ಬ್ರೇಕಿಂಗ್ ನ್ಯೂಸ್
11-03-22 01:26 pm Bengaluru Correspondent ಕ್ರೈಂ
ಬೆಂಗಳೂರು, ಮಾ.11: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರಾಕ್ಷಸಿ ಪ್ರವೃತ್ತಿಯ ಕಿರಾತಕ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ತನ್ನ ಮೂರು ತಿಂಗಳ ಗರ್ಭಿಣಿ ಪತ್ನಿಗೆ ಡೀಸೆಲ್ ಸುರಿದು ಕೊಲೆಗೆ ಯತ್ನಿಸಿದ್ದಲ್ಲದೆ, ಎರಡೂವರೆ ವರ್ಷದ ಪುಟ್ಟ ಮಗುವನ್ನು ಕಚ್ಚಿ ವಿಕೃತಿ ಮೆರೆದಿದ್ದಾನೆ.
ಗಾಯಾಳು ಪತ್ನಿ ಮೀನಾ(23) ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಈಕೆ ಬಾಬು (37) ಎಂಬಾತನನ್ನ ಎರಡನೇ ಮದುವೆ ಆಗಿದ್ದು ಆತನೇ ಈ ಕೃತ್ಯ ಎಸಗಿರುವ ಕಿರಾತಕ.
ಏಳು ವರ್ಷದ ಹಿಂದೆ ವಿಜಯಕಾಂತ ಎಂಬವರನ್ನ ವರಿಸಿದ್ದ ಮೀನಾಗೆ ಮೂರು ಜನ ಹೆಣ್ಣು ಮಕ್ಕಳಿದ್ದರು. ಆನಂತರ ಮೂರು ವರ್ಷದ ಹಿಂದೆ ವಿಜಯಕಾಂತ್ ತೀರಿಹೋಗಿದ್ದರು. ಆನಂತರ ಮೀನಾಗೆ ಬಾಬು ಎಂಬಾತನ ಪರಿಚಯವಾಗಿದ್ದು ಮದುವೆ ಆಗ್ತಿನಿ ಎಂದು ಮುಂದೆ ಬಂದಿದ್ದ. ಇಬ್ಬರೂ ಮದುವೆ ಆಗಿ ಬೈಯಪ್ಪನಹಳ್ಳಿಯಲ್ಲಿ ಒಂದು ವರ್ಷದಿಂದ ವಾಸವಿದ್ದರು. ಈ ನಡುವೆ ಬಾಬು ಕುಡಿತದ ಚಟ ಹೊಂದಿದ್ದು ಮೀನಾ ಕೂಲಿ ಮಾಡಿ ಕೂಡಿಟ್ಟ ಹಣವನ್ನು ಕುಡಿದು ಹಾಳು ಮಾಡ್ತಿದ್ದ.

ಇದೇ ವಿಚಾರದಲ್ಲಿ ಜಗಳ ನಡೆದಿದ್ದು ಇನ್ನು ದುಡ್ಡು ಕೇಳಿದ್ರೆ ಮೈಮೇಲೆ ಡೀಸೆಲ್ ಸುರಿದು ಸತ್ತೋಗುತ್ತೇನೆಂದಿದ್ದಳು ಮೀನಾ. ನೀನ್ಯಾಕೆ ಸಾಯ್ತೀಯಾ, ನಾನೇ ನಿನ್ನ ಸಾಯಿಸ್ತೇನೆಂದು ಸ್ಟೌನಿಂದ ಡೀಸೆಲ್ ಸುರಿದು ಗಂಡನೇ ಸ್ವತಃ ಬೆಂಕಿ ಹಚ್ಚಿದ್ದಾನೆ. ಮೂರು ತಿಂಗಳ ಗರ್ಭಿಣಿ ಆಗಿರುವ ಮೀನಾ ಅರೆಬರೆ ಸುಟ್ಟು ಹೋಗಿದ್ದಾಳೆ. ಇದೇ ವೇಳೆ ಮೀನಾ ಮೊದಲ ಪತಿಗೆ ಜನಿಸಿದ್ದ ಪುಟ್ಟ ಹೆಣ್ಣು ಮಗುವನ್ನು ಕಚ್ಚಿ ವಿಕೃತಿ ಮೆರೆದಿದ್ದಾನೆ. ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿದ್ದು ಪೊಲೀಸರು ಆರೋಪಿ ಬಾಬುವನ್ನು ಬಂಧಿಸಿದ್ದಾರೆ.
Bangalore Man sets pregnant wife and three year old daughter on fire when she refuses to give money for drinking. A case has been registered and husband has been arrested by City Police.
03-08-26 03:23 pm
HK News Staffer
ಡಿಕೆಶಿ ಸರ್ಕಾರದ ಮೆಗಾ ಸಂಪುಟ ವಿಸ್ತರಣೆ ; ಸಂಜೆ 4ಕ್...
03-08-26 01:46 pm
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
03-08-26 01:48 pm
HK News Staffer
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm