ಬ್ರೇಕಿಂಗ್ ನ್ಯೂಸ್
16-03-22 04:07 pm Bengaluru Correspondent ಕ್ರೈಂ
ಬೆಂಗಳೂರು, ಮಾ.16 : ಕನ್ನಡದ ಖ್ಯಾತ ನಟಿ ಹರಿಪ್ರಿಯಾ ಅವರ ಸೋದರ ಕೀರ್ತಿಚಂದ್ರ ಅಲಿಯಾಸ್ ವಿರಾಜ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಸಂತ್ರಸ್ತ ಯುವತಿ ಬಸವನಗುಡಿ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.
ತಾನು ಪ್ರತಿಷ್ಠಿತ ಕಂಪನಿಯಲ್ಲಿ ಉದ್ಯೋಗದಲ್ಲಿರುವುದಾಗಿ ಹೇಳಿ ಯುವತಿಯನ್ನು ಆರೋಪಿ ನಂಬಿಸಿ ವಂಚಿಸಿದ್ದಾನೆ. ಕಂಪನಿ ಒಂದರಲ್ಲಿ ಉದ್ಯೋಗದಲ್ಲಿರುವ ಯುವತಿ ಶಾದಿ ಡಾಟ್ ಕಾಮ್ ನಲ್ಲಿ ತನ್ನ ಸ್ವವಿವರ ಹಾಕಿದ್ದು, ಸೂಕ್ತ ವರನಿಗಾಗಿ ಹುಡುಕಾಟ ನಡೆಸಿದ್ದಳು. ಈ ವೇಳೆ, ವಿರಾಜ್ ತನ್ನ ವಿವರ ಹೇಳಿಕೊಂಡು ಕನೆಕ್ಟ್ ಆಗಿದ್ದಾನೆ. ತನ್ನ ತಂಗಿ ಫೇಮಸ್ ನಟಿಯೆಂದು ಹೇಳಿಕೊಂಡು ಪೋಸು ಕೊಟ್ಟಿದ್ದಲ್ಲದೆ, ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಸ್ನೇಹ ಬೆಳೆಸಿದ್ದಾನೆ.

2021ರ ಮೇ ತಿಂಗಳಲ್ಲಿ ವಿರಾಜ್ ಈ ರೀತಿ ಫ್ರೆಂಡ್ ರಿಕ್ವೆಸ್ಟ್ ಕಳಿಸಿ, ಸ್ನೇಹ ಬೆಳೆಸಿದ್ದ. ಬಳಿಕ ಚಾಟಿಂಗ್ ಆರಂಭಿಸಿದ್ದಲ್ಲದೆ ಮದುವೆ ಬಗ್ಗೆ ಎರಡೂ ಮನೆಯವರಲ್ಲಿ ಮಾತುಕತೆ ನಡೆದಿತ್ತು. ಈ ನಡುವೆ, ಆರೋಪಿ ವಿರಾಜ್ ಬರ್ತ್ ಡೇಗೆ ಯುವತಿಯೇ ಐಫೋನ್, ಲ್ಯಾಪ್ಟಾಪ್ ಖರೀದಿಸಿ ಗಿಫ್ಟ್ ನೀಡಿದ್ದಳು. ಆನಂತರ ಜನವರಿ 18ರಂದು ಜಯನಗರದ ಖಾಸಗಿ ಹೊಟೇಲ್ ಗೆ ವಿರಾಜ್ ಬರಹೇಳಿದ್ದು, ಅಲ್ಲಿ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿದ್ದಾನೆ. ಆಬಳಿಕ ಫೋನ್ ಸಂಪರ್ಕ ಕಡಿತ ಮಾಡಿಕೊಂಡು ಮೋಸ ಮಾಡಿದ್ದಾನೆ. ಕರೆ ಮಾಡಿದ್ದಕ್ಕೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಈ ಬಗ್ಗೆ ಯುವತಿ ಬಸವನಗುಡಿ ಠಾಣೆಯಲ್ಲಿ ದೂರು ದಾಖಲಿಸಿದ್ದು, ನಟಿ ಸೋದರನ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾಳೆ.

ಆರೋಪಿ ವಿರಾಜ್ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಪೊಲೀಸರು ಆತನನ್ನು ಬಂಧಿಸದೆ ವಿಳಂಬ ಧೋರಣೆ ತೋರುತ್ತಿದ್ದಾರೆಂದು ಆರೋಪ ಕೇಳಿಬಂದಿದೆ. ಹೀಗಾಗಿ ಆರೋಪಿ ನಿರೀಕ್ಷಣಾ ಜಾಮೀನು ಪಡೆಯಲು ಯತ್ನಿಸುತ್ತಿದ್ದಾನೆ ಎನ್ನಲಾಗುತ್ತಿದೆ.
Karnataka Famous Kannada actress Haripriya brother alleged of rape charges. A case has been registered at Basavanagudi Police station.
03-08-26 03:23 pm
HK News Staffer
ಡಿಕೆಶಿ ಸರ್ಕಾರದ ಮೆಗಾ ಸಂಪುಟ ವಿಸ್ತರಣೆ ; ಸಂಜೆ 4ಕ್...
03-08-26 01:46 pm
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
03-08-26 01:48 pm
HK News Staffer
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm