ಬ್ರೇಕಿಂಗ್ ನ್ಯೂಸ್
21-03-22 09:41 am Mangalore Correspondent ಕ್ರೈಂ
ಪುತ್ತೂರು, ಮಾ.21 : ದಕ್ಷಿಣ ಕನ್ನಡ - ಕೊಡಗು ಜಿಲ್ಲೆಯ ಗಡಿಭಾಗ ಸಂಪಾಜೆಯಲ್ಲಿ ಜ್ಯೋತಿಷಿಯೊಬ್ಬರ ಮನೆಗೆ ನುಗ್ಗಿದ ದರೋಡೆಕೋರರ ತಂಡ ಚಿನ್ನಾಭರಣ ಮತ್ತು ನಗದು ಲೂಟಿಗೈದ ಘಟನೆ ಭಾನುವಾರ ರಾತ್ರಿ ನಡೆದಿದೆ.
ಸಂಪಾಜೆಯ ಚಟ್ಟೆಕಲ್ಲು ಎಂಬಲ್ಲಿ ಘಟನೆ ನಡೆದಿದ್ದು ಸ್ಥಳೀಯವಾಗಿ ಪುರೋಹಿತ ಮತ್ತು ಜ್ಯೋತಿಷಿಯಾಗಿ ಹೆಸರು ಗಳಿಸಿರುವ ಅಂಬರೀಶ್ ಭಟ್ ಎಂಬವರ ಮನೆಗೆ ನುಗ್ಗಿದ ತಂಡ ಕೃತ್ಯ ಎಸಗಿದೆ. ರಾತ್ರಿ 8.30 ರ ವೇಳೆಗೆ ಆಗಂತುಕರು ಎಳನೀರು ಕಡಿಯುವ ಕತ್ತಿ ಹಿಡಿದು ಮನೆಗೆ ನುಗ್ಗಿದ್ದಾರೆ. ಈ ವೇಳೆ, ಅಂಬರೀಶ್ ಭಟ್ ಮನೆಯಲ್ಲಿ ಇರಲಿಲ್ಲ.
ಅಂಬರೀಶ್ ಭಟ್ ಅವರಿಗೆ ಇಬ್ಬರು ಪುತ್ರರಿದ್ದು ಬೆಂಗಳೂರಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿದ್ದಾರೆ. ಎರಡು ದಿನಗಳ ಹಿಂದಷ್ಟೇ ದೊಡ್ಡ ಮಗ ಶ್ರೀವತ್ಸ ತನ್ನ ಪತ್ನಿಯ ಜೊತೆಗೆ ಮನೆಗೆ ಬಂದಿದ್ದರು. ದರೋಡೆ ಕೃತ್ಯದ ಸಂದರ್ಭದಲ್ಲಿ ಅತ್ತೆ ಮತ್ತು ಸೊಸೆ ಮಾತ್ರ ಇದ್ದರು. ಮನೆಗೆ ನುಗ್ಗಿದ ತಂಡ, ಸೊಸೆಯ ಕುತ್ತಿಗೆಯಲ್ಲಿದ್ದ ಕರಿಮಣಿ ಸರವನ್ನು ಕಿತ್ತುಕೊಂಡಿದ್ದಾರೆ. ಬಳಿಕ ಕತ್ತಿ ತೋರಿಸಿ ಬೆದರಿಸಿದ್ದು ಕಪಾಟಿನ ಕೀಲಿ ಕೈ ಕೊಡುವಂತೆ ಕೇಳಿದ್ದಾರೆ. ಜೀವ ಭಯದಿಂದ ಅತ್ತೆ , ಸೊಸೆ ಕೀಯನ್ನು ಕೊಟ್ಟಿದ್ದು ಆಗಂತುಕರು ಕಪಾಟಿನಲ್ಲಿದ್ದ ಸುಮಾರು ನೂರು ಗ್ರಾಂನಷ್ಟು ಚಿನ್ನದ ಒಡವೆ, ಒಂದುವರೆ ಲಕ್ಷದಷ್ಟು ಇದ್ದ ನಗದು ಹಣವನ್ನು ಕಿತ್ತುಕೊಂಡು ಕೆಲವೇ ಕ್ಷಣಗಳಲ್ಲಿ ಪರಾರಿಯಾಗಿದ್ದಾರೆ. ದರೋಡೆ ತಂಡದಲ್ಲಿದ್ದವರು ತಮಿಳು ಮಾತನಾಡುತ್ತಿದ್ದರು ಎನ್ನಲಾಗಿದೆ. ಸುಳ್ಯ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಕೈಗೊಂಡಿದ್ದಾರೆ.
Burglars enter house of Astrologer show them talwar and flee with gold and cash at house in Sampaje in Dakshina Kannada. The robbers were said to be talking in Tamil.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm