ಬ್ರೇಕಿಂಗ್ ನ್ಯೂಸ್
11-03-22 01:26 pm Bengaluru Correspondent ಕ್ರೈಂ
ಬೆಂಗಳೂರು, ಮಾ.11: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರಾಕ್ಷಸಿ ಪ್ರವೃತ್ತಿಯ ಕಿರಾತಕ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ತನ್ನ ಮೂರು ತಿಂಗಳ ಗರ್ಭಿಣಿ ಪತ್ನಿಗೆ ಡೀಸೆಲ್ ಸುರಿದು ಕೊಲೆಗೆ ಯತ್ನಿಸಿದ್ದಲ್ಲದೆ, ಎರಡೂವರೆ ವರ್ಷದ ಪುಟ್ಟ ಮಗುವನ್ನು ಕಚ್ಚಿ ವಿಕೃತಿ ಮೆರೆದಿದ್ದಾನೆ.
ಗಾಯಾಳು ಪತ್ನಿ ಮೀನಾ(23) ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಈಕೆ ಬಾಬು (37) ಎಂಬಾತನನ್ನ ಎರಡನೇ ಮದುವೆ ಆಗಿದ್ದು ಆತನೇ ಈ ಕೃತ್ಯ ಎಸಗಿರುವ ಕಿರಾತಕ.
ಏಳು ವರ್ಷದ ಹಿಂದೆ ವಿಜಯಕಾಂತ ಎಂಬವರನ್ನ ವರಿಸಿದ್ದ ಮೀನಾಗೆ ಮೂರು ಜನ ಹೆಣ್ಣು ಮಕ್ಕಳಿದ್ದರು. ಆನಂತರ ಮೂರು ವರ್ಷದ ಹಿಂದೆ ವಿಜಯಕಾಂತ್ ತೀರಿಹೋಗಿದ್ದರು. ಆನಂತರ ಮೀನಾಗೆ ಬಾಬು ಎಂಬಾತನ ಪರಿಚಯವಾಗಿದ್ದು ಮದುವೆ ಆಗ್ತಿನಿ ಎಂದು ಮುಂದೆ ಬಂದಿದ್ದ. ಇಬ್ಬರೂ ಮದುವೆ ಆಗಿ ಬೈಯಪ್ಪನಹಳ್ಳಿಯಲ್ಲಿ ಒಂದು ವರ್ಷದಿಂದ ವಾಸವಿದ್ದರು. ಈ ನಡುವೆ ಬಾಬು ಕುಡಿತದ ಚಟ ಹೊಂದಿದ್ದು ಮೀನಾ ಕೂಲಿ ಮಾಡಿ ಕೂಡಿಟ್ಟ ಹಣವನ್ನು ಕುಡಿದು ಹಾಳು ಮಾಡ್ತಿದ್ದ.

ಇದೇ ವಿಚಾರದಲ್ಲಿ ಜಗಳ ನಡೆದಿದ್ದು ಇನ್ನು ದುಡ್ಡು ಕೇಳಿದ್ರೆ ಮೈಮೇಲೆ ಡೀಸೆಲ್ ಸುರಿದು ಸತ್ತೋಗುತ್ತೇನೆಂದಿದ್ದಳು ಮೀನಾ. ನೀನ್ಯಾಕೆ ಸಾಯ್ತೀಯಾ, ನಾನೇ ನಿನ್ನ ಸಾಯಿಸ್ತೇನೆಂದು ಸ್ಟೌನಿಂದ ಡೀಸೆಲ್ ಸುರಿದು ಗಂಡನೇ ಸ್ವತಃ ಬೆಂಕಿ ಹಚ್ಚಿದ್ದಾನೆ. ಮೂರು ತಿಂಗಳ ಗರ್ಭಿಣಿ ಆಗಿರುವ ಮೀನಾ ಅರೆಬರೆ ಸುಟ್ಟು ಹೋಗಿದ್ದಾಳೆ. ಇದೇ ವೇಳೆ ಮೀನಾ ಮೊದಲ ಪತಿಗೆ ಜನಿಸಿದ್ದ ಪುಟ್ಟ ಹೆಣ್ಣು ಮಗುವನ್ನು ಕಚ್ಚಿ ವಿಕೃತಿ ಮೆರೆದಿದ್ದಾನೆ. ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿದ್ದು ಪೊಲೀಸರು ಆರೋಪಿ ಬಾಬುವನ್ನು ಬಂಧಿಸಿದ್ದಾರೆ.
Bangalore Man sets pregnant wife and three year old daughter on fire when she refuses to give money for drinking. A case has been registered and husband has been arrested by City Police.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm