ಬ್ರೇಕಿಂಗ್ ನ್ಯೂಸ್
11-03-22 07:43 pm Bengaluru Correspondent ಕ್ರೈಂ
ಬೆಂಗಳೂರು, ಮಾ.11: ಹಾಡಹಗಲೇ ಚಿನ್ನದ ವ್ಯಾಪಾರಿಯನ್ನ ಅಡ್ಡಗಟ್ಟಿ ಕಾರು ಸಹಿತ ಒಂದು ಕೋಟಿಗೂ ಮಿಕ್ಕಿದ ನಗದು ಹಣವನ್ನು ದರೋಡೆಗೈದ ಘಟನೆ ನೆಲಮಂಗಲ ಬಳಿಯ ತುಮಕೂರು ರಸ್ತೆಯಲ್ಲಿ ಶುಕ್ರವಾರ ನಡೆದಿದೆ.
ಇನೋವಾ ಕಾರಿನಲ್ಲಿ ಬಂದಿದ್ದ 7-8 ಮಂದಿಯಿದ್ದ ದರೋಡೆಕೋರರು ಕೃತ್ಯ ನಡೆಸಿದ್ದು ಬೆದರಿಸಿ ಹಣದ ಬ್ಯಾಗ್ ಪಡೆದು ಕಾರು ಸಹಿತ ತಂಡ ಪರಾರಿಯಾಗಿದೆ. ರಾಷ್ಟ್ರೀಯ ಹೆದ್ದಾರಿ 48ರ ತುಮಕೂರು ರಸ್ತೆಯ ಮಾದಾವರ ಎಂಬಲ್ಲಿ ನಾಡ್ಗೀರ್ ಕಾಲೇಜು ಬಳಿ ಘಟನೆ ನಡೆದಿದೆ. ಉದ್ಯಮಿಗಳಾದ ಯೋಗೇಶ್ ಮತ್ತು ಜೋಸೆಫ್ ಪಾಲುದಾರಿಕೆಯಲ್ಲಿ ಜುವೆಲ್ಲರಿ ಬಿಸಿನೆಸ್ ನಡೆಸುತ್ತಿದ್ದು ಹುಬ್ಬಳ್ಳಿಯಿಂದ ತಮಿಳುನಾಡಿನ ನಾಗರ ಕೋಯಿಲ್ ಗೆ ಬ್ರೀಝಾ ಕಾರಿನಲ್ಲಿ ನಗದು ಹಣ ಇರಿಸಿಕೊಂಡು ತೆರಳುತ್ತಿದ್ದರು. ಕಾರಿನಲ್ಲಿ ಯೋಗೇಶ್, ದಿನೇಶ್, ಫ್ರಾಂಕ್ಲಿನ್, ಮಣಿಕಂಠನ್ ಸತ್ಯವೇಲು ಎಂಬವರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.
ಈ ವೇಳೆ, ಇನೋವಾ ಕಾರಿನಲ್ಲಿ ಬಂದ ಏಳೆಂಟು ಜನರಿದ್ದ ತಂಡ ಕಾರನ್ನು ಅಡ್ಡಗಟ್ಟಿದ್ದು ಯೋಗೇಶ್ ಮೇಲೆ ರಾಡಿನಿಂದ ಹಲ್ಲೆ ನಡೆಸಿದ್ದಾರೆ. ಆನಂತರ ಕಾರಿನಲ್ಲಿದ್ದವರನ್ನು ಇಳಿಸಿ, ಕಾರು ಸಹಿತ ಎಸ್ಕೇಪ್ ಆಗಿದ್ದಾರೆ. ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಆಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಕಾರಿನಲ್ಲಿ ಒಂದು ಕೋಟಿಗೂ ಹೆಚ್ಚು ಹಣ ಇತ್ತೆಂದು ಹೇಳಲಾಗುತ್ತಿದೆ. ಇವರು ಭಾರೀ ಪ್ರಮಾಣದಲ್ಲಿ ನಗದು ಹಣವನ್ನು ಒಯ್ಯುತ್ತಿರುವ ವಿಚಾರ ಗೊತ್ತಿದ್ದವರೇ ಈ ಕೃತ್ಯ ಎಸಗಿರುವ ಶಂಕೆಯಿದೆ. ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಖೆಡ್ಡಾ ತೋಡಿದ್ದಾರೆ.
Bangalore Robbers stop car rob crores of gold and flee at Nelamangala Tumakuru Highway.
03-08-26 03:23 pm
HK News Staffer
ಡಿಕೆಶಿ ಸರ್ಕಾರದ ಮೆಗಾ ಸಂಪುಟ ವಿಸ್ತರಣೆ ; ಸಂಜೆ 4ಕ್...
03-08-26 01:46 pm
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
03-08-26 01:48 pm
HK News Staffer
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm