ಬ್ರೇಕಿಂಗ್ ನ್ಯೂಸ್
18-03-22 10:52 pm HK Desk news ಕ್ರೈಂ
ನವದೆಹಲಿ, ಮಾ.18: ಪ್ರಾಥಮಿಕ ಶಾಲೆಯಲ್ಲಿದ್ದಾಗ ಶಿಕ್ಷಕಿ ಅವಮಾನಿಸಿದ್ದನ್ನೇ ಸೇಡು ಇರಿಸಿಕೊಂಡಿದ್ದ ವ್ಯಕ್ತಿಯೊಬ್ಬ 30 ವರ್ಷಗಳ ನಂತರ ಆಕೆಯನ್ನು ಇರಿದು ಕೊಂದಿರುವ ಘಟನೆ ಬೆಲ್ಜಿಯಂನಲ್ಲಿ ನಡೆದಿದೆ.
1990ರಲ್ಲಿ ಶಿಕ್ಷಕಿಯಾಗಿದ್ದ ಮಾರಿಯಾ ವೆರ್ಲಿಂಡೆನ್ ಏಳು ವರ್ಷದ ಶಾಲಾ ಬಾಲಕ ಗುಂಟರ್ ಉವೆಂಟ್ಸ್ ಎಂಬಾತನ ಬಗ್ಗೆ ಮಾಡಿದ್ದ ಕಾಮೆಂಟ್ಗಳನ್ನು ಸೇಡು ಆಗಿ ಇರಿಸಿಕೊಂಡಿದ್ದ ಆತ ಮೂರು ದಶಕದ ಬಳಿಕ ಅದನ್ನು ತೀರಿಸಿಕೊಂಡಿದ್ದಾನೆ.
2020ರ ನವೆಂಬರ್ ನಲ್ಲಿ ಆಂಟ್ವರ್ಪ್ ನಗರದ ಹೆರೆಂಟಲ್ಸ್ ಎಂಬಲ್ಲಿನ ತನ್ನ ಮನೆಯಲ್ಲಿ 59 ವರ್ಷದ ವೆರ್ಲಿಂಡೆನ್ ಎಂಬ ಶಿಕ್ಷಕಿಯ ಘೋರ ಹತ್ಯೆ ನಡೆದಿತ್ತು. ಘಟನೆ ಬಗ್ಗೆ ಬೆಲ್ಜಿಯಂ ಪೊಲೀಸರು ತನಿಖೆ ನಡೆಸಿದ್ದು ನೂರಾರು ಡಿಎನ್ಎ ಮಾದರಿಗಳನ್ನು ಪಡೆದು ತನಿಖೆ ಕೈಗೊಂಡರೂ ಕೊಲೆಗಾರನನ್ನು ಹುಡುಕಲು ಸಾಧ್ಯವಾಗಿರಲಿಲ್ಲ. ಕೊನೆಗೆ, ಆಕೆಯ ಪತಿ ಸಾಕ್ಷಿಗಳಿಗಾಗಿ ಸಾರ್ವಜನಿಕ ಮನವಿಯನ್ನು ಮಾಡಿದ್ದರು.
ಆಕೆಯ ದೇಹದ ಮೇಲೆ 101 ಬಾರಿ ಇರಿಯಲಾಗಿದ್ದು ಭೀಭತ್ಸ ರೀತಿಯಲ್ಲಿ ಕೊಲೆ ಮಾಡಲಾಗಿತ್ತು. ಶವದ ಪಕ್ಕದಲ್ಲಿದ್ದ ಡೈನಿಂಗ್ ಟೇಬಲ್ ಮೇಲಿದ್ದ ಹಣದ ಪರ್ಸ್ ಮುಟ್ಟದೆ ಇದ್ದದ್ದು ನೋಡಿದರೆ ಹಣಕ್ಕಾಗಿ ನಡೆದ ಕೊಲೆ ಅಲ್ಲ ಎಂಬುದು ಪೊಲೀಸರಿಗೆ ತಿಳಿದುಬಂದಿತ್ತು. 2020ರ ನವೆಂಬರ್ 20ರಂದು ಕೊಲೆ ನಡೆದಿತ್ತು. ಹದಿನಾರು ತಿಂಗಳ ನಂತರ ಇತ್ತೀಚೆಗೆ ಆರೋಪಿ ಗುಂಟರ್ ಉವೆಂಟ್ಸ್ ತನ್ನ ಸ್ನೇಹಿತರ ಬಳಿ ಕೊಲೆ ವಿಚಾರವನ್ನು ಹೇಳಿಕೊಂಡು ಸಾಧನೆ ಎಂಬಂತೆ ಬಿಂಬಿಸಿದ್ದ.
ಅತ್ಯಂತ ನಿಗೂಢವಾಗಿದ್ದ ಕೊಲೆ ಪ್ರಕರಣದ ಬಗ್ಗೆ ತಿಳಿಯುತ್ತಲೇ ಆತನ ಸ್ನೇಹಿತರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಅದರಂತೆ, ತನಿಖೆ ಕೈಗೊಂಡ ಪೊಲೀಸರು ಆರೋಪಿ ಉವೆಂಟ್ಸ್ ನನ್ನು ಬಂಧಿಸಿದ್ದಾರೆ. ಕೊಲೆಯಾದ ಸ್ಥಳದಲ್ಲಿ ಪತ್ತೆಯಾದ ಕುರುಹುಗಳೊಂದಿಗೆ ಹೋಲಿಸಲು ಉವೆಂಟ್ಸ್ ಡಿಎನ್ಎ ಮಾದರಿಯನ್ನು ಪಡೆಯಲಾಗಿದೆ.
30 Years After Humiliation at School, Ex-Pupil Admits to Stabbing Teacher 101 Times.
03-08-26 03:23 pm
HK News Staffer
ಡಿಕೆಶಿ ಸರ್ಕಾರದ ಮೆಗಾ ಸಂಪುಟ ವಿಸ್ತರಣೆ ; ಸಂಜೆ 4ಕ್...
03-08-26 01:46 pm
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
03-08-26 01:48 pm
HK News Staffer
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm