ಬ್ರೇಕಿಂಗ್ ನ್ಯೂಸ್
16-03-22 04:07 pm Bengaluru Correspondent ಕ್ರೈಂ
ಬೆಂಗಳೂರು, ಮಾ.16 : ಕನ್ನಡದ ಖ್ಯಾತ ನಟಿ ಹರಿಪ್ರಿಯಾ ಅವರ ಸೋದರ ಕೀರ್ತಿಚಂದ್ರ ಅಲಿಯಾಸ್ ವಿರಾಜ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಸಂತ್ರಸ್ತ ಯುವತಿ ಬಸವನಗುಡಿ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.
ತಾನು ಪ್ರತಿಷ್ಠಿತ ಕಂಪನಿಯಲ್ಲಿ ಉದ್ಯೋಗದಲ್ಲಿರುವುದಾಗಿ ಹೇಳಿ ಯುವತಿಯನ್ನು ಆರೋಪಿ ನಂಬಿಸಿ ವಂಚಿಸಿದ್ದಾನೆ. ಕಂಪನಿ ಒಂದರಲ್ಲಿ ಉದ್ಯೋಗದಲ್ಲಿರುವ ಯುವತಿ ಶಾದಿ ಡಾಟ್ ಕಾಮ್ ನಲ್ಲಿ ತನ್ನ ಸ್ವವಿವರ ಹಾಕಿದ್ದು, ಸೂಕ್ತ ವರನಿಗಾಗಿ ಹುಡುಕಾಟ ನಡೆಸಿದ್ದಳು. ಈ ವೇಳೆ, ವಿರಾಜ್ ತನ್ನ ವಿವರ ಹೇಳಿಕೊಂಡು ಕನೆಕ್ಟ್ ಆಗಿದ್ದಾನೆ. ತನ್ನ ತಂಗಿ ಫೇಮಸ್ ನಟಿಯೆಂದು ಹೇಳಿಕೊಂಡು ಪೋಸು ಕೊಟ್ಟಿದ್ದಲ್ಲದೆ, ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಸ್ನೇಹ ಬೆಳೆಸಿದ್ದಾನೆ.

2021ರ ಮೇ ತಿಂಗಳಲ್ಲಿ ವಿರಾಜ್ ಈ ರೀತಿ ಫ್ರೆಂಡ್ ರಿಕ್ವೆಸ್ಟ್ ಕಳಿಸಿ, ಸ್ನೇಹ ಬೆಳೆಸಿದ್ದ. ಬಳಿಕ ಚಾಟಿಂಗ್ ಆರಂಭಿಸಿದ್ದಲ್ಲದೆ ಮದುವೆ ಬಗ್ಗೆ ಎರಡೂ ಮನೆಯವರಲ್ಲಿ ಮಾತುಕತೆ ನಡೆದಿತ್ತು. ಈ ನಡುವೆ, ಆರೋಪಿ ವಿರಾಜ್ ಬರ್ತ್ ಡೇಗೆ ಯುವತಿಯೇ ಐಫೋನ್, ಲ್ಯಾಪ್ಟಾಪ್ ಖರೀದಿಸಿ ಗಿಫ್ಟ್ ನೀಡಿದ್ದಳು. ಆನಂತರ ಜನವರಿ 18ರಂದು ಜಯನಗರದ ಖಾಸಗಿ ಹೊಟೇಲ್ ಗೆ ವಿರಾಜ್ ಬರಹೇಳಿದ್ದು, ಅಲ್ಲಿ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿದ್ದಾನೆ. ಆಬಳಿಕ ಫೋನ್ ಸಂಪರ್ಕ ಕಡಿತ ಮಾಡಿಕೊಂಡು ಮೋಸ ಮಾಡಿದ್ದಾನೆ. ಕರೆ ಮಾಡಿದ್ದಕ್ಕೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಈ ಬಗ್ಗೆ ಯುವತಿ ಬಸವನಗುಡಿ ಠಾಣೆಯಲ್ಲಿ ದೂರು ದಾಖಲಿಸಿದ್ದು, ನಟಿ ಸೋದರನ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾಳೆ.

ಆರೋಪಿ ವಿರಾಜ್ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಪೊಲೀಸರು ಆತನನ್ನು ಬಂಧಿಸದೆ ವಿಳಂಬ ಧೋರಣೆ ತೋರುತ್ತಿದ್ದಾರೆಂದು ಆರೋಪ ಕೇಳಿಬಂದಿದೆ. ಹೀಗಾಗಿ ಆರೋಪಿ ನಿರೀಕ್ಷಣಾ ಜಾಮೀನು ಪಡೆಯಲು ಯತ್ನಿಸುತ್ತಿದ್ದಾನೆ ಎನ್ನಲಾಗುತ್ತಿದೆ.
Karnataka Famous Kannada actress Haripriya brother alleged of rape charges. A case has been registered at Basavanagudi Police station.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm