ಬ್ರೇಕಿಂಗ್ ನ್ಯೂಸ್
11-03-22 07:43 pm Bengaluru Correspondent ಕ್ರೈಂ
ಬೆಂಗಳೂರು, ಮಾ.11: ಹಾಡಹಗಲೇ ಚಿನ್ನದ ವ್ಯಾಪಾರಿಯನ್ನ ಅಡ್ಡಗಟ್ಟಿ ಕಾರು ಸಹಿತ ಒಂದು ಕೋಟಿಗೂ ಮಿಕ್ಕಿದ ನಗದು ಹಣವನ್ನು ದರೋಡೆಗೈದ ಘಟನೆ ನೆಲಮಂಗಲ ಬಳಿಯ ತುಮಕೂರು ರಸ್ತೆಯಲ್ಲಿ ಶುಕ್ರವಾರ ನಡೆದಿದೆ.
ಇನೋವಾ ಕಾರಿನಲ್ಲಿ ಬಂದಿದ್ದ 7-8 ಮಂದಿಯಿದ್ದ ದರೋಡೆಕೋರರು ಕೃತ್ಯ ನಡೆಸಿದ್ದು ಬೆದರಿಸಿ ಹಣದ ಬ್ಯಾಗ್ ಪಡೆದು ಕಾರು ಸಹಿತ ತಂಡ ಪರಾರಿಯಾಗಿದೆ. ರಾಷ್ಟ್ರೀಯ ಹೆದ್ದಾರಿ 48ರ ತುಮಕೂರು ರಸ್ತೆಯ ಮಾದಾವರ ಎಂಬಲ್ಲಿ ನಾಡ್ಗೀರ್ ಕಾಲೇಜು ಬಳಿ ಘಟನೆ ನಡೆದಿದೆ. ಉದ್ಯಮಿಗಳಾದ ಯೋಗೇಶ್ ಮತ್ತು ಜೋಸೆಫ್ ಪಾಲುದಾರಿಕೆಯಲ್ಲಿ ಜುವೆಲ್ಲರಿ ಬಿಸಿನೆಸ್ ನಡೆಸುತ್ತಿದ್ದು ಹುಬ್ಬಳ್ಳಿಯಿಂದ ತಮಿಳುನಾಡಿನ ನಾಗರ ಕೋಯಿಲ್ ಗೆ ಬ್ರೀಝಾ ಕಾರಿನಲ್ಲಿ ನಗದು ಹಣ ಇರಿಸಿಕೊಂಡು ತೆರಳುತ್ತಿದ್ದರು. ಕಾರಿನಲ್ಲಿ ಯೋಗೇಶ್, ದಿನೇಶ್, ಫ್ರಾಂಕ್ಲಿನ್, ಮಣಿಕಂಠನ್ ಸತ್ಯವೇಲು ಎಂಬವರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.
ಈ ವೇಳೆ, ಇನೋವಾ ಕಾರಿನಲ್ಲಿ ಬಂದ ಏಳೆಂಟು ಜನರಿದ್ದ ತಂಡ ಕಾರನ್ನು ಅಡ್ಡಗಟ್ಟಿದ್ದು ಯೋಗೇಶ್ ಮೇಲೆ ರಾಡಿನಿಂದ ಹಲ್ಲೆ ನಡೆಸಿದ್ದಾರೆ. ಆನಂತರ ಕಾರಿನಲ್ಲಿದ್ದವರನ್ನು ಇಳಿಸಿ, ಕಾರು ಸಹಿತ ಎಸ್ಕೇಪ್ ಆಗಿದ್ದಾರೆ. ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಆಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಕಾರಿನಲ್ಲಿ ಒಂದು ಕೋಟಿಗೂ ಹೆಚ್ಚು ಹಣ ಇತ್ತೆಂದು ಹೇಳಲಾಗುತ್ತಿದೆ. ಇವರು ಭಾರೀ ಪ್ರಮಾಣದಲ್ಲಿ ನಗದು ಹಣವನ್ನು ಒಯ್ಯುತ್ತಿರುವ ವಿಚಾರ ಗೊತ್ತಿದ್ದವರೇ ಈ ಕೃತ್ಯ ಎಸಗಿರುವ ಶಂಕೆಯಿದೆ. ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಖೆಡ್ಡಾ ತೋಡಿದ್ದಾರೆ.
Bangalore Robbers stop car rob crores of gold and flee at Nelamangala Tumakuru Highway.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm