ಬ್ರೇಕಿಂಗ್ ನ್ಯೂಸ್
16-03-22 05:02 pm Bengaluru Correspondent ಕ್ರೈಂ
ಬೆಂಗಳೂರು, ಮಾ.16 : ನಕಲಿ ಛಾಪಾ ಕಾಗದ ಹಾಗು ಸಬ್ ರಿಜಿಸ್ಟ್ರಾರ್ ಕಚೇರಿಯ ನಕಲಿ ಸೀಲು ಬಳಸಿ ಕೋಟಿ ಬೆಲೆಯ ಸೈಟ್ ಗಳ ನಕಲಿ ದಾಖಲಾತಿಗಳನ್ನು ಸೃಷ್ಟಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಯಲಹಂಕ ಉಪನಗರ ಪೊಲೀಸರು ಪತ್ತೆಹಚ್ಚಿದ್ದು ಎಂಟು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಪ್ರದೀಪ್, ಧರ್ಮಲಿಂಗಂ, ಮಂಜುನಾಥ್, ಯಾರಬ್, ವೈ. ಆರ್ ಮಂಜುನಾಥ್, ಅಬ್ದುಲ್ ಹಾಗೂ ಶಬಾನ ಬಂಧಿತರು. ಇವರು ಗ್ಯಾಂಗ್ ಕಟ್ಟಿಕೊಂಡು ನಕಲಿ ಸೀಲ್ ಮತ್ತು ದಾಖಲಾತಿಗಳನ್ನು ಸೃಷ್ಟಿಸಿ ಸೈಟ್ ಗಳನ್ನು ಅದರ ಅಸಲಿ ಮಾಲೀಕರಿಗೆ ತಿಳಿಯದಂತೆ ಮಾರಾಟ ಮಾಡ್ತಿದ್ದರು. ಬಂಧಿತರಿಂದ ಒಟ್ಟು ಎಂಟು ಪ್ರಕರಣಗಳು ಬಯಲಿಗೆ ಬಂದಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಆರೋಪಿಗಳು ರಾಜಾರೋಷವಾಗಿ ಹಗಲು ದರೋಡೆ ನಡೆಸಲು ಇವರಿಗೆ ಬೆಂಗಾವಲಾಗಿ ನಟೋರಿಯಸ್ ರೌಡಿ ಶೀಟರ್ ರಾಮಯ್ಯ ಅಲಿಯಾಸ್ ಆಟೋ ರಾಮ ಬೆನ್ನಿಗೆ ನಿಂತಿದ್ದ. ಆರೋಪಿಗಳ ವಿಚಾರಣೆಯಲ್ಲಿ ಎರಡು ಕೋಟಿ ಹಣದ ವ್ಯವಹಾರ ಬೆಳಕಿಗೆ ಬಂದಿದೆ. ವಿದೇಶದಲ್ಲಿ ಇರುವ ಸೈಟ್ ಮಾಲೀಕರನ್ನು ಗುರುತಿಸುತ್ತಿದ್ದ ಗ್ಯಾಂಗ್, ಅದಕ್ಕೆ ಸಂಬಂಧಿಸಿದ 50 ವರ್ಷದ ಹಿಂದಿನ ಹಳೆ ದಾಖಲೆ, ಛಾಪಾ ಕಾಗದಗಳನ್ನು ತಯಾರಿಸುತ್ತಿದ್ದರು. ಸೈಟ್ ಯಾರ ಹೆಸರಿನಲ್ಲಿ ಇದೆ, ಅವರಿಗೆ ಯಾರ ಹೆಸರಿನಿಂದ ಸೈಟ್ ಬಂದಿತ್ತು ಎಂಬುದನ್ನು ಗುರುತಿಸಿ, ಬಳಿಕ ಈ ಸೈಟ್ ಅನ್ನು ಮೂಲ ಮಾಲೀಕರು ನಮಗೆ ವೀಲು ಮಾಡಿದ್ದಾರೆ ಎಂದು ಹೇಳಿ ಯಾಮಾರಿಸುತ್ತಿದ್ದರು. ನಕಲಿ ದಾಖಲೆಗಳನ್ನೇ ಇಟ್ಟುಕೊಂಡು ಸೈಟ್ ಮಾರಾಟ ಮಾಡುತ್ತಿದ್ದರು. ನಕಲಿ ದಾಖಲೆಗಳನ್ನೇ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಅಸಲಿ ಎಂದು ಬಿಂಬಿಸಿ, ಹಣ ಕೊಟ್ಟು ಅಧಿಕೃತವಾಗಿ ರಿಜಿಸ್ಟರ್ ಮಾಡಿಸುತ್ತಿದ್ದರು. ಇವೆಲ್ಲ ದಲ್ಲಾಳಿ ಕೆಲಸಗಳಿಗೆ ರೌಡಿ ಆಟೋ ರಾಮ ಬೆಂಬಲ ನೀಡುತ್ತಿದ್ದ.
Bangalore Eighth arrested for creating fake government seal and selling properties. The operation was lead by Yelankha police.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm