ಬ್ರೇಕಿಂಗ್ ನ್ಯೂಸ್
24-03-22 10:38 pm HK Desk news ಕ್ರೈಂ
ಬಾಗಲಕೋಟೆ, ಮಾ.24: ಮುಸ್ಲಿಂ ಯುವಕನ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ಹಿಂದೂಗಳ ಬಗ್ಗೆ ಪ್ರಚೋದನಕಾರಿ ಪೋಸ್ಟ್ ಹಾಕುತ್ತಿದ್ದ ಹಿಂದು ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಸಿದ್ದಾರೂಢ ಶ್ರೀಕಾಂತ್ ಬಂಧಿತ. ಈತನನ್ನು ಬಾಗಲಕೋಟೆ ಸಿಇಎನ್ ಪೊಲೀಸರು ಅರೆಸ್ಟ್ ಮಾಡಿದ್ಧಾರೆ. ಬಂಧಿತ ಆರೋಪಿ ಮುಸ್ತಾಕ್ ಅಲಿ ಹೆಸರಲ್ಲಿ ಹಿಂದುಗಳನ್ನು ದ್ವೇ಼ಷಿಸಿ ಪೋಸ್ಟ್ ಹಾಕುತ್ತಿದ್ದ. ಈ ಬಗ್ಗೆ ಹಿಂದುಪರ ಸಂಘಟನೆ ಕಾರ್ಯಕರ್ತರು ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಆರೋಪಿಯ ಬಗ್ಗೆ ಮಾಹಿತಿ ಕಲೆಹಾಕಿ, ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಆರೋಪಿ ಸಿದ್ದಾರೂಢ ಶ್ರೀಕಾಂತ್ ಬಾಗಲಕೋಟೆಯ ಖಾಸಗಿ ಬ್ಯಾಂಕ್ನಲ್ಲಿ ಕೆಲಸ ಮಾಡುತ್ತಿದ್ದಾನೆ. ಮೂಲತಃ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಸಿದ್ದಿಕುರಬೇಟ ಗ್ರಾಮದ ನಿವಾಸಿ. ಶಿವಮೊಗ್ಗದಲ್ಲಿ ಹರ್ಷ ಕೊಲೆ ಬಳಿಕ ಈ ರೀತಿ ಪೋಸ್ಟ್ ಹಾಕಲು ಆರಂಭಿಸಿದ್ದ.
ಹಿಂದೂಗಳ ಬಗ್ಗೆ ಹೆಚ್ಚು ಒಲವು ಹೊಂದಿದ್ದು ಇಂತಹ ಪೋಸ್ಟ್ ಹಾಕಿ ಹಿಂದೂಗಳನ್ನು ಒಗ್ಗಟ್ಟಾಗಿಸಲು ಪ್ರಯತ್ನ ಮಾಡುತ್ತಿದ್ದೆ ಎಂದು ವಿಚಾರಣೆ ವೇಳೆ ಹೇಳಿರೋದಾಗಿ ತಿಳಿದು ಬಂದಿದೆ. ಇನ್ನು ಈತ ತನ್ನ ನಕಲಿ ಖಾತೆಗೆ “ಪಾಕಿಸ್ತಾನಿ ಮುಸ್ಲಿಂ” ಎಂದು ಗೂಗಲ್ ಸರ್ಚ್ ಮಾಡಿ ಟೋಪಿ ಹಾಕಿದ ಭಾರತೀಯ ಮುಸ್ಲಿಮನಂತೆ ಕಾಣುವ ಯಾರದ್ದೋ ಫೋಟೊ ಹಾಕಿದ್ದ.

ಎಷ್ಟೇ ಬುದ್ದಿವಂತಿಕೆ ಉಪಯೋಗಿಸಿದರೂ ನಾವು ಬಿಡೋದಿಲ್ಲ. ಸಮಾಜದ ಸ್ವಾಸ್ಥ್ಯ ಕೆಡಿಸುವ ಕೆಲಸ ಯಾರೂ ಮಾಡಬಾರದು ಎಂದು ಬಾಗಲಕೋಟೆ ಎಸ್ ಪಿ ಲೋಕೇಶ್ ಜಗಲಾಸರ್ ಹೇಳಿದ್ದಾರೆ.
Bagalkot Bank employee arrested for creating derogatory Facebook account and creating communal dispute.
03-08-26 03:23 pm
HK News Staffer
ಡಿಕೆಶಿ ಸರ್ಕಾರದ ಮೆಗಾ ಸಂಪುಟ ವಿಸ್ತರಣೆ ; ಸಂಜೆ 4ಕ್...
03-08-26 01:46 pm
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
03-08-26 01:48 pm
HK News Staffer
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm