ಬ್ರೇಕಿಂಗ್ ನ್ಯೂಸ್
11-03-22 07:43 pm Bengaluru Correspondent ಕ್ರೈಂ
ಬೆಂಗಳೂರು, ಮಾ.11: ಹಾಡಹಗಲೇ ಚಿನ್ನದ ವ್ಯಾಪಾರಿಯನ್ನ ಅಡ್ಡಗಟ್ಟಿ ಕಾರು ಸಹಿತ ಒಂದು ಕೋಟಿಗೂ ಮಿಕ್ಕಿದ ನಗದು ಹಣವನ್ನು ದರೋಡೆಗೈದ ಘಟನೆ ನೆಲಮಂಗಲ ಬಳಿಯ ತುಮಕೂರು ರಸ್ತೆಯಲ್ಲಿ ಶುಕ್ರವಾರ ನಡೆದಿದೆ.
ಇನೋವಾ ಕಾರಿನಲ್ಲಿ ಬಂದಿದ್ದ 7-8 ಮಂದಿಯಿದ್ದ ದರೋಡೆಕೋರರು ಕೃತ್ಯ ನಡೆಸಿದ್ದು ಬೆದರಿಸಿ ಹಣದ ಬ್ಯಾಗ್ ಪಡೆದು ಕಾರು ಸಹಿತ ತಂಡ ಪರಾರಿಯಾಗಿದೆ. ರಾಷ್ಟ್ರೀಯ ಹೆದ್ದಾರಿ 48ರ ತುಮಕೂರು ರಸ್ತೆಯ ಮಾದಾವರ ಎಂಬಲ್ಲಿ ನಾಡ್ಗೀರ್ ಕಾಲೇಜು ಬಳಿ ಘಟನೆ ನಡೆದಿದೆ. ಉದ್ಯಮಿಗಳಾದ ಯೋಗೇಶ್ ಮತ್ತು ಜೋಸೆಫ್ ಪಾಲುದಾರಿಕೆಯಲ್ಲಿ ಜುವೆಲ್ಲರಿ ಬಿಸಿನೆಸ್ ನಡೆಸುತ್ತಿದ್ದು ಹುಬ್ಬಳ್ಳಿಯಿಂದ ತಮಿಳುನಾಡಿನ ನಾಗರ ಕೋಯಿಲ್ ಗೆ ಬ್ರೀಝಾ ಕಾರಿನಲ್ಲಿ ನಗದು ಹಣ ಇರಿಸಿಕೊಂಡು ತೆರಳುತ್ತಿದ್ದರು. ಕಾರಿನಲ್ಲಿ ಯೋಗೇಶ್, ದಿನೇಶ್, ಫ್ರಾಂಕ್ಲಿನ್, ಮಣಿಕಂಠನ್ ಸತ್ಯವೇಲು ಎಂಬವರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.
ಈ ವೇಳೆ, ಇನೋವಾ ಕಾರಿನಲ್ಲಿ ಬಂದ ಏಳೆಂಟು ಜನರಿದ್ದ ತಂಡ ಕಾರನ್ನು ಅಡ್ಡಗಟ್ಟಿದ್ದು ಯೋಗೇಶ್ ಮೇಲೆ ರಾಡಿನಿಂದ ಹಲ್ಲೆ ನಡೆಸಿದ್ದಾರೆ. ಆನಂತರ ಕಾರಿನಲ್ಲಿದ್ದವರನ್ನು ಇಳಿಸಿ, ಕಾರು ಸಹಿತ ಎಸ್ಕೇಪ್ ಆಗಿದ್ದಾರೆ. ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಆಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಕಾರಿನಲ್ಲಿ ಒಂದು ಕೋಟಿಗೂ ಹೆಚ್ಚು ಹಣ ಇತ್ತೆಂದು ಹೇಳಲಾಗುತ್ತಿದೆ. ಇವರು ಭಾರೀ ಪ್ರಮಾಣದಲ್ಲಿ ನಗದು ಹಣವನ್ನು ಒಯ್ಯುತ್ತಿರುವ ವಿಚಾರ ಗೊತ್ತಿದ್ದವರೇ ಈ ಕೃತ್ಯ ಎಸಗಿರುವ ಶಂಕೆಯಿದೆ. ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಖೆಡ್ಡಾ ತೋಡಿದ್ದಾರೆ.
Bangalore Robbers stop car rob crores of gold and flee at Nelamangala Tumakuru Highway.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm