ಬ್ರೇಕಿಂಗ್ ನ್ಯೂಸ್
17-03-22 06:54 pm Mangalore Correspondent ಕ್ರೈಂ
ಕೊಣಾಜೆ, ಮಾ.17: ಅಂಗನವಾಡಿಯ ಗ್ಯಾಸ್ ಸ್ಟೌವ್ ರಿಪೇರಿಗೆಂದು ಬಂದಾತ ಅಂಗನವಾಡಿ ಸಹಾಯಕಿ ಮಹಿಳೆಯ ಕೈ ಎಳೆದು ಮಾನಭಂಗಕ್ಕೆ ಯತ್ನಿಸಿದ್ದು ಆರೋಪಿಯನ್ನ ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.
ಹರೇಕಳ ಗ್ರಾಮದ ಅಂಗನವಾಡಿಯ ಸಹಾಯಕಿ ಅವಿವಾಹಿತ ಮಹಿಳೆಗೆ ಅದೇ ಗ್ರಾಮದ ಆಲಡ್ಕ ನಿವಾಸಿ ನಿಝಾಮುದ್ದೀನ್(31) ಎಂಬಾತ ಕೈ ಎಳೆದು ಮಾನಭಂಗಕ್ಕೆ ಯತ್ನಿಸಿದ್ದಾನೆ. ಈ ಬಗ್ಗೆ ಪೊಲೀಸ್ ದೂರು ದಾಖಲಾಗಿದ್ದರಿಂದ ಆರೋಪಿಯನ್ನ ಕೊಣಾಜೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ಅಂಗನವಾಡಿಯಲ್ಲಿದ್ದ ಗ್ಯಾಸ್ ಸ್ಟೌವ್ ಕೆಟ್ಟು ದುರಸ್ತಿಗೆ ಬಂದ ಕಾರಣ ಅಂಗನವಾಡಿ ಟೀಚರ್ ಸಲಹೆಯಂತೆ ಸಹಾಯಕಿ ಗ್ಯಾಸ್ ಸ್ಟೌವ್ ರಿಪೇರಿ ಮಾಡುವ ಪರಿಚಯದ ಯುವಕ ನಿಝಾಮ್ ಅಂಗಡಿಗೆ ಕರೆ ಮಾಡಿ ತಿಳಿಸಿದ್ದರು. ಅದರಂತೆ ಬುಧವಾರ ಮಧ್ಯಾಹ್ನ ಆತ ಅಂಗನವಾಡಿಗೆ ಬಂದಿದ್ದಾನೆ. ಶಿಕ್ಷಕಿ ಆತನಿಗೆ ಅಡುಗೆ ಕೊಣೆಯಲ್ಲಿದ್ದ ಗ್ಯಾಸ್ ಸ್ಟೌವ್ ತೋರಿಸಿ ದುರಸ್ತಿ ಮಾಡಿ ತಾ ಎಂದು ಹೇಳಿ ಮಕ್ಕಳಿರುವ ಕೊಠಡಿಗೆ ತೆರಳಿದ್ದಾರೆ. ಆರೋಪಿ ನಿಝಾಮ್ ಚೀಲದಲ್ಲಿ ಗ್ಯಾಸ್ ಸ್ಟೌವ್ ತುಂಬಿಸುವಾಗ ಪಕ್ಕದಲ್ಲಿದ್ದ ಅಡುಗೆ ಸಹಾಯಕಿಯ ಕೈ ಹಿಡಿದು ಎಳೆದಿದ್ದು ಆಕೆ ಆತನ ಕೈಯಿಂದ ತಪ್ಪಿಸಿಕೊಂಡಿದ್ದಾರೆ. ಆಬಳಿಕ ಬೇಸರ ಮಾಡಬೇಡ ಎಂದು ಹೇಳಿದ್ದಾಗಿ ಯುವತಿ ದೂರಿದ್ದಾರೆ. ಆತ ತೆರಳಿದ ತಕ್ಷಣ ನಡೆದ ವಿಷಯವನ್ನು ಸಂತ್ರಸ್ತೆ ಶಿಕ್ಷಕಿಯ ಗಮನಕ್ಕೆ ತಂದಿದ್ದು ಶಿಕ್ಷಕಿ ಅಣ್ಣಂದಿರಿಗೆ ತಿಳಿಸುವಂತೆ ಸೂಚಿಸಿದ್ದರು. ಇಂದು ಸಂತ್ರಸ್ತೆ ಅಂಗನವಾಡಿ ಸಹಾಯಕಿ ಕೊಣಾಜೆ ಠಾಣೆಗೆ ತೆರಳಿ ದೂರು ನೀಡಿದ್ದು ಆರೋಪಿಯನ್ನ ಕೊಣಾಜೆ ಠಾಣೆ ಪೊಲೀಸರು ಕ್ಷಿಪ್ರವಾಗಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
A government teacher from Konaje in Mangalore was sexually harassed by a Gas repair guy who came to the house to repair the gas has been arrested by Konaje Police. The arrested has been identified as Nizamuddin (31).
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm