ಬ್ರೇಕಿಂಗ್ ನ್ಯೂಸ್
17-03-22 07:32 pm HK Desk news ಕ್ರೈಂ
ತಿರುವನಂತಪುರಂ, ಮಾ.17 : 17 ವರ್ಷದ ಅಪ್ರಾಪ್ತ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪತ್ತನಂತಿಟ್ಟ ಜಿಲ್ಲೆಯ ಮಲಂಕರ ಆರ್ಥೋಡೋಕ್ಸ್ ಸಿರಿಯನ್ ಚರ್ಚ್ ಒಂದರ ಪಾದ್ರಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೂಡಲ್ ಎಂಬಲ್ಲಿನ ಚರ್ಚ್ ಪಾದ್ರಿ ಪಾಂಡ್ಸನ್ ಜಾನ್ (35) ಬಂಧಿತ ವ್ಯಕ್ತಿ. ಕಲಿಯುವುದರಲ್ಲಿ ನಿರಾಸಕ್ತಿ ತೋರುತ್ತಿದ್ದ ಯುವತಿಯನ್ನು ಆಕೆಯ ಹೆತ್ತವರು ಚರ್ಚ್ ಪಾದ್ರಿಯ ಮನೆಗೆ ಕರೆದುಕೊಂಡು ಬಂದಿದ್ದರು. ಈ ವೇಳೆ, ಯುವತಿಗೆ ಕೌನ್ಸಿಲಿಂಗ್ ಕೊಡುವ ನೆಪದಲ್ಲಿ ಚರ್ಚ್ ಪಾದ್ರಿ ಯುವತಿಯನ್ನು ಕೋಣೆಗೆ ಕರೆದೊಯ್ದು ಅಸಭ್ಯವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ.
ಮಾರ್ಚ್ 12 ಮತ್ತು 13ರಂದು ಎರಡು ಬಾರಿ ಅಸಭ್ಯವಾಗಿ ವರ್ತಿಸಿದ್ದಾನೆ. ಮೊದಲ ಬಾರಿಗೆ ಚರ್ಚ್ ನಲ್ಲಿ ಕೊಠಡಿ ಒಂದಕ್ಕೆ ಕರೆದೊಯ್ದು ಅಸಭ್ಯವಾಗಿ ವರ್ತಿಸಿದ್ದ. ಆನಂತರ, ಮರುದಿನವೂ ಕೌನ್ಸಿಲಿಂಗ್ ನೀಡಲು ಚರ್ಚ್ ಗೆ ಬರಲು ಪಾದ್ರಿ ತಿಳಿಸಿದ್ದ. ಆದರೆ ಚರ್ಚ್ ಗೆ ಬರಲು ನಿರಾಕರಿಸಿದ್ದರಿಂದ ಪಾಂಡ್ಸನ್ ಜಾನ್ ನೇರವಾಗಿ ಯುವತಿ ಮನೆಗೆ ಬಂದಿದ್ದು, ಅಲ್ಲಿ ಆಕೆಯನ್ನು ಕೋಣೆಯಲ್ಲಿ ಕೂಡಿ ಹಾಕಿ ಲೈಂಗಿಕ ಕಿರುಕುಳ ನೀಡಿದ್ದಾನೆ.
ಈ ಬಗ್ಗೆ ಸಂತ್ರಸ್ತ ಹುಡುಗಿ ಶಾಲೆಯಲ್ಲಿ ತನ್ನ ಗೆಳತಿಯ ಬಳಿ ಹೇಳಿಕೊಂಡಿದ್ದಾಳೆ. ಆಕೆಯ ಗೆಳತಿ ವಿಚಾರವನ್ನು ಶಾಲಾಡಳಿತದ ಗಮನಕ್ಕೆ ತಂದಿದ್ದು, ಅವರು ಚೈಲ್ಡ್ ಲೈನ್ ಸೆಂಟರಿಗೆ ಮಾಹಿತಿ ನೀಡಿದ್ದಾರೆ. ಚೈಲ್ಡ್ ಲೈನ್ ಸಿಬಂದಿ ನೀಡಿದ ದೂರಿನಂತೆ ಮಹಿಳಾ ಠಾಣೆ ಪೊಲೀಸರು ಆರೋಪಿ ಪಾದ್ರಿಯನ್ನು ಬಂಧಿಸಿದ್ದಾರೆ. ಮುನ್ನಾ ದಿನ ರಾತ್ರಿ ತನ್ನ ಜೊತೆ ಅಸಭ್ಯವಾಗಿ ವರ್ತಿಸಿದ್ದರಿಂದ ಯುವತಿ ಮರುದಿನ ಚರ್ಚ್ ಗೆ ತೆರಳಿರಲಿಲ್ಲ. ಆದರೆ ಮರುದಿನ ಮನೆಗೇ ಬಂದು ಕಿರುಕುಳ ಕೊಟ್ಟಿದ್ದಾನೆ ಎಂದು ಯುವತಿ ಹೇಳಿಕೆ ನೀಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ.
A priest with Malankara Orthodox Syrian Church in Koodal in Kerala's Pathanamthitta district was arrested in a POCSO case on Thursday after he allegedly sexually misbehaved with a 17-year-old girl, who was brought to him for counseling by her mother. The suspect Pondson John, 35, a priest of Koodal Orthodox Church was arrested based on the information shared by the Childline team.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm