ಬ್ರೇಕಿಂಗ್ ನ್ಯೂಸ್
16-03-22 05:02 pm Bengaluru Correspondent ಕ್ರೈಂ
ಬೆಂಗಳೂರು, ಮಾ.16 : ನಕಲಿ ಛಾಪಾ ಕಾಗದ ಹಾಗು ಸಬ್ ರಿಜಿಸ್ಟ್ರಾರ್ ಕಚೇರಿಯ ನಕಲಿ ಸೀಲು ಬಳಸಿ ಕೋಟಿ ಬೆಲೆಯ ಸೈಟ್ ಗಳ ನಕಲಿ ದಾಖಲಾತಿಗಳನ್ನು ಸೃಷ್ಟಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಯಲಹಂಕ ಉಪನಗರ ಪೊಲೀಸರು ಪತ್ತೆಹಚ್ಚಿದ್ದು ಎಂಟು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಪ್ರದೀಪ್, ಧರ್ಮಲಿಂಗಂ, ಮಂಜುನಾಥ್, ಯಾರಬ್, ವೈ. ಆರ್ ಮಂಜುನಾಥ್, ಅಬ್ದುಲ್ ಹಾಗೂ ಶಬಾನ ಬಂಧಿತರು. ಇವರು ಗ್ಯಾಂಗ್ ಕಟ್ಟಿಕೊಂಡು ನಕಲಿ ಸೀಲ್ ಮತ್ತು ದಾಖಲಾತಿಗಳನ್ನು ಸೃಷ್ಟಿಸಿ ಸೈಟ್ ಗಳನ್ನು ಅದರ ಅಸಲಿ ಮಾಲೀಕರಿಗೆ ತಿಳಿಯದಂತೆ ಮಾರಾಟ ಮಾಡ್ತಿದ್ದರು. ಬಂಧಿತರಿಂದ ಒಟ್ಟು ಎಂಟು ಪ್ರಕರಣಗಳು ಬಯಲಿಗೆ ಬಂದಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಆರೋಪಿಗಳು ರಾಜಾರೋಷವಾಗಿ ಹಗಲು ದರೋಡೆ ನಡೆಸಲು ಇವರಿಗೆ ಬೆಂಗಾವಲಾಗಿ ನಟೋರಿಯಸ್ ರೌಡಿ ಶೀಟರ್ ರಾಮಯ್ಯ ಅಲಿಯಾಸ್ ಆಟೋ ರಾಮ ಬೆನ್ನಿಗೆ ನಿಂತಿದ್ದ. ಆರೋಪಿಗಳ ವಿಚಾರಣೆಯಲ್ಲಿ ಎರಡು ಕೋಟಿ ಹಣದ ವ್ಯವಹಾರ ಬೆಳಕಿಗೆ ಬಂದಿದೆ. ವಿದೇಶದಲ್ಲಿ ಇರುವ ಸೈಟ್ ಮಾಲೀಕರನ್ನು ಗುರುತಿಸುತ್ತಿದ್ದ ಗ್ಯಾಂಗ್, ಅದಕ್ಕೆ ಸಂಬಂಧಿಸಿದ 50 ವರ್ಷದ ಹಿಂದಿನ ಹಳೆ ದಾಖಲೆ, ಛಾಪಾ ಕಾಗದಗಳನ್ನು ತಯಾರಿಸುತ್ತಿದ್ದರು. ಸೈಟ್ ಯಾರ ಹೆಸರಿನಲ್ಲಿ ಇದೆ, ಅವರಿಗೆ ಯಾರ ಹೆಸರಿನಿಂದ ಸೈಟ್ ಬಂದಿತ್ತು ಎಂಬುದನ್ನು ಗುರುತಿಸಿ, ಬಳಿಕ ಈ ಸೈಟ್ ಅನ್ನು ಮೂಲ ಮಾಲೀಕರು ನಮಗೆ ವೀಲು ಮಾಡಿದ್ದಾರೆ ಎಂದು ಹೇಳಿ ಯಾಮಾರಿಸುತ್ತಿದ್ದರು. ನಕಲಿ ದಾಖಲೆಗಳನ್ನೇ ಇಟ್ಟುಕೊಂಡು ಸೈಟ್ ಮಾರಾಟ ಮಾಡುತ್ತಿದ್ದರು. ನಕಲಿ ದಾಖಲೆಗಳನ್ನೇ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಅಸಲಿ ಎಂದು ಬಿಂಬಿಸಿ, ಹಣ ಕೊಟ್ಟು ಅಧಿಕೃತವಾಗಿ ರಿಜಿಸ್ಟರ್ ಮಾಡಿಸುತ್ತಿದ್ದರು. ಇವೆಲ್ಲ ದಲ್ಲಾಳಿ ಕೆಲಸಗಳಿಗೆ ರೌಡಿ ಆಟೋ ರಾಮ ಬೆಂಬಲ ನೀಡುತ್ತಿದ್ದ.
Bangalore Eighth arrested for creating fake government seal and selling properties. The operation was lead by Yelankha police.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm