ಬ್ರೇಕಿಂಗ್ ನ್ಯೂಸ್
21-03-22 09:41 am Mangalore Correspondent ಕ್ರೈಂ
ಪುತ್ತೂರು, ಮಾ.21 : ದಕ್ಷಿಣ ಕನ್ನಡ - ಕೊಡಗು ಜಿಲ್ಲೆಯ ಗಡಿಭಾಗ ಸಂಪಾಜೆಯಲ್ಲಿ ಜ್ಯೋತಿಷಿಯೊಬ್ಬರ ಮನೆಗೆ ನುಗ್ಗಿದ ದರೋಡೆಕೋರರ ತಂಡ ಚಿನ್ನಾಭರಣ ಮತ್ತು ನಗದು ಲೂಟಿಗೈದ ಘಟನೆ ಭಾನುವಾರ ರಾತ್ರಿ ನಡೆದಿದೆ.
ಸಂಪಾಜೆಯ ಚಟ್ಟೆಕಲ್ಲು ಎಂಬಲ್ಲಿ ಘಟನೆ ನಡೆದಿದ್ದು ಸ್ಥಳೀಯವಾಗಿ ಪುರೋಹಿತ ಮತ್ತು ಜ್ಯೋತಿಷಿಯಾಗಿ ಹೆಸರು ಗಳಿಸಿರುವ ಅಂಬರೀಶ್ ಭಟ್ ಎಂಬವರ ಮನೆಗೆ ನುಗ್ಗಿದ ತಂಡ ಕೃತ್ಯ ಎಸಗಿದೆ. ರಾತ್ರಿ 8.30 ರ ವೇಳೆಗೆ ಆಗಂತುಕರು ಎಳನೀರು ಕಡಿಯುವ ಕತ್ತಿ ಹಿಡಿದು ಮನೆಗೆ ನುಗ್ಗಿದ್ದಾರೆ. ಈ ವೇಳೆ, ಅಂಬರೀಶ್ ಭಟ್ ಮನೆಯಲ್ಲಿ ಇರಲಿಲ್ಲ.
ಅಂಬರೀಶ್ ಭಟ್ ಅವರಿಗೆ ಇಬ್ಬರು ಪುತ್ರರಿದ್ದು ಬೆಂಗಳೂರಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿದ್ದಾರೆ. ಎರಡು ದಿನಗಳ ಹಿಂದಷ್ಟೇ ದೊಡ್ಡ ಮಗ ಶ್ರೀವತ್ಸ ತನ್ನ ಪತ್ನಿಯ ಜೊತೆಗೆ ಮನೆಗೆ ಬಂದಿದ್ದರು. ದರೋಡೆ ಕೃತ್ಯದ ಸಂದರ್ಭದಲ್ಲಿ ಅತ್ತೆ ಮತ್ತು ಸೊಸೆ ಮಾತ್ರ ಇದ್ದರು. ಮನೆಗೆ ನುಗ್ಗಿದ ತಂಡ, ಸೊಸೆಯ ಕುತ್ತಿಗೆಯಲ್ಲಿದ್ದ ಕರಿಮಣಿ ಸರವನ್ನು ಕಿತ್ತುಕೊಂಡಿದ್ದಾರೆ. ಬಳಿಕ ಕತ್ತಿ ತೋರಿಸಿ ಬೆದರಿಸಿದ್ದು ಕಪಾಟಿನ ಕೀಲಿ ಕೈ ಕೊಡುವಂತೆ ಕೇಳಿದ್ದಾರೆ. ಜೀವ ಭಯದಿಂದ ಅತ್ತೆ , ಸೊಸೆ ಕೀಯನ್ನು ಕೊಟ್ಟಿದ್ದು ಆಗಂತುಕರು ಕಪಾಟಿನಲ್ಲಿದ್ದ ಸುಮಾರು ನೂರು ಗ್ರಾಂನಷ್ಟು ಚಿನ್ನದ ಒಡವೆ, ಒಂದುವರೆ ಲಕ್ಷದಷ್ಟು ಇದ್ದ ನಗದು ಹಣವನ್ನು ಕಿತ್ತುಕೊಂಡು ಕೆಲವೇ ಕ್ಷಣಗಳಲ್ಲಿ ಪರಾರಿಯಾಗಿದ್ದಾರೆ. ದರೋಡೆ ತಂಡದಲ್ಲಿದ್ದವರು ತಮಿಳು ಮಾತನಾಡುತ್ತಿದ್ದರು ಎನ್ನಲಾಗಿದೆ. ಸುಳ್ಯ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಕೈಗೊಂಡಿದ್ದಾರೆ.
Burglars enter house of Astrologer show them talwar and flee with gold and cash at house in Sampaje in Dakshina Kannada. The robbers were said to be talking in Tamil.
03-08-26 03:23 pm
HK News Staffer
ಡಿಕೆಶಿ ಸರ್ಕಾರದ ಮೆಗಾ ಸಂಪುಟ ವಿಸ್ತರಣೆ ; ಸಂಜೆ 4ಕ್...
03-08-26 01:46 pm
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
03-08-26 01:48 pm
HK News Staffer
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm