ಬ್ರೇಕಿಂಗ್ ನ್ಯೂಸ್
08-03-22 04:15 pm HK Desk ಕ್ರೈಂ
ಶಿವಮೊಗ್ಗ, ಮಾ.8: ರಾಜ್ಯದಲ್ಲಿ ಸಂಚಲನ ಎಬ್ಬಿಸಿದ ಹಿಂದು ಸಂಘಟನೆ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದಲ್ಲಿ ಬಂಧಿತರಾದ ಹತ್ತು ಮಂದಿ ಆರೋಪಿಗಳ ವಿರುದ್ಧ ದೇಶದ್ರೋಹದ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಯುಎಪಿಎ ಕಾಯ್ದೆಯಡಿ ಕೇಸು ದಾಖಲು ಮಾಡಿರುವುದರಿಂದ ಪ್ರಕರಣವನ್ನು ಸದ್ಯದಲ್ಲೇ ಎನ್ಐಎ ತನಿಖೆಗೆ ಒಪ್ಪಿಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಯುಎಪಿಎ ಕಾಯ್ದೆಯನ್ನು ಸಾಮಾನ್ಯವಾಗಿ ರಾಷ್ಟ್ರೀಯ ಭದ್ರತೆ ಮತ್ತು ಆಂತರಿಕ ಸಮಗ್ರತೆಗೆ ಧಕ್ಕೆಯಾದ ಪ್ರಕರಣಗಳಲ್ಲಿ ಮಾತ್ರ ಆರೋಪಿಗಳಿಗೆ ಅನ್ವಯ ಮಾಡಲಾಗುತ್ತದೆ. ಆದರೆ ಇಲ್ಲಿ ಒಂದು ಕೊಲೆ ಪ್ರಕರಣಕ್ಕೂ ಆರೋಪಿಗಳನ್ನು ದೇಶದ್ರೋಹ ಕಾಯ್ದೆಯಡಿ ಬಂಧಿಸಿದ್ದು ಆಕ್ಷೇಪಕ್ಕೂ ಕಾರಣವಾಗಿದೆ. ಹರ್ಷ ಕೊಲೆ ಪ್ರಕರಣದಲ್ಲಿ ದೊಡ್ಡ ಷಡ್ಯಂತ್ರ ನಡೆದಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ದೇಶದ್ರೋಹದ ಕಾಯ್ದೆ ಅಳವಡಿಸಲಾಗಿದೆ ಎನ್ನುವ ಮಾತು ಕೇಳಿಬರುತ್ತಿದೆ.

ಯುಎಪಿಎ ಕಾಯ್ದೆ ಪ್ರಕಾರ, ಆರೋಪಿಗಳನ್ನು ಪೊಲೀಸರು 30 ದಿನಗಳ ವರೆಗೆ ವಿಚಾರಣೆಗಾಗಿ ತಮ್ಮ ಕಸ್ಟಡಿಯಲ್ಲಿ ಇಟ್ಟುಕೊಳ್ಳಲು ಸಾಧ್ಯವಿರುತ್ತದೆ. ಅಲ್ಲದೆ, ಪ್ರಕರಣದಲ್ಲಿ ತನಿಖಾಧಿಕಾರಿಗೆ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲು 90 ದಿನಗಳ ಬದಲಿಗೆ 180 ದಿನಗಳ ವರೆಗೂ ಅವಕಾಶ ಇರುತ್ತದೆ. ಫೆ.20ರಂದು ರಾತ್ರಿ ನಡೆದ ಹರ್ಷ ಕೊಲೆ ಪ್ರಕರಣ ಶಿವಮೊಗ್ಗ ಜಿಲ್ಲೆಯಲ್ಲಿ ಕೋಮು ದ್ವೇಷದ ಅಹಿತಕರ ಘಟನೆ ನಡೆಯಲು ಕಾರಣವಾಗಿತ್ತು. ಇದೇ ವೇಳೆ, ಈ ಕೊಲೆಯ ಹಿಂದೆ ಪಿಎಫ್ಐ ಮತ್ತು ಎಸ್ಡಿಪಿಐ ಇದೆಯೆಂದೂ, ಅದನ್ನು ಬ್ಯಾನ್ ಮಾಡಬೇಕೆಂದು ಭಾರೀ ಆಗ್ರಹ ಕೇಳಿಬಂದಿತ್ತು.
ಈ ಮಧ್ಯೆ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ಪಿಎಫ್ಐ ಅಥವಾ ಎಸ್ಡಿಪಿಐ ನಿಷೇಧ ಮಾಡುವ ಯಾವುದೇ ಪ್ರಸ್ತಾಪ ಸರಕಾರದ ಮುಂದೆ ಇಲ್ಲ ಎಂದು ಹೇಳಿದ್ದಾರೆ. ಎರಡು ದಿನಗಳ ಹಿಂದೆ ಹರ್ಷನ ಮನೆಗೆ ಭೇಟಿ ನೀಡಿದ್ದ ಸಿಎಂ ಬೊಮ್ಮಾಯಿ, ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರದ ಚೆಕ್ ನೀಡಿದ್ದರು. ಕೊಲೆಯಾದ ಹರ್ಷ ಹಿಂದು ಪರ ಮತ್ತು ಹಿಜಾಬ್ ವಿರೋಧಿಸಿ ಪೋಸ್ಟ್ ಹಾಕುತ್ತಿದ್ದ. ಇದೇ ವಿಚಾರದಲ್ಲಿ ಆತನನ್ನು ಕೊಲೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಆದರೆ ಪೊಲೀಸ್ ತನಿಖೆಯಲ್ಲಿ ಕೊಲೆಗೆ ವೈಯಕ್ತಿಕ ದ್ವೇಷವೇ ಕಾರಣ ಎನ್ನುವ ಮಾಹಿತಿ ಹೊರಬಂದಿತ್ತು. ಇದೀಗ ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಎನ್ಐಎ ತನಿಖೆಗೆ ಒಪ್ಪಿಸುವ ಸಾಧ್ಯತೆ ಕಂಡುಬಂದಿದೆ.
Moreover, there are possibilities that once the local police investigation is completed, the government may turn the case over to the National Investigation Agency (NIA).
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm