ಬ್ರೇಕಿಂಗ್ ನ್ಯೂಸ್
12-03-22 02:36 pm Mangalore Correspondent ಕ್ರೈಂ
ಮಂಗಳೂರು, ಮಾ.12 : ಬೈಕ್ ಸ್ಟಂಟ್ ಮತ್ತು ವೀಲಿಂಗ್ ಮಾಡಿ, ಅದರ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುತ್ತಿದ್ದ ಬಗ್ಗೆ ಮಂಗಳೂರಿನ ಟ್ರಾಫಿಕ್ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದು ಎಂಟು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
ಮಂಗಳೂರು ನಗರ ಹೊರವಲಯ ಹಾಗೂ ಕೆಲವೊಂದು ಜನಸಂಚಾರ ಕಡಿಮೆ ಇರುವ ಪ್ರದೇಶಗಳಲ್ಲಿ ವೀಲಿಂಗ್, ಸ್ಟಂಟ್ ಮಾಡುವ ವಿಡಿಯೋ ರೆಕಾರ್ಡ್ ಮಾಡಿ ಇನ್ಸ್ ಟಾ ಗ್ರಾಮ್ ತಾಣದಲ್ಲಿ ಅಪ್ಲೋಡ್ ಮಾಡಲಾಗುತ್ತಿತ್ತು. ಈ ವಿಡಿಯೋ ವೈರಲ್ ಆಗಿದ್ದು ಯುವಕರು ಅಪಾಯಕಾರಿ ರೀತಿಯಲ್ಲಿ ನಡು ರಸ್ತೆಯಲ್ಲೇ ಸ್ಟಂಟ್ ನಡೆಸುತ್ತಿದ್ದ ಬಗ್ಗೆ ಸಾರ್ವಜನಿಕರು ಪೊಲೀಸರ ಗಮನ ಸೆಳೆದಿದ್ದರು.

ಜಾಲತಾಣದ ಬಗ್ಗೆ ನಿಗಾ ಇಡುವ ತಂಡದ ಮೂಲಕ ವಿಡಿಯೋ ಹಾಕಿದವರನ್ನು ಮತ್ತು ರೆಕಾರ್ಡ್ ನಡೆಸಿರುವ ಸ್ಥಳವನ್ನು ಪತ್ತೆಹಚ್ಚಿ ಸಂಬಂಧಪಟ್ಟ ವ್ಯಕ್ತಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೊಹಮ್ಮದ್ ಅನಾಜ್, ಕಿಶನ್ ಕುಮಾರ್, ತೌಸಿಫ್ ಮೊಹಮ್ಮದ್, ಮೊಹಮ್ಮದ್ ಸ್ವಾಲಿ, ಮೊಹಮ್ಮದ್, ಅಬ್ದುಲ್ ಜಬ್ಬಾರ್ ಸಿದ್ದಿಕ್, ಇಲ್ಯಾಸ್ ಬಂಧಿತರಾಗಿದ್ದು ಇನ್ನೊಬ್ಬ ಆರೋಪಿ ಅಪ್ರಾಪ್ತನಾಗಿದ್ದಾನೆ.

ಇವರ ಮೇಲೆ ನಾಲ್ಕು ಪ್ರತ್ಯೇಕ ಎಫ್ಐಆರ್ ದಾಖಲಿಸಿದ್ದು ಬಂಧಿತರ ಡ್ರೈವಿಂಗ್ ಲೈಸೆನ್ಸ್ ರದ್ದುಪಡಿಸಲು ಆರ್ ಟಿಓ ಅಧಿಕಾರಿಗಳಿಗೆ ಬರೆಯುವುದಾಗಿ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ. ಆರೋಪಿಗಳಿಂದ ಐದು ಬೈಕ್ ಗಳನ್ನು ವಶಕ್ಕೆ ಪಡೆಯಲಾಗಿದೆ. ಘಟನೆ ಬಗ್ಗೆ ತನಿಖೆ ನಡೆಸಲು ಡಿಸಿಪಿ ಅಪರಾಧ ವಿಭಾಗದ ದಿನೇಶ್ ಕುಮಾರ್ ಮತ್ತು ಎಸಿಪಿ ನಟರಾಜ್ ನೇತೃತ್ವದಲ್ಲಿ ತನಿಖೆ ನಡೆಸಲಾಗಿತ್ತು. ಈ ಬಗ್ಗೆ ಮಾ.10 ಮತ್ತು 11 ರಂದು ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು.
The city (south) traffic station personnel have registered four cases against eight people who have been accused of performing motorbike stunts on the public road. Five vehicles were reportedly used to perform stunts.It is said that a person named Illyas Jeeyan had travelled in a motorbike without registration number on roads in Ullal region with two others. He had performed wheeling stunts on the road in this fashion from March 1 to 6. He was found riding his motorbike perilously, doing wheeling stunts and riding the two-wheeler in a criss-cross manner, which endangered other vehicle riders and pedestrians.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm