ಬ್ರೇಕಿಂಗ್ ನ್ಯೂಸ್
11-03-22 07:43 pm Bengaluru Correspondent ಕ್ರೈಂ
ಬೆಂಗಳೂರು, ಮಾ.11: ಹಾಡಹಗಲೇ ಚಿನ್ನದ ವ್ಯಾಪಾರಿಯನ್ನ ಅಡ್ಡಗಟ್ಟಿ ಕಾರು ಸಹಿತ ಒಂದು ಕೋಟಿಗೂ ಮಿಕ್ಕಿದ ನಗದು ಹಣವನ್ನು ದರೋಡೆಗೈದ ಘಟನೆ ನೆಲಮಂಗಲ ಬಳಿಯ ತುಮಕೂರು ರಸ್ತೆಯಲ್ಲಿ ಶುಕ್ರವಾರ ನಡೆದಿದೆ.
ಇನೋವಾ ಕಾರಿನಲ್ಲಿ ಬಂದಿದ್ದ 7-8 ಮಂದಿಯಿದ್ದ ದರೋಡೆಕೋರರು ಕೃತ್ಯ ನಡೆಸಿದ್ದು ಬೆದರಿಸಿ ಹಣದ ಬ್ಯಾಗ್ ಪಡೆದು ಕಾರು ಸಹಿತ ತಂಡ ಪರಾರಿಯಾಗಿದೆ. ರಾಷ್ಟ್ರೀಯ ಹೆದ್ದಾರಿ 48ರ ತುಮಕೂರು ರಸ್ತೆಯ ಮಾದಾವರ ಎಂಬಲ್ಲಿ ನಾಡ್ಗೀರ್ ಕಾಲೇಜು ಬಳಿ ಘಟನೆ ನಡೆದಿದೆ. ಉದ್ಯಮಿಗಳಾದ ಯೋಗೇಶ್ ಮತ್ತು ಜೋಸೆಫ್ ಪಾಲುದಾರಿಕೆಯಲ್ಲಿ ಜುವೆಲ್ಲರಿ ಬಿಸಿನೆಸ್ ನಡೆಸುತ್ತಿದ್ದು ಹುಬ್ಬಳ್ಳಿಯಿಂದ ತಮಿಳುನಾಡಿನ ನಾಗರ ಕೋಯಿಲ್ ಗೆ ಬ್ರೀಝಾ ಕಾರಿನಲ್ಲಿ ನಗದು ಹಣ ಇರಿಸಿಕೊಂಡು ತೆರಳುತ್ತಿದ್ದರು. ಕಾರಿನಲ್ಲಿ ಯೋಗೇಶ್, ದಿನೇಶ್, ಫ್ರಾಂಕ್ಲಿನ್, ಮಣಿಕಂಠನ್ ಸತ್ಯವೇಲು ಎಂಬವರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.
ಈ ವೇಳೆ, ಇನೋವಾ ಕಾರಿನಲ್ಲಿ ಬಂದ ಏಳೆಂಟು ಜನರಿದ್ದ ತಂಡ ಕಾರನ್ನು ಅಡ್ಡಗಟ್ಟಿದ್ದು ಯೋಗೇಶ್ ಮೇಲೆ ರಾಡಿನಿಂದ ಹಲ್ಲೆ ನಡೆಸಿದ್ದಾರೆ. ಆನಂತರ ಕಾರಿನಲ್ಲಿದ್ದವರನ್ನು ಇಳಿಸಿ, ಕಾರು ಸಹಿತ ಎಸ್ಕೇಪ್ ಆಗಿದ್ದಾರೆ. ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಆಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಕಾರಿನಲ್ಲಿ ಒಂದು ಕೋಟಿಗೂ ಹೆಚ್ಚು ಹಣ ಇತ್ತೆಂದು ಹೇಳಲಾಗುತ್ತಿದೆ. ಇವರು ಭಾರೀ ಪ್ರಮಾಣದಲ್ಲಿ ನಗದು ಹಣವನ್ನು ಒಯ್ಯುತ್ತಿರುವ ವಿಚಾರ ಗೊತ್ತಿದ್ದವರೇ ಈ ಕೃತ್ಯ ಎಸಗಿರುವ ಶಂಕೆಯಿದೆ. ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಖೆಡ್ಡಾ ತೋಡಿದ್ದಾರೆ.
Bangalore Robbers stop car rob crores of gold and flee at Nelamangala Tumakuru Highway.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm