ಬ್ರೇಕಿಂಗ್ ನ್ಯೂಸ್
17-03-22 10:17 pm Bengaluru Correspondent ಕ್ರೈಂ
ಬೆಂಗಳೂರು, ಮಾ.18: ನಿಮಗೆ ತಾಕತ್ತಿದ್ದರೆ ನನ್ನನ್ನು ಹಿಡಿಯಿರಿ ಎಂದು ತೆಲಂಗಾಣ ಪೊಲೀಸರಿಗೇ ಸವಾಲು ಹಾಕಿ ತಲೆಮರೆಸಿಕೊಂಡಿದ್ದ ಐಷಾರಾಮಿ ಕಾರುಗಳನ್ನು ಕದಿಯುವುದನ್ನೇ ಕಸುಬು ಮಾಡಿಕೊಂಡಿದ್ದ ಕುಖ್ಯಾತ ಅಂತಾರಾಜ್ಯ ಕಳ್ಳನನ್ನು ಬೆಂಗಳೂರಿನ ಅಮೃತಹಳ್ಳಿ ಪೊಲೀಸರು ಬೇಟೆಯಾಡಿದ್ದಾರೆ.
ರಾಜಸ್ಥಾನದ ಮೂಲದ ಸತ್ಯೇಂದರ್ ಸಿಂಗ್ ಶೇಖಾವತ್ (41) ಬಂಧಿತ ಆರೋಪಿ. ಬೆಂಗಳೂರು, ಹೈದರಾಬಾದ್, ಚೆನ್ನೈ ಹೀಗೆ ದೇಶಾದ್ಯಂತ ಪ್ರಮುಖ ನಗರಗಳಲ್ಲಿ ಐಷಾರಾಮಿ ಕಾರುಗಳನ್ನು ಕದಿಯುವುದನ್ನೇ ವೃತ್ತಿ ಮಾಡಿಕೊಂಡಿದ್ದ ಶೇಖಾವತ್, ತೆಲಂಗಾಣ ಪೊಲೀಸರು ಬೆನ್ನುಬಿದ್ದಾಗ ನೀವು ತಾಕತ್ತಿದ್ದರೆ ಹಿಡಿದು ನೋಡಿ ಎಂದು ಸವಾಲು ಹಾಕಿದ್ದ ಎನ್ನಲಾಗಿದೆ. ಈತನಿಂದ ಟೊಯೊಟಾ ಫಾರ್ಚುನರ್, ಆಡಿ ಸೇರಿದಂತೆ ಹಲವು ಐಷಾರಾಮಿ ಕಾರುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ಲದೆ, ಸುಮಾರು 20 ಕಾರಿನ ಕೀಗಳು, 13 ಸ್ಮಾರ್ಟ್ ಕೀಗಳು, ಕೀ ಕತ್ತರಿಸಲು ಬಳಸುವ ಎರಡು ಲಕ್ಷ ಮೌಲ್ಯದ ಯಂತ್ರ ಸೇರಿ ಕಾರು ಕದಿಯಲು ಬಳಸುವ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಆರೋಪಿಯ ವಿಚಾರಣೆಯಲ್ಲಿ ಬೆಂಗಳೂರಿನಲ್ಲಿ 12 ಕಾರು ಕಳವು, ಹೈದರಾಬಾದ್ ನಲ್ಲಿ 5 ರಾಜಸ್ಥಾನ ಹಾಗೂ ಚೆನ್ನೈನಲ್ಲಿ ತಲಾ ಒಂದು ಐಷಾರಾಮಿ ಕಾರು ಕಳವು ಪ್ರಕರಣದಲ್ಲಿ ಭಾಗಿಯಾಗಿರುವುದು ಪತ್ತೆಯಾಗಿದೆ. ಬೆಂಗಳೂರು, ಚೆನ್ನೈನಲ್ಲಿ ಕಾರು ಕದ್ದು ರಾಜಸ್ಥಾನಕ್ಕೆ ಒಯ್ಯುತ್ತಿದ್ದ ಶೇಖಾವತ್, ಅಲ್ಲಿ ಕಡಿಮೆ ದರಕ್ಕೆ ಮಾರಾಟ ಮಾಡುತ್ತಿದ್ದ. 2003ರಿಂದ ಕಾರು ಕಳವನ್ನೇ ವೃತ್ತಿಯಾಗಿಸಿದ್ದ ಈತನ ವಿರುದ್ಧ ದೇಶಾದ್ಯಂತ ಪ್ರಕರಣ ದಾಖಲಾಗಿದೆ. ದೆಹಲಿ, ಗುಜರಾತ್, ರಾಜಸ್ಥಾನ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು, ಕರ್ನಾಟಕ, ಮಹಾರಾಷ್ಟ್ರದಲ್ಲಿ ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡು ಓಡಾಡುತ್ತಿದ್ದ.

ಕಳೆದ ಅಕ್ಟೋಬರ್ 19ರಂದು ಅಮೃತಹಳ್ಳಿ ಠಾಣೆ ವ್ಯಾಪ್ತಿಯ ವಸತಿ ಸಮುಚ್ಚಯ ಒಂದರಲ್ಲಿ ನಿಲ್ಲಿಸಿದ್ದ ಫಾರ್ಚುನರ್ ಕಳವಾದ ಬಗ್ಗೆ ಅಭಿಷೇಕ್ ಎಂಬವರು ದೂರು ನೀಡಿದ್ದರು. ಪ್ರಕರಣದ ತನಿಖೆಗೆ ಈಶಾನ್ಯ ವಿಭಾಗದ ಡಿಸಿಪಿ, ವಿಷೇಷ ತಂಡವನ್ನು ರಚಿಸಿದ್ದರು. ಈ ವೇಳೆ, ಕಾರು ಕಳ್ಳ ಜೈಪುರದಲ್ಲಿ ಇರುವ ಬಗ್ಗೆ ಮಾಹಿತಿ ಪಡೆದು ಅಲ್ಲಿಗೆ ತೆರಳಿ ಆರೋಪಿಯನ್ನು ಹಿಡಿದು ತಂದಿದ್ದಾರೆ. ಆರೋಪಿ ಬಾಯಿ ಬಿಡಿಸಿದಾಗ, ಐಷಾರಾಮಿ ಕಾರು ಕಳವುಗೈಯುತ್ತಿದ್ದ ಪ್ರವರ ಹೊರಬಿದ್ದಿದೆ.
Rajasthan-based Satyendra Singh Shekhawat, who has stolen more than 40 cars across a dozen different states, was caught and arrested in Bangalore on Thursday.Shekhawat, who has a track record of stealing cars in Gujarat, Karnataka, Delhi, Maharashtra, Hyderabad, Tamil Nadu, Daman, Diu and Telangana, challenged police by saying “catch me if you can.”
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm