ಬ್ರೇಕಿಂಗ್ ನ್ಯೂಸ್
16-03-22 04:07 pm Bengaluru Correspondent ಕ್ರೈಂ
ಬೆಂಗಳೂರು, ಮಾ.16 : ಕನ್ನಡದ ಖ್ಯಾತ ನಟಿ ಹರಿಪ್ರಿಯಾ ಅವರ ಸೋದರ ಕೀರ್ತಿಚಂದ್ರ ಅಲಿಯಾಸ್ ವಿರಾಜ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಸಂತ್ರಸ್ತ ಯುವತಿ ಬಸವನಗುಡಿ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.
ತಾನು ಪ್ರತಿಷ್ಠಿತ ಕಂಪನಿಯಲ್ಲಿ ಉದ್ಯೋಗದಲ್ಲಿರುವುದಾಗಿ ಹೇಳಿ ಯುವತಿಯನ್ನು ಆರೋಪಿ ನಂಬಿಸಿ ವಂಚಿಸಿದ್ದಾನೆ. ಕಂಪನಿ ಒಂದರಲ್ಲಿ ಉದ್ಯೋಗದಲ್ಲಿರುವ ಯುವತಿ ಶಾದಿ ಡಾಟ್ ಕಾಮ್ ನಲ್ಲಿ ತನ್ನ ಸ್ವವಿವರ ಹಾಕಿದ್ದು, ಸೂಕ್ತ ವರನಿಗಾಗಿ ಹುಡುಕಾಟ ನಡೆಸಿದ್ದಳು. ಈ ವೇಳೆ, ವಿರಾಜ್ ತನ್ನ ವಿವರ ಹೇಳಿಕೊಂಡು ಕನೆಕ್ಟ್ ಆಗಿದ್ದಾನೆ. ತನ್ನ ತಂಗಿ ಫೇಮಸ್ ನಟಿಯೆಂದು ಹೇಳಿಕೊಂಡು ಪೋಸು ಕೊಟ್ಟಿದ್ದಲ್ಲದೆ, ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಸ್ನೇಹ ಬೆಳೆಸಿದ್ದಾನೆ.

2021ರ ಮೇ ತಿಂಗಳಲ್ಲಿ ವಿರಾಜ್ ಈ ರೀತಿ ಫ್ರೆಂಡ್ ರಿಕ್ವೆಸ್ಟ್ ಕಳಿಸಿ, ಸ್ನೇಹ ಬೆಳೆಸಿದ್ದ. ಬಳಿಕ ಚಾಟಿಂಗ್ ಆರಂಭಿಸಿದ್ದಲ್ಲದೆ ಮದುವೆ ಬಗ್ಗೆ ಎರಡೂ ಮನೆಯವರಲ್ಲಿ ಮಾತುಕತೆ ನಡೆದಿತ್ತು. ಈ ನಡುವೆ, ಆರೋಪಿ ವಿರಾಜ್ ಬರ್ತ್ ಡೇಗೆ ಯುವತಿಯೇ ಐಫೋನ್, ಲ್ಯಾಪ್ಟಾಪ್ ಖರೀದಿಸಿ ಗಿಫ್ಟ್ ನೀಡಿದ್ದಳು. ಆನಂತರ ಜನವರಿ 18ರಂದು ಜಯನಗರದ ಖಾಸಗಿ ಹೊಟೇಲ್ ಗೆ ವಿರಾಜ್ ಬರಹೇಳಿದ್ದು, ಅಲ್ಲಿ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿದ್ದಾನೆ. ಆಬಳಿಕ ಫೋನ್ ಸಂಪರ್ಕ ಕಡಿತ ಮಾಡಿಕೊಂಡು ಮೋಸ ಮಾಡಿದ್ದಾನೆ. ಕರೆ ಮಾಡಿದ್ದಕ್ಕೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಈ ಬಗ್ಗೆ ಯುವತಿ ಬಸವನಗುಡಿ ಠಾಣೆಯಲ್ಲಿ ದೂರು ದಾಖಲಿಸಿದ್ದು, ನಟಿ ಸೋದರನ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾಳೆ.

ಆರೋಪಿ ವಿರಾಜ್ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಪೊಲೀಸರು ಆತನನ್ನು ಬಂಧಿಸದೆ ವಿಳಂಬ ಧೋರಣೆ ತೋರುತ್ತಿದ್ದಾರೆಂದು ಆರೋಪ ಕೇಳಿಬಂದಿದೆ. ಹೀಗಾಗಿ ಆರೋಪಿ ನಿರೀಕ್ಷಣಾ ಜಾಮೀನು ಪಡೆಯಲು ಯತ್ನಿಸುತ್ತಿದ್ದಾನೆ ಎನ್ನಲಾಗುತ್ತಿದೆ.
Karnataka Famous Kannada actress Haripriya brother alleged of rape charges. A case has been registered at Basavanagudi Police station.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm