲೀಸರು ನೀಡಿದ ಸುಳಿವು ಆಧರಿಸಿ ಬೆಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.
The Karnataka Police have arrested one of the most wanted Mumbai gangsters, Iliyas Abdul Asif a.k.a Bhackana, in an early morning operation here on Tuesday.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm