ಬ್ರೇಕಿಂಗ್ ನ್ಯೂಸ್
14-03-22 06:56 pm Bengaluru Correspondent ಕ್ರೈಂ
ಬೆಂಗಳೂರು, ಮಾ.14 : ಇಡೀ ರಾಜ್ಯದಲ್ಲೇ ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣೆ ಅಂದರೆ ಅತಿ ಹೆಚ್ಚು ಕಮಾಯಿ ಆಗುವ ಠಾಣೆ. ಅಲ್ಲಿಗೆ ಎಸ್ಐ, ಇನ್ಸ್ ಪೆಕ್ಟರ್ ಆಗಿ ಪೋಸ್ಟಿಂಗ್ ಮಾಡಿಕೊಳ್ಳಲು ಲಕ್ಷಾಂತರ ಪೇಮೆಂಟ್ ಮಾಡಿಕೊಂಡೇ ಬರುತ್ತಾರೆ. ಆದರೆ ಆ ಠಾಣೆಯಿಂದ ವರ್ಗಾವಣೆಗೊಂಡಿದ್ದ ಎಎಸ್ಐ ಒಬ್ಬ 11 ತಿಂಗಳಾದರೂ ಕೆಲಸಕ್ಕೆ ಹಾಜರಾಗದೆ, ಅಲ್ಲಿಯೇ ಇದ್ದುಕೊಂಡು ವಸೂಲಿ ಬಾಜಿ ಮಾಡಿಕೊಂಡಿದ್ದ ಪ್ರಕರಣ ಬೆಳಕಿಗೆ ಬಂದಿದೆ.
ಉಪ್ಪಾರಪೇಟೆ ಠಾಣೆಯಲ್ಲಿ ಹಲವು ವರ್ಷಗಳ ಕಾಲ ಕೆಲಸ ಮಾಡಿದ್ದ ಎಎಸ್ಐ ಶ್ರೀನಿವಾಸ್ ಶೆಟ್ಟಿ ಎಂಬವರನ್ನು ಕಳೆದ ವರ್ಷದ ಆರಂಭದಲ್ಲಿ ವಿಧಾನಸೌಧ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು. 11 ತಿಂಗಳು ಕಳೆದರೂ ವಿಧಾನಸೌಧ ಠಾಣೆಗೆ ಕೆಲಸಕ್ಕೆ ಹಾಜರಾಗಿರಲಿಲ್ಲ. ಅದರ ಬದಲು ಚೆನ್ನಾಗಿ ಕಮಾಯಿ ಬರುತ್ತಿದ್ದ ಉಪ್ಪಾರಪೇಟೆ ಠಾಣೆಯಲ್ಲೇ ಹಿರಿಯ ಅಧಿಕಾರಿಗಳ ಆದೇಶ ಉಲ್ಲಂಘಿಸಿ ಉಳಿದುಕೊಂಡಿದ್ದಲ್ಲದೆ, ಅಪರಾಧಿಗಳಿಂದಲೇ ವಸೂಲಿ ಬಾಜಿ ಮಾಡುತ್ತಿದ್ದರು ಎನ್ನುವ ಮಾಹಿತಿ ಲಭಿಸಿದೆ.
ವಾರಕ್ಕೆ ಒಂದು ಬಾರಿ ಅಥವಾ ಹದಿನೈದು ದಿನಕ್ಕೊಮ್ಮೆ ಉಪ್ಪಾರಪೇಟೆ ಠಾಣೆಗೆ ಬರುತ್ತಿದ್ದ ಶ್ರೀನಿವಾಸ ಶೆಟ್ಟಿ, ಅಪರಾಧಗಳಲ್ಲಿ ಭಾಗಿಯಾಗಿರುವ ವ್ಯಕ್ತಿಗಳನ್ನು ಕರೆತಂದು ಎಫ್ಐಆರ್ ದಾಖಲಿಸದೆ ಹಣ ಪಡೆದು ಅವರನ್ನು ಬಿಡುತ್ತಿದ್ದರು. ತಮ್ಮ ಕಾನೂನುಬಾಹಿರ ವ್ಯವಹಾರವನ್ನು ನಡೆಸಲು ಉಪ್ಪಾರ ಪೇಟೆ ಪೊಲೀಸ್ ಠಾಣೆಯನ್ನು ಬಳಸಿಕೊಂಡಿದ್ದರು ಎಂಬ ಆರೋಪ ಕೇಳಿಬಂದಿದೆ.
ಶ್ರೀನಿವಾಸ ಶೆಟ್ಟಿ ಮಾಡುತ್ತಿದ್ದ ಕಾನೂನು ವಿರೋಧಿ ಕೆಲಸದ ಬಗ್ಗೆ ಅಲ್ಲಿನ ಹಿರಿಯ ಅಧಿಕಾರಿಗಳಿಗೆ ತಿಳಿದಿದ್ದರೂ ಯಾರೂ ಪ್ರಶ್ನೆ ಮಾಡಿರಲಿಲ್ಲ. ಇತ್ಯರ್ಥವಾಗದ ಕೆಲವು ಪ್ರಕರಣಗಳ ತನಿಖೆಗೆ ಅವರ ಅಗತ್ಯವಿತ್ತು ಎಂದು ನೆಪ ಹೇಳಿ ಉಪ್ಪಾರಪೇಟೆ ಠಾಣೆ ಪ್ರಮುಖರು ಶ್ರೀನಿವಾಸ ಶೆಟ್ಟಿಯನ್ನು ಉಳಿಸಿಕೊಂಡಿದ್ದರು ಎನ್ನುವ ಮಾತನ್ನು ವಿಧಾನಸೌಧ ಠಾಣೆಯ ಮೂಲಗಳು ತಿಳಿಸುತ್ತವೆ.
ಬುಧವಾರ ಗಾಂಧಿನಗರದಲ್ಲಿ ಅಕ್ರಮವಾಗಿ ಡ್ಯಾನ್ಸ್ ಬಾರ್ ನಡೆಸುತ್ತಿದ್ದ ಬಾರ್ ಅಂಡ್ ರೆಸ್ಟೋರೆಂಟ್ ಮೇಲೆ ಬೆಂಗಳೂರು ನಗರ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ಈ ಘಟನೆಯ ನಂತರ ಶ್ರೀನಿವಾಸ ಶೆಟ್ಟಿ ಅವರನ್ನು ದಿಢೀರ್ ಆಗಿ ಅಮಾನತು ಮಾಡಲಾಗಿದೆ. ಈ ವ್ಯಕ್ತಿ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿಯೂ ವಸೂಲಿ ಮಾಡುತ್ತಿದ್ದ ವಿಚಾರ ತಿಳಿದೇ ಈ ಅಮಾನತು ಶಿಕ್ಷೆ ನೀಡಲಾಗಿದೆ ಎನ್ನಲಾಗುತ್ತಿದೆ.
ಆದರೆ ಸ್ಟೇಷನ್ ಮಟ್ಟದಲ್ಲಿ ಪೊಲೀಸ್ ಸಿಬ್ಬಂದಿ ಹೇಗೆ ಕಾರ್ಯ ನಿರ್ವಹಿಸುತ್ತಾರೆ, ಈ ಬಗ್ಗೆ ಹಿರಿಯ ಅಧಿಕಾರಿಗಳು ತಮ್ಮ ಸಿಬಂದಿ ಬಗ್ಗೆ ಎಷ್ಟು ಜಾಗ್ರತೆ ವಹಿಸುತ್ತಾರೆ ಎಂಬ ಬಗ್ಗೆ ಈ ಪ್ರಕರಣ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಕಳೆದ 11 ತಿಂಗಳಿಂದ ಎಎಸ್ಐ ಒಬ್ಬರು ಕೆಲಸಕ್ಕೆ ಹಾಜರಾಗದಿದ್ದರೂ ವಿಧಾನಸೌಧ ಪೊಲೀಸರು ಗಂಭೀರವಾಗಿ ಪರಿಗಣಿಸಿಲ್ಲ.ಆತನ ವಿರುದ್ಧ ಹಲವು ಆರೋಪಗಳಿದ್ದರೂ ಉಪ್ಪಾರಪೇಟೆ ಠಾಣೆ ಅಧಿಕಾರಿಗಳು ಎಎಸ್ಐ ಠಾಣೆಗೆ ಬಂದು ವಸೂಲಿ ಬಾಜಿ ನಡೆಸುತ್ತಿದ್ದರೂ ಕ್ರಮಕ್ಕೆ ಮುಂದಾಗಲಿಲ್ಲ. ಹೀಗಿರುವಾಗ, ಇದರಲ್ಲಿ ಹಿರಿಯ ಅಧಿಕಾರಿಗಳ ಶಾಮೀಲಾತಿ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ ಎಂದು ಮೂಲಗಳು ತಿಳಿಸಿವೆ.
Bangalore Upparpet police inspector for collecting bribes even after 4 months of transfer from station. The inspector has been identified as Srinivas Shetty.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm