ಬ್ರೇಕಿಂಗ್ ನ್ಯೂಸ್
08-03-22 04:05 pm Mangalore Correspondent ಕ್ರೈಂ
ಮಂಗಳೂರು, ಮಾ.8: ಮಂಗಳೂರು ಮುಸ್ಲಿಮ್ಸ್ ಪೇಜ್ ಹೆಸರಲ್ಲಿ ದ್ವೇಷ ಹರಡುವ, ಕೋಮು ಸಾಮರಸ್ಯಕ್ಕೆ ಧಕ್ಕೆ ತರುವ ರೀತಿಯಲ್ಲಿ ಪೋಸ್ಟ್ ಹಾಕುತ್ತಿರುವ ಪ್ರಕರಣವನ್ನು ರಾಜ್ಯ ಸರಕಾರ ಸಿಐಡಿ ತನಿಖೆಗೆ ಒಪ್ಪಿಸಿದೆ.
ಇತ್ತೀಚೆಗೆ ಶಿವಮೊಗ್ಗದಲ್ಲಿ ಕೊಲೆಯಾದ ಹಿಂದು ಕಾರ್ಯಕರ್ತ ಹರ್ಷ ಪ್ರಕರಣದಲ್ಲಿ ಬೀದಿ ನಾಯಿ ಸತ್ತಿದ್ದಾನೆ ಎಂಬ ರೀತಿಯಲ್ಲಿ ಪೋಸ್ಟ್ ಹಾಕಿದ್ದು ಮತ್ತು ಅದರಲ್ಲಿ ಸಚಿವ ಈಶ್ವರಪ್ಪ ಅವರಿಗೆ ಕೊಲೆ ಪ್ರಕರಣದಲ್ಲಿ ಶಾಮೀಲಾತಿ ಇದೆಯೆಂಬ ರೀತಿಯಲ್ಲಿ ಪೋಸ್ಟ್ ಹಾಕಿದ್ದು ಕಂಡುಬಂದಿತ್ತು. ಈ ಪೋಸ್ಟ್ ವೈರಲ್ ಆಗಿದ್ದಲ್ಲದೆ, ಮಂಗಳೂರು ಪೊಲೀಸರು ಸುಮೊಟೊ ಪ್ರಕರಣ ದಾಖಲಿಸಿದ್ದರು.
ಇದೇ ಮಂಗಳೂರು ಮುಸ್ಲಿಮ್ಸ್ ಪೇಜ್ ಹೆಸರಲ್ಲಿ ಹಿಜಾಬ್ ಪ್ರಕರಣದಲ್ಲಿ ವಿಚಾರಣೆ ನಡೆಸುತ್ತಿರುವ ಹೈಕೋರ್ಟ್ ಜಡ್ಜ್ ವಿರುದ್ಧವೂ ಅವಹೇಳನಕಾರಿ ಪೋಸ್ಟ್ ಹಾಕಲಾಗಿತ್ತು. ಫೆ.12ರಂದು ಈ ಪೋಸ್ಟ್ ಹಾಕಲಾಗಿತ್ತು. ನ್ಯಾಯಾಧೀಶರಿಗೆ ಅವಹೇಳನ ಮಾಡಿದ ವಿಚಾರದಲ್ಲಿ ಬೆಂಗಳೂರು ಸೈಬರ್ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದರು. ಆ ಪೋಸ್ಟನ್ನು ಬೇರೆ ಬೇರೆ ಜಾಲತಾಣದಲ್ಲಿ ಷೇರ್ ಮಾಡಿದ್ದ ಕಾರಣಕ್ಕೆ ಮೊಹಮ್ಮದ್ ಶಾಫಿಕ್ ಎಂಬ ವ್ಯಕ್ತಿಯ ವಿರುದ್ಧವೂ ಕೇಸು ದಾಖಲಿಸಿದ್ದರು.

ಇದೀಗ ಒಟ್ಟು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯದ ಗೃಹ ಇಲಾಖೆ, ಸದ್ರಿ ಪ್ರಕರಣದ ತನಿಖೆಯನ್ನು ಸಿಇಡೈ ತಂಡಕ್ಕೆ ಒಪ್ಪಿಸಿದೆ. ಈ ಬಗ್ಗೆ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ದೃಢಪಡಿಸಿದ್ದು, ತನಿಖೆಗೆ ನಾವು ಸಹಕರಿಸುತ್ತೇವೆ. ಸಿಐಡಿ ಜೊತೆಗೆ ರಾಜ್ಯ ಗುಪ್ತಚರ ಇಲಾಖೆ ಮತ್ತು ಕೇಂದ್ರೀಯ ಗುಪ್ತಚರ ಇಲಾಖೆಯೂ ತನಿಖೆ ನಡೆಸಲಿದೆ. ಪ್ರಕರಣದಲ್ಲಿ ಗಲ್ಫ್ ರಾಷ್ಟ್ರದಲ್ಲಿ ಕುಳಿತುಕೊಂಡ ವ್ಯಕ್ತಿಗಳು ಈ ಪೇಜ್ ಹ್ಯಾಂಡಲ್ ಮಾಡುತ್ತಿರುವುದು ಕಂಡುಬಂದಿದೆ. ಇದರ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಿ, ಅಪರಾಧಿಗಳನ್ನು ಪತ್ತೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಕಳೆದ 2016ರಲ್ಲಿ ಮಂಗಳೂರು ಮುಸ್ಲಿಮ್ ಪೇಜ್ ಹೆಸರಲ್ಲಿ ಕಟೀಲು ದೇವರನ್ನು ನಿಂದಿಸಿ ಪೋಸ್ಟ್ ಮಾಡಲಾಗಿತ್ತು. ಆ ಸಂದರ್ಭದಲ್ಲಿ ಪದೇ ಪದೇ ಪೋಸ್ಟ್ ಹಾಕುತ್ತಿರುವುದು ಕಂಡುಬಂದಿತ್ತು. ಆನಂತರ ಪೊಲೀಸರು ಆ ಖಾತೆಯನ್ನು ಡಿಲೀಟ್ ಮಾಡುವ ಕೆಲಸ ಮಾಡಿದ್ದರು. ಆ ಸಂದರ್ಭದಲ್ಲಿಯೂ ಅದನ್ನು ಹ್ಯಾಂಡಲ್ ಮಾಡುತ್ತಿದ್ದ ವ್ಯಕ್ತಿಗಳು ಗಲ್ಫ್ ರಾಷ್ಟ್ರದಲ್ಲಿರುವುದು ಕಂಡುಬಂದಿತ್ತು. ಆದರೆ, ಯಾರು ನಿರ್ದಿಷ್ಟವಾಗಿ ಈ ಕೆಲಸ ಮಾಡುತ್ತಿದ್ದಾರೆ ಅನ್ನುವುದು ಪತ್ತೆಯಾಗಿರಲಿಲ್ಲ. ಆ ಘಟನೆಯ ಬಗ್ಗೆ ಅಂದಿನ ಪೊಲೀಸರು ನ್ಯಾಯಾಲಯಕ್ಕೆ ಅದೇ ರೀತಿ ಮಾಹಿತಿ ನೀಡಿದ್ದರು.
Mangalore Muslim Facebook page now investigated by CID, handling from Gulf country suspected. This Facebook page posted a celebration post for the Murder of Harsha who was killed in Shivamogga.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm