ಬ್ರೇಕಿಂಗ್ ನ್ಯೂಸ್
18-03-22 10:52 pm HK Desk news ಕ್ರೈಂ
ನವದೆಹಲಿ, ಮಾ.18: ಪ್ರಾಥಮಿಕ ಶಾಲೆಯಲ್ಲಿದ್ದಾಗ ಶಿಕ್ಷಕಿ ಅವಮಾನಿಸಿದ್ದನ್ನೇ ಸೇಡು ಇರಿಸಿಕೊಂಡಿದ್ದ ವ್ಯಕ್ತಿಯೊಬ್ಬ 30 ವರ್ಷಗಳ ನಂತರ ಆಕೆಯನ್ನು ಇರಿದು ಕೊಂದಿರುವ ಘಟನೆ ಬೆಲ್ಜಿಯಂನಲ್ಲಿ ನಡೆದಿದೆ.
1990ರಲ್ಲಿ ಶಿಕ್ಷಕಿಯಾಗಿದ್ದ ಮಾರಿಯಾ ವೆರ್ಲಿಂಡೆನ್ ಏಳು ವರ್ಷದ ಶಾಲಾ ಬಾಲಕ ಗುಂಟರ್ ಉವೆಂಟ್ಸ್ ಎಂಬಾತನ ಬಗ್ಗೆ ಮಾಡಿದ್ದ ಕಾಮೆಂಟ್ಗಳನ್ನು ಸೇಡು ಆಗಿ ಇರಿಸಿಕೊಂಡಿದ್ದ ಆತ ಮೂರು ದಶಕದ ಬಳಿಕ ಅದನ್ನು ತೀರಿಸಿಕೊಂಡಿದ್ದಾನೆ.
2020ರ ನವೆಂಬರ್ ನಲ್ಲಿ ಆಂಟ್ವರ್ಪ್ ನಗರದ ಹೆರೆಂಟಲ್ಸ್ ಎಂಬಲ್ಲಿನ ತನ್ನ ಮನೆಯಲ್ಲಿ 59 ವರ್ಷದ ವೆರ್ಲಿಂಡೆನ್ ಎಂಬ ಶಿಕ್ಷಕಿಯ ಘೋರ ಹತ್ಯೆ ನಡೆದಿತ್ತು. ಘಟನೆ ಬಗ್ಗೆ ಬೆಲ್ಜಿಯಂ ಪೊಲೀಸರು ತನಿಖೆ ನಡೆಸಿದ್ದು ನೂರಾರು ಡಿಎನ್ಎ ಮಾದರಿಗಳನ್ನು ಪಡೆದು ತನಿಖೆ ಕೈಗೊಂಡರೂ ಕೊಲೆಗಾರನನ್ನು ಹುಡುಕಲು ಸಾಧ್ಯವಾಗಿರಲಿಲ್ಲ. ಕೊನೆಗೆ, ಆಕೆಯ ಪತಿ ಸಾಕ್ಷಿಗಳಿಗಾಗಿ ಸಾರ್ವಜನಿಕ ಮನವಿಯನ್ನು ಮಾಡಿದ್ದರು.
ಆಕೆಯ ದೇಹದ ಮೇಲೆ 101 ಬಾರಿ ಇರಿಯಲಾಗಿದ್ದು ಭೀಭತ್ಸ ರೀತಿಯಲ್ಲಿ ಕೊಲೆ ಮಾಡಲಾಗಿತ್ತು. ಶವದ ಪಕ್ಕದಲ್ಲಿದ್ದ ಡೈನಿಂಗ್ ಟೇಬಲ್ ಮೇಲಿದ್ದ ಹಣದ ಪರ್ಸ್ ಮುಟ್ಟದೆ ಇದ್ದದ್ದು ನೋಡಿದರೆ ಹಣಕ್ಕಾಗಿ ನಡೆದ ಕೊಲೆ ಅಲ್ಲ ಎಂಬುದು ಪೊಲೀಸರಿಗೆ ತಿಳಿದುಬಂದಿತ್ತು. 2020ರ ನವೆಂಬರ್ 20ರಂದು ಕೊಲೆ ನಡೆದಿತ್ತು. ಹದಿನಾರು ತಿಂಗಳ ನಂತರ ಇತ್ತೀಚೆಗೆ ಆರೋಪಿ ಗುಂಟರ್ ಉವೆಂಟ್ಸ್ ತನ್ನ ಸ್ನೇಹಿತರ ಬಳಿ ಕೊಲೆ ವಿಚಾರವನ್ನು ಹೇಳಿಕೊಂಡು ಸಾಧನೆ ಎಂಬಂತೆ ಬಿಂಬಿಸಿದ್ದ.
ಅತ್ಯಂತ ನಿಗೂಢವಾಗಿದ್ದ ಕೊಲೆ ಪ್ರಕರಣದ ಬಗ್ಗೆ ತಿಳಿಯುತ್ತಲೇ ಆತನ ಸ್ನೇಹಿತರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಅದರಂತೆ, ತನಿಖೆ ಕೈಗೊಂಡ ಪೊಲೀಸರು ಆರೋಪಿ ಉವೆಂಟ್ಸ್ ನನ್ನು ಬಂಧಿಸಿದ್ದಾರೆ. ಕೊಲೆಯಾದ ಸ್ಥಳದಲ್ಲಿ ಪತ್ತೆಯಾದ ಕುರುಹುಗಳೊಂದಿಗೆ ಹೋಲಿಸಲು ಉವೆಂಟ್ಸ್ ಡಿಎನ್ಎ ಮಾದರಿಯನ್ನು ಪಡೆಯಲಾಗಿದೆ.
30 Years After Humiliation at School, Ex-Pupil Admits to Stabbing Teacher 101 Times.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm