ಬ್ರೇಕಿಂಗ್ ನ್ಯೂಸ್
17-03-22 07:32 pm HK Desk news ಕ್ರೈಂ
ತಿರುವನಂತಪುರಂ, ಮಾ.17 : 17 ವರ್ಷದ ಅಪ್ರಾಪ್ತ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪತ್ತನಂತಿಟ್ಟ ಜಿಲ್ಲೆಯ ಮಲಂಕರ ಆರ್ಥೋಡೋಕ್ಸ್ ಸಿರಿಯನ್ ಚರ್ಚ್ ಒಂದರ ಪಾದ್ರಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೂಡಲ್ ಎಂಬಲ್ಲಿನ ಚರ್ಚ್ ಪಾದ್ರಿ ಪಾಂಡ್ಸನ್ ಜಾನ್ (35) ಬಂಧಿತ ವ್ಯಕ್ತಿ. ಕಲಿಯುವುದರಲ್ಲಿ ನಿರಾಸಕ್ತಿ ತೋರುತ್ತಿದ್ದ ಯುವತಿಯನ್ನು ಆಕೆಯ ಹೆತ್ತವರು ಚರ್ಚ್ ಪಾದ್ರಿಯ ಮನೆಗೆ ಕರೆದುಕೊಂಡು ಬಂದಿದ್ದರು. ಈ ವೇಳೆ, ಯುವತಿಗೆ ಕೌನ್ಸಿಲಿಂಗ್ ಕೊಡುವ ನೆಪದಲ್ಲಿ ಚರ್ಚ್ ಪಾದ್ರಿ ಯುವತಿಯನ್ನು ಕೋಣೆಗೆ ಕರೆದೊಯ್ದು ಅಸಭ್ಯವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ.
ಮಾರ್ಚ್ 12 ಮತ್ತು 13ರಂದು ಎರಡು ಬಾರಿ ಅಸಭ್ಯವಾಗಿ ವರ್ತಿಸಿದ್ದಾನೆ. ಮೊದಲ ಬಾರಿಗೆ ಚರ್ಚ್ ನಲ್ಲಿ ಕೊಠಡಿ ಒಂದಕ್ಕೆ ಕರೆದೊಯ್ದು ಅಸಭ್ಯವಾಗಿ ವರ್ತಿಸಿದ್ದ. ಆನಂತರ, ಮರುದಿನವೂ ಕೌನ್ಸಿಲಿಂಗ್ ನೀಡಲು ಚರ್ಚ್ ಗೆ ಬರಲು ಪಾದ್ರಿ ತಿಳಿಸಿದ್ದ. ಆದರೆ ಚರ್ಚ್ ಗೆ ಬರಲು ನಿರಾಕರಿಸಿದ್ದರಿಂದ ಪಾಂಡ್ಸನ್ ಜಾನ್ ನೇರವಾಗಿ ಯುವತಿ ಮನೆಗೆ ಬಂದಿದ್ದು, ಅಲ್ಲಿ ಆಕೆಯನ್ನು ಕೋಣೆಯಲ್ಲಿ ಕೂಡಿ ಹಾಕಿ ಲೈಂಗಿಕ ಕಿರುಕುಳ ನೀಡಿದ್ದಾನೆ.
ಈ ಬಗ್ಗೆ ಸಂತ್ರಸ್ತ ಹುಡುಗಿ ಶಾಲೆಯಲ್ಲಿ ತನ್ನ ಗೆಳತಿಯ ಬಳಿ ಹೇಳಿಕೊಂಡಿದ್ದಾಳೆ. ಆಕೆಯ ಗೆಳತಿ ವಿಚಾರವನ್ನು ಶಾಲಾಡಳಿತದ ಗಮನಕ್ಕೆ ತಂದಿದ್ದು, ಅವರು ಚೈಲ್ಡ್ ಲೈನ್ ಸೆಂಟರಿಗೆ ಮಾಹಿತಿ ನೀಡಿದ್ದಾರೆ. ಚೈಲ್ಡ್ ಲೈನ್ ಸಿಬಂದಿ ನೀಡಿದ ದೂರಿನಂತೆ ಮಹಿಳಾ ಠಾಣೆ ಪೊಲೀಸರು ಆರೋಪಿ ಪಾದ್ರಿಯನ್ನು ಬಂಧಿಸಿದ್ದಾರೆ. ಮುನ್ನಾ ದಿನ ರಾತ್ರಿ ತನ್ನ ಜೊತೆ ಅಸಭ್ಯವಾಗಿ ವರ್ತಿಸಿದ್ದರಿಂದ ಯುವತಿ ಮರುದಿನ ಚರ್ಚ್ ಗೆ ತೆರಳಿರಲಿಲ್ಲ. ಆದರೆ ಮರುದಿನ ಮನೆಗೇ ಬಂದು ಕಿರುಕುಳ ಕೊಟ್ಟಿದ್ದಾನೆ ಎಂದು ಯುವತಿ ಹೇಳಿಕೆ ನೀಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ.
A priest with Malankara Orthodox Syrian Church in Koodal in Kerala's Pathanamthitta district was arrested in a POCSO case on Thursday after he allegedly sexually misbehaved with a 17-year-old girl, who was brought to him for counseling by her mother. The suspect Pondson John, 35, a priest of Koodal Orthodox Church was arrested based on the information shared by the Childline team.
03-08-26 03:23 pm
HK News Staffer
ಡಿಕೆಶಿ ಸರ್ಕಾರದ ಮೆಗಾ ಸಂಪುಟ ವಿಸ್ತರಣೆ ; ಸಂಜೆ 4ಕ್...
03-08-26 01:46 pm
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
03-08-26 01:48 pm
HK News Staffer
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm