ಬ್ರೇಕಿಂಗ್ ನ್ಯೂಸ್
17-03-22 06:54 pm Mangalore Correspondent ಕ್ರೈಂ
ಕೊಣಾಜೆ, ಮಾ.17: ಅಂಗನವಾಡಿಯ ಗ್ಯಾಸ್ ಸ್ಟೌವ್ ರಿಪೇರಿಗೆಂದು ಬಂದಾತ ಅಂಗನವಾಡಿ ಸಹಾಯಕಿ ಮಹಿಳೆಯ ಕೈ ಎಳೆದು ಮಾನಭಂಗಕ್ಕೆ ಯತ್ನಿಸಿದ್ದು ಆರೋಪಿಯನ್ನ ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.
ಹರೇಕಳ ಗ್ರಾಮದ ಅಂಗನವಾಡಿಯ ಸಹಾಯಕಿ ಅವಿವಾಹಿತ ಮಹಿಳೆಗೆ ಅದೇ ಗ್ರಾಮದ ಆಲಡ್ಕ ನಿವಾಸಿ ನಿಝಾಮುದ್ದೀನ್(31) ಎಂಬಾತ ಕೈ ಎಳೆದು ಮಾನಭಂಗಕ್ಕೆ ಯತ್ನಿಸಿದ್ದಾನೆ. ಈ ಬಗ್ಗೆ ಪೊಲೀಸ್ ದೂರು ದಾಖಲಾಗಿದ್ದರಿಂದ ಆರೋಪಿಯನ್ನ ಕೊಣಾಜೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ಅಂಗನವಾಡಿಯಲ್ಲಿದ್ದ ಗ್ಯಾಸ್ ಸ್ಟೌವ್ ಕೆಟ್ಟು ದುರಸ್ತಿಗೆ ಬಂದ ಕಾರಣ ಅಂಗನವಾಡಿ ಟೀಚರ್ ಸಲಹೆಯಂತೆ ಸಹಾಯಕಿ ಗ್ಯಾಸ್ ಸ್ಟೌವ್ ರಿಪೇರಿ ಮಾಡುವ ಪರಿಚಯದ ಯುವಕ ನಿಝಾಮ್ ಅಂಗಡಿಗೆ ಕರೆ ಮಾಡಿ ತಿಳಿಸಿದ್ದರು. ಅದರಂತೆ ಬುಧವಾರ ಮಧ್ಯಾಹ್ನ ಆತ ಅಂಗನವಾಡಿಗೆ ಬಂದಿದ್ದಾನೆ. ಶಿಕ್ಷಕಿ ಆತನಿಗೆ ಅಡುಗೆ ಕೊಣೆಯಲ್ಲಿದ್ದ ಗ್ಯಾಸ್ ಸ್ಟೌವ್ ತೋರಿಸಿ ದುರಸ್ತಿ ಮಾಡಿ ತಾ ಎಂದು ಹೇಳಿ ಮಕ್ಕಳಿರುವ ಕೊಠಡಿಗೆ ತೆರಳಿದ್ದಾರೆ. ಆರೋಪಿ ನಿಝಾಮ್ ಚೀಲದಲ್ಲಿ ಗ್ಯಾಸ್ ಸ್ಟೌವ್ ತುಂಬಿಸುವಾಗ ಪಕ್ಕದಲ್ಲಿದ್ದ ಅಡುಗೆ ಸಹಾಯಕಿಯ ಕೈ ಹಿಡಿದು ಎಳೆದಿದ್ದು ಆಕೆ ಆತನ ಕೈಯಿಂದ ತಪ್ಪಿಸಿಕೊಂಡಿದ್ದಾರೆ. ಆಬಳಿಕ ಬೇಸರ ಮಾಡಬೇಡ ಎಂದು ಹೇಳಿದ್ದಾಗಿ ಯುವತಿ ದೂರಿದ್ದಾರೆ. ಆತ ತೆರಳಿದ ತಕ್ಷಣ ನಡೆದ ವಿಷಯವನ್ನು ಸಂತ್ರಸ್ತೆ ಶಿಕ್ಷಕಿಯ ಗಮನಕ್ಕೆ ತಂದಿದ್ದು ಶಿಕ್ಷಕಿ ಅಣ್ಣಂದಿರಿಗೆ ತಿಳಿಸುವಂತೆ ಸೂಚಿಸಿದ್ದರು. ಇಂದು ಸಂತ್ರಸ್ತೆ ಅಂಗನವಾಡಿ ಸಹಾಯಕಿ ಕೊಣಾಜೆ ಠಾಣೆಗೆ ತೆರಳಿ ದೂರು ನೀಡಿದ್ದು ಆರೋಪಿಯನ್ನ ಕೊಣಾಜೆ ಠಾಣೆ ಪೊಲೀಸರು ಕ್ಷಿಪ್ರವಾಗಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
A government teacher from Konaje in Mangalore was sexually harassed by a Gas repair guy who came to the house to repair the gas has been arrested by Konaje Police. The arrested has been identified as Nizamuddin (31).
03-08-26 03:23 pm
HK News Staffer
ಡಿಕೆಶಿ ಸರ್ಕಾರದ ಮೆಗಾ ಸಂಪುಟ ವಿಸ್ತರಣೆ ; ಸಂಜೆ 4ಕ್...
03-08-26 01:46 pm
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
03-08-26 01:48 pm
HK News Staffer
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm