ಬ್ರೇಕಿಂಗ್ ನ್ಯೂಸ್
08-03-22 04:05 pm Mangalore Correspondent ಕ್ರೈಂ
ಮಂಗಳೂರು, ಮಾ.8: ಮಂಗಳೂರು ಮುಸ್ಲಿಮ್ಸ್ ಪೇಜ್ ಹೆಸರಲ್ಲಿ ದ್ವೇಷ ಹರಡುವ, ಕೋಮು ಸಾಮರಸ್ಯಕ್ಕೆ ಧಕ್ಕೆ ತರುವ ರೀತಿಯಲ್ಲಿ ಪೋಸ್ಟ್ ಹಾಕುತ್ತಿರುವ ಪ್ರಕರಣವನ್ನು ರಾಜ್ಯ ಸರಕಾರ ಸಿಐಡಿ ತನಿಖೆಗೆ ಒಪ್ಪಿಸಿದೆ.
ಇತ್ತೀಚೆಗೆ ಶಿವಮೊಗ್ಗದಲ್ಲಿ ಕೊಲೆಯಾದ ಹಿಂದು ಕಾರ್ಯಕರ್ತ ಹರ್ಷ ಪ್ರಕರಣದಲ್ಲಿ ಬೀದಿ ನಾಯಿ ಸತ್ತಿದ್ದಾನೆ ಎಂಬ ರೀತಿಯಲ್ಲಿ ಪೋಸ್ಟ್ ಹಾಕಿದ್ದು ಮತ್ತು ಅದರಲ್ಲಿ ಸಚಿವ ಈಶ್ವರಪ್ಪ ಅವರಿಗೆ ಕೊಲೆ ಪ್ರಕರಣದಲ್ಲಿ ಶಾಮೀಲಾತಿ ಇದೆಯೆಂಬ ರೀತಿಯಲ್ಲಿ ಪೋಸ್ಟ್ ಹಾಕಿದ್ದು ಕಂಡುಬಂದಿತ್ತು. ಈ ಪೋಸ್ಟ್ ವೈರಲ್ ಆಗಿದ್ದಲ್ಲದೆ, ಮಂಗಳೂರು ಪೊಲೀಸರು ಸುಮೊಟೊ ಪ್ರಕರಣ ದಾಖಲಿಸಿದ್ದರು.
ಇದೇ ಮಂಗಳೂರು ಮುಸ್ಲಿಮ್ಸ್ ಪೇಜ್ ಹೆಸರಲ್ಲಿ ಹಿಜಾಬ್ ಪ್ರಕರಣದಲ್ಲಿ ವಿಚಾರಣೆ ನಡೆಸುತ್ತಿರುವ ಹೈಕೋರ್ಟ್ ಜಡ್ಜ್ ವಿರುದ್ಧವೂ ಅವಹೇಳನಕಾರಿ ಪೋಸ್ಟ್ ಹಾಕಲಾಗಿತ್ತು. ಫೆ.12ರಂದು ಈ ಪೋಸ್ಟ್ ಹಾಕಲಾಗಿತ್ತು. ನ್ಯಾಯಾಧೀಶರಿಗೆ ಅವಹೇಳನ ಮಾಡಿದ ವಿಚಾರದಲ್ಲಿ ಬೆಂಗಳೂರು ಸೈಬರ್ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದರು. ಆ ಪೋಸ್ಟನ್ನು ಬೇರೆ ಬೇರೆ ಜಾಲತಾಣದಲ್ಲಿ ಷೇರ್ ಮಾಡಿದ್ದ ಕಾರಣಕ್ಕೆ ಮೊಹಮ್ಮದ್ ಶಾಫಿಕ್ ಎಂಬ ವ್ಯಕ್ತಿಯ ವಿರುದ್ಧವೂ ಕೇಸು ದಾಖಲಿಸಿದ್ದರು.

ಇದೀಗ ಒಟ್ಟು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯದ ಗೃಹ ಇಲಾಖೆ, ಸದ್ರಿ ಪ್ರಕರಣದ ತನಿಖೆಯನ್ನು ಸಿಇಡೈ ತಂಡಕ್ಕೆ ಒಪ್ಪಿಸಿದೆ. ಈ ಬಗ್ಗೆ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ದೃಢಪಡಿಸಿದ್ದು, ತನಿಖೆಗೆ ನಾವು ಸಹಕರಿಸುತ್ತೇವೆ. ಸಿಐಡಿ ಜೊತೆಗೆ ರಾಜ್ಯ ಗುಪ್ತಚರ ಇಲಾಖೆ ಮತ್ತು ಕೇಂದ್ರೀಯ ಗುಪ್ತಚರ ಇಲಾಖೆಯೂ ತನಿಖೆ ನಡೆಸಲಿದೆ. ಪ್ರಕರಣದಲ್ಲಿ ಗಲ್ಫ್ ರಾಷ್ಟ್ರದಲ್ಲಿ ಕುಳಿತುಕೊಂಡ ವ್ಯಕ್ತಿಗಳು ಈ ಪೇಜ್ ಹ್ಯಾಂಡಲ್ ಮಾಡುತ್ತಿರುವುದು ಕಂಡುಬಂದಿದೆ. ಇದರ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಿ, ಅಪರಾಧಿಗಳನ್ನು ಪತ್ತೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಕಳೆದ 2016ರಲ್ಲಿ ಮಂಗಳೂರು ಮುಸ್ಲಿಮ್ ಪೇಜ್ ಹೆಸರಲ್ಲಿ ಕಟೀಲು ದೇವರನ್ನು ನಿಂದಿಸಿ ಪೋಸ್ಟ್ ಮಾಡಲಾಗಿತ್ತು. ಆ ಸಂದರ್ಭದಲ್ಲಿ ಪದೇ ಪದೇ ಪೋಸ್ಟ್ ಹಾಕುತ್ತಿರುವುದು ಕಂಡುಬಂದಿತ್ತು. ಆನಂತರ ಪೊಲೀಸರು ಆ ಖಾತೆಯನ್ನು ಡಿಲೀಟ್ ಮಾಡುವ ಕೆಲಸ ಮಾಡಿದ್ದರು. ಆ ಸಂದರ್ಭದಲ್ಲಿಯೂ ಅದನ್ನು ಹ್ಯಾಂಡಲ್ ಮಾಡುತ್ತಿದ್ದ ವ್ಯಕ್ತಿಗಳು ಗಲ್ಫ್ ರಾಷ್ಟ್ರದಲ್ಲಿರುವುದು ಕಂಡುಬಂದಿತ್ತು. ಆದರೆ, ಯಾರು ನಿರ್ದಿಷ್ಟವಾಗಿ ಈ ಕೆಲಸ ಮಾಡುತ್ತಿದ್ದಾರೆ ಅನ್ನುವುದು ಪತ್ತೆಯಾಗಿರಲಿಲ್ಲ. ಆ ಘಟನೆಯ ಬಗ್ಗೆ ಅಂದಿನ ಪೊಲೀಸರು ನ್ಯಾಯಾಲಯಕ್ಕೆ ಅದೇ ರೀತಿ ಮಾಹಿತಿ ನೀಡಿದ್ದರು.
Mangalore Muslim Facebook page now investigated by CID, handling from Gulf country suspected. This Facebook page posted a celebration post for the Murder of Harsha who was killed in Shivamogga.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm