ಬ್ರೇಕಿಂಗ್ ನ್ಯೂಸ್
22-09-20 12:24 pm Bangalore Correspondent ಕ್ರೈಂ
ಬೆಂಗಳೂರು, ಸೆಪ್ಟಂಬರ್ 22: ಹನ್ನೆರೆಡು ವರ್ಷಗಳ ಹಿಂದೆ ನಗರದಲ್ಲಿ ಎಸಗಿದ್ದ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿ ಶಂಕಿತ ಉಗ್ರ ಶೋಯಬ್ ಎಂಬಾತನನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.
2008ರಲ್ಲಿ ಬೆಂಗಳೂರಿನ ಮಡಿವಾಳ ಸೇರಿದಂತೆ ಹಲವು ಕಡೆ ನಡೆದಿದ್ದ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಶೋಯಬ್ ಭಾಗಿಯಾಗಿದ್ದ. ಘಟನೆ ನಡೆದಾಗಿನಿಂದಲೂ ಆರೋಪಿ ತಲೆಮರೆಸಿಕೊಂಡಿದ್ದ. ಆರೋಪಿ ಕೇರಳದಲ್ಲಿ ಇರುವ ಬಗ್ಗೆ ಮಾಹಿತಿ ಆಧರಿಸಿ ರಾಷ್ಟ್ರೀಯ ತನಿಖಾ ದಳಗಳ ಜತೆ ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದ್ದು, ಆತನನ್ನು ನಗರಕ್ಕೆ ಕರೆತರಲಾಗುತ್ತಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.

ಸಿಮಿ ಉಗ್ರ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಶೋಯಬ್ ಕೇರಳದ ಕಲ್ಲಿಕೋಟೆ ಪ್ರದೇಶದ ನಿವಾಸಿಯಾಗಿದ್ದು, ಸರಣಿ ಬಾಂಬ್ ಸ್ಫೋಟದಲ್ಲಿ ಭಾಗಿಯಾಗಿದ್ದು, ಬಳಿಕ ತಲೆಮರೆಸಿಕೊಂಡಿದ್ದಾನೆ. ಆತನ ಬಂಧನಕ್ಕೆ ತನಿಖಾ ಸಂಸ್ಥೆಗಳು ರೆಡ್ಕಾರ್ನರ್ ನೋಟಿಸ್ ಸಹ ಹೊರಡಿಸಿದ್ದವು. ಉಗ್ರ ರಿಯಾಜ್ ಭಟ್ಕಳನ ಆಪ್ತ ವಲಯದಲ್ಲಿ ಗುರ್ತಿಸಿಕೊಂಡಿದ್ದ ಶೋಯಬ್, ದೇಶದಲ್ಲಿ ನಡೆದ ವಿಧ್ವಂಸಕ ಕೃತ್ಯಗಳಿಗೆ ಸ್ಫೋಟಕಗಳನ್ನು ಸರಬರಾಜು ಮಾಡುವ ಕೆಲಸದಲ್ಲಿ ತೊಡಗಿದ್ದ ಎನ್ನಲಾಗಿದೆ.
ದೆಹಲಿಯಲ್ಲಿನ ಹವಾಲಾ ಪ್ರಕರಣದಲ್ಲೂ ಈತ ಭಾಗಿಯಾಗಿದ್ದ. 2008ರಲ್ಲಿ ನಡೆದ ಅಹಮದಾಬಾದ್ ಸರಣಿ ಸ್ಫೋಟ ಪ್ರಕರಣದಲ್ಲಿಯೂ ಪಾಲ್ಗೊಂಡಿರುವ ಶಂಕೆಯಿದೆ. ಈ ಬಗ್ಗೆಯೂ ತನಿಖೆ ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ. 2008ರ ಜುಲೈ 25ರಂದು ಮಡಿವಾಳ, ಮೈಸೂರು ರಸ್ತೆ ಸೇರಿದಂತೆ ನಗರದ ಒಂಭತ್ತು ಕಡೆ ಸರಣಿ ಬಾಂಬ್ ಸ್ಫೋಟ ಸಂಭವಿಸಿತ್ತು. ಸ್ಫೋಟದಲ್ಲಿ ಒಬ್ಬರು ಮೃತಪಟ್ಟು 20 ಮಂದಿ ಗಾಯಗೊಂಡಿದ್ದರು.
ಪ್ರಕರಣ ಸಂಬಂಧ ತನಿಖೆ ನಡೆಸಿದ್ದ ಪೊಲೀಸರು ಕೇರಳದ ಪೀಪಲ್ ಡೆಮಾಕ್ರಟಿಕ್ ಪಾರ್ಟಿ ಮುಖಂಡ ಅಬ್ದುಲ್ ನಾಜೀರ್ ಮದನಿ ಸೇರಿದಂತೆ ಹಲವರನ್ನು ಬಂಧಿಸಿತ್ತು. ಶೋಯಬ್ ಜತೆಗೆ ಉತ್ತರಪ್ರದೇಶ ಮೂಲದ ಮತ್ತೂಬ್ಬ ಉಗ್ರನನ್ನೂ ಬಂಧಿಸಲಾಗಿದೆ. ಇವರಿಬ್ಬರೂ ಸೌದಿ ಅರೇಬಿಯಾದಿಂದ ತಿರುವನಂತಪುರಂಗೆ ಆಗಮಿಸುತ್ತಿದ್ದರು. ಇವರು ಲಷ್ಕರ್ ಹಾಗೂ ಇಂಡಿಯನ್ ಮುಜಾಹಿದೀನ್ ಉಗ್ರ ಸಂಘಟನೆಗೆ ಸೇರಿದವರು ಎಂದು ಹೇಳಲಾಗಿದೆ.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
14-06-26 09:46 pm
HK News Staffer
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
ದಿನಕ್ಕೆ ಒಂದು ವಾಹನಕ್ಕೆ 200 ಲೀಟರ್ ಡೀಸೆಲ್ ಮಾತ್ರ...
13-06-26 03:01 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
14-06-26 10:30 pm
HK News Staffer
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm
ಬೆಂಗಳೂರಿನ ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ನಲ್ಲಿ ಅನ್...
13-06-26 08:43 pm
ಕಾಲೇಜು ಫೀಸ್ಗೆ ಕೊಟ್ಟ 10 ಸಾವಿರವೇ ಜೀವ ತೆಗೆಯಿತು!...
13-06-26 06:14 pm