ಬ್ರೇಕಿಂಗ್ ನ್ಯೂಸ್
22-09-20 12:24 pm Bangalore Correspondent ಕ್ರೈಂ
ಬೆಂಗಳೂರು, ಸೆಪ್ಟಂಬರ್ 22: ಹನ್ನೆರೆಡು ವರ್ಷಗಳ ಹಿಂದೆ ನಗರದಲ್ಲಿ ಎಸಗಿದ್ದ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿ ಶಂಕಿತ ಉಗ್ರ ಶೋಯಬ್ ಎಂಬಾತನನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.
2008ರಲ್ಲಿ ಬೆಂಗಳೂರಿನ ಮಡಿವಾಳ ಸೇರಿದಂತೆ ಹಲವು ಕಡೆ ನಡೆದಿದ್ದ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಶೋಯಬ್ ಭಾಗಿಯಾಗಿದ್ದ. ಘಟನೆ ನಡೆದಾಗಿನಿಂದಲೂ ಆರೋಪಿ ತಲೆಮರೆಸಿಕೊಂಡಿದ್ದ. ಆರೋಪಿ ಕೇರಳದಲ್ಲಿ ಇರುವ ಬಗ್ಗೆ ಮಾಹಿತಿ ಆಧರಿಸಿ ರಾಷ್ಟ್ರೀಯ ತನಿಖಾ ದಳಗಳ ಜತೆ ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದ್ದು, ಆತನನ್ನು ನಗರಕ್ಕೆ ಕರೆತರಲಾಗುತ್ತಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.
ಸಿಮಿ ಉಗ್ರ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಶೋಯಬ್ ಕೇರಳದ ಕಲ್ಲಿಕೋಟೆ ಪ್ರದೇಶದ ನಿವಾಸಿಯಾಗಿದ್ದು, ಸರಣಿ ಬಾಂಬ್ ಸ್ಫೋಟದಲ್ಲಿ ಭಾಗಿಯಾಗಿದ್ದು, ಬಳಿಕ ತಲೆಮರೆಸಿಕೊಂಡಿದ್ದಾನೆ. ಆತನ ಬಂಧನಕ್ಕೆ ತನಿಖಾ ಸಂಸ್ಥೆಗಳು ರೆಡ್ಕಾರ್ನರ್ ನೋಟಿಸ್ ಸಹ ಹೊರಡಿಸಿದ್ದವು. ಉಗ್ರ ರಿಯಾಜ್ ಭಟ್ಕಳನ ಆಪ್ತ ವಲಯದಲ್ಲಿ ಗುರ್ತಿಸಿಕೊಂಡಿದ್ದ ಶೋಯಬ್, ದೇಶದಲ್ಲಿ ನಡೆದ ವಿಧ್ವಂಸಕ ಕೃತ್ಯಗಳಿಗೆ ಸ್ಫೋಟಕಗಳನ್ನು ಸರಬರಾಜು ಮಾಡುವ ಕೆಲಸದಲ್ಲಿ ತೊಡಗಿದ್ದ ಎನ್ನಲಾಗಿದೆ.
ದೆಹಲಿಯಲ್ಲಿನ ಹವಾಲಾ ಪ್ರಕರಣದಲ್ಲೂ ಈತ ಭಾಗಿಯಾಗಿದ್ದ. 2008ರಲ್ಲಿ ನಡೆದ ಅಹಮದಾಬಾದ್ ಸರಣಿ ಸ್ಫೋಟ ಪ್ರಕರಣದಲ್ಲಿಯೂ ಪಾಲ್ಗೊಂಡಿರುವ ಶಂಕೆಯಿದೆ. ಈ ಬಗ್ಗೆಯೂ ತನಿಖೆ ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ. 2008ರ ಜುಲೈ 25ರಂದು ಮಡಿವಾಳ, ಮೈಸೂರು ರಸ್ತೆ ಸೇರಿದಂತೆ ನಗರದ ಒಂಭತ್ತು ಕಡೆ ಸರಣಿ ಬಾಂಬ್ ಸ್ಫೋಟ ಸಂಭವಿಸಿತ್ತು. ಸ್ಫೋಟದಲ್ಲಿ ಒಬ್ಬರು ಮೃತಪಟ್ಟು 20 ಮಂದಿ ಗಾಯಗೊಂಡಿದ್ದರು.
ಪ್ರಕರಣ ಸಂಬಂಧ ತನಿಖೆ ನಡೆಸಿದ್ದ ಪೊಲೀಸರು ಕೇರಳದ ಪೀಪಲ್ ಡೆಮಾಕ್ರಟಿಕ್ ಪಾರ್ಟಿ ಮುಖಂಡ ಅಬ್ದುಲ್ ನಾಜೀರ್ ಮದನಿ ಸೇರಿದಂತೆ ಹಲವರನ್ನು ಬಂಧಿಸಿತ್ತು. ಶೋಯಬ್ ಜತೆಗೆ ಉತ್ತರಪ್ರದೇಶ ಮೂಲದ ಮತ್ತೂಬ್ಬ ಉಗ್ರನನ್ನೂ ಬಂಧಿಸಲಾಗಿದೆ. ಇವರಿಬ್ಬರೂ ಸೌದಿ ಅರೇಬಿಯಾದಿಂದ ತಿರುವನಂತಪುರಂಗೆ ಆಗಮಿಸುತ್ತಿದ್ದರು. ಇವರು ಲಷ್ಕರ್ ಹಾಗೂ ಇಂಡಿಯನ್ ಮುಜಾಹಿದೀನ್ ಉಗ್ರ ಸಂಘಟನೆಗೆ ಸೇರಿದವರು ಎಂದು ಹೇಳಲಾಗಿದೆ.
23-10-25 03:42 pm
HK News Desk
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
23-10-25 03:39 pm
HK News Desk
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
23-10-25 10:52 pm
Mangalore Correspondent
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
ಜಾನುವಾರು ಸಾಗಾಟಕ್ಕೆ ಪೊಲೀಸರ ತಡೆ ; ಲಾರಿಯಿಂದ ಹಗ್ಗ...
22-10-25 09:55 pm
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
23-10-25 06:53 pm
Mangalore Correspondent
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm