ಬ್ರೇಕಿಂಗ್ ನ್ಯೂಸ್
18-03-22 10:52 pm HK Desk news ಕ್ರೈಂ
ನವದೆಹಲಿ, ಮಾ.18: ಪ್ರಾಥಮಿಕ ಶಾಲೆಯಲ್ಲಿದ್ದಾಗ ಶಿಕ್ಷಕಿ ಅವಮಾನಿಸಿದ್ದನ್ನೇ ಸೇಡು ಇರಿಸಿಕೊಂಡಿದ್ದ ವ್ಯಕ್ತಿಯೊಬ್ಬ 30 ವರ್ಷಗಳ ನಂತರ ಆಕೆಯನ್ನು ಇರಿದು ಕೊಂದಿರುವ ಘಟನೆ ಬೆಲ್ಜಿಯಂನಲ್ಲಿ ನಡೆದಿದೆ.
1990ರಲ್ಲಿ ಶಿಕ್ಷಕಿಯಾಗಿದ್ದ ಮಾರಿಯಾ ವೆರ್ಲಿಂಡೆನ್ ಏಳು ವರ್ಷದ ಶಾಲಾ ಬಾಲಕ ಗುಂಟರ್ ಉವೆಂಟ್ಸ್ ಎಂಬಾತನ ಬಗ್ಗೆ ಮಾಡಿದ್ದ ಕಾಮೆಂಟ್ಗಳನ್ನು ಸೇಡು ಆಗಿ ಇರಿಸಿಕೊಂಡಿದ್ದ ಆತ ಮೂರು ದಶಕದ ಬಳಿಕ ಅದನ್ನು ತೀರಿಸಿಕೊಂಡಿದ್ದಾನೆ.
2020ರ ನವೆಂಬರ್ ನಲ್ಲಿ ಆಂಟ್ವರ್ಪ್ ನಗರದ ಹೆರೆಂಟಲ್ಸ್ ಎಂಬಲ್ಲಿನ ತನ್ನ ಮನೆಯಲ್ಲಿ 59 ವರ್ಷದ ವೆರ್ಲಿಂಡೆನ್ ಎಂಬ ಶಿಕ್ಷಕಿಯ ಘೋರ ಹತ್ಯೆ ನಡೆದಿತ್ತು. ಘಟನೆ ಬಗ್ಗೆ ಬೆಲ್ಜಿಯಂ ಪೊಲೀಸರು ತನಿಖೆ ನಡೆಸಿದ್ದು ನೂರಾರು ಡಿಎನ್ಎ ಮಾದರಿಗಳನ್ನು ಪಡೆದು ತನಿಖೆ ಕೈಗೊಂಡರೂ ಕೊಲೆಗಾರನನ್ನು ಹುಡುಕಲು ಸಾಧ್ಯವಾಗಿರಲಿಲ್ಲ. ಕೊನೆಗೆ, ಆಕೆಯ ಪತಿ ಸಾಕ್ಷಿಗಳಿಗಾಗಿ ಸಾರ್ವಜನಿಕ ಮನವಿಯನ್ನು ಮಾಡಿದ್ದರು.
ಆಕೆಯ ದೇಹದ ಮೇಲೆ 101 ಬಾರಿ ಇರಿಯಲಾಗಿದ್ದು ಭೀಭತ್ಸ ರೀತಿಯಲ್ಲಿ ಕೊಲೆ ಮಾಡಲಾಗಿತ್ತು. ಶವದ ಪಕ್ಕದಲ್ಲಿದ್ದ ಡೈನಿಂಗ್ ಟೇಬಲ್ ಮೇಲಿದ್ದ ಹಣದ ಪರ್ಸ್ ಮುಟ್ಟದೆ ಇದ್ದದ್ದು ನೋಡಿದರೆ ಹಣಕ್ಕಾಗಿ ನಡೆದ ಕೊಲೆ ಅಲ್ಲ ಎಂಬುದು ಪೊಲೀಸರಿಗೆ ತಿಳಿದುಬಂದಿತ್ತು. 2020ರ ನವೆಂಬರ್ 20ರಂದು ಕೊಲೆ ನಡೆದಿತ್ತು. ಹದಿನಾರು ತಿಂಗಳ ನಂತರ ಇತ್ತೀಚೆಗೆ ಆರೋಪಿ ಗುಂಟರ್ ಉವೆಂಟ್ಸ್ ತನ್ನ ಸ್ನೇಹಿತರ ಬಳಿ ಕೊಲೆ ವಿಚಾರವನ್ನು ಹೇಳಿಕೊಂಡು ಸಾಧನೆ ಎಂಬಂತೆ ಬಿಂಬಿಸಿದ್ದ.
ಅತ್ಯಂತ ನಿಗೂಢವಾಗಿದ್ದ ಕೊಲೆ ಪ್ರಕರಣದ ಬಗ್ಗೆ ತಿಳಿಯುತ್ತಲೇ ಆತನ ಸ್ನೇಹಿತರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಅದರಂತೆ, ತನಿಖೆ ಕೈಗೊಂಡ ಪೊಲೀಸರು ಆರೋಪಿ ಉವೆಂಟ್ಸ್ ನನ್ನು ಬಂಧಿಸಿದ್ದಾರೆ. ಕೊಲೆಯಾದ ಸ್ಥಳದಲ್ಲಿ ಪತ್ತೆಯಾದ ಕುರುಹುಗಳೊಂದಿಗೆ ಹೋಲಿಸಲು ಉವೆಂಟ್ಸ್ ಡಿಎನ್ಎ ಮಾದರಿಯನ್ನು ಪಡೆಯಲಾಗಿದೆ.
30 Years After Humiliation at School, Ex-Pupil Admits to Stabbing Teacher 101 Times.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm