ಬ್ರೇಕಿಂಗ್ ನ್ಯೂಸ್
31-03-22 08:41 pm Bengaluru Correspondent ಕ್ರೈಂ
ಬೆಂಗಳೂರು, ಮಾ.31: ಆಂಧ್ರಪ್ರದೇಶದ ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನದ ಆವರಣದಲ್ಲಿ ಕರ್ನಾಟಕದಿಂದ ತೆರಳಿದ ಕನ್ನಡಿಗ ಭಕ್ತರು ಮತ್ತು ಅಲ್ಲಿನ ಸ್ಥಳೀಯರ ನಡುವೆ ಭಾರೀ ಬೀದಿಕಾಳಗ ನಡೆದಿದ್ದು ಬಾಗಲಕೋಟ ಮೂಲದ ಯುವಕನೊಬ್ಬನಿಗೆ ಚೂರಿ ಇರಿತವಾಗಿದೆ.
ಬುಧವಾರ ಮಧ್ಯರಾತ್ರಿ ಘಟನೆ ನಡೆದಿದ್ದು ನೀರು ಕೇಳುವ ವಿಚಾರದಲ್ಲಿ ಮಾತಿಗೆ ಮಾತು ಬೆಳೆದು ಕಾದಾಟ ನಡೆದಿದೆ. ಈ ವೇಳೆ, ಬಾಗಲಕೋಟೆ ಮೂಲದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಅಲ್ಲದೆ, ಕರ್ನಾಟಕದಿಂದ ತೆರಳಿದ್ದ 50 ಕ್ಕೂ ವಾಹನಗಳಿಗೆ ಕಲ್ಲು ತೂರಿ ಹಾನಿ ಮಾಡಲಾಗಿದೆ. ಎರಡೂ ತಂಡಗಳು ರಸ್ತೆಯಲ್ಲಿ ಹೊಡೆದಾಟ ಮಾಡಿಕೊಂಡಿದ್ದು ಹಲವರಿಗೆ ಗಾಯಗಳಾಗಿವೆ.

ಬೀಳಗಿ ತಾಲೂಕಿನ ಜಾನಮಟ್ಟಿ ಗ್ರಾಮದ ಶ್ರೀಶೈಲ ವಾರಿಮಠ(28) ಎಂಬ ಯುವಕನಿಗೆ ಚೂರಿ ಇರಿತವಾಗಿದ್ದು ಪರಿಸ್ಥಿತಿ ಚಿಂತಾಜನಕವಾಗಿದೆ ಎಂಬ ಮಾಹಿತಿಯಿದೆ. ಹೀಗಾಗಿ ಆತನ ಹುಟ್ಟೂರು ಜಾನಮಟ್ಟಿ ಗ್ರಾಮದ ಮನೆಯಲ್ಲಿ ಆತಂಕದ ವಾತಾವರಣ ನೆಲೆಯಾಗಿದೆ.
ಸದ್ಯ ಶ್ರೀಶೈಲದಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದ್ದು ಎಲ್ಲ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗಿದೆ. ಭಕ್ತರ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದೆ.

ಯುಗಾದಿ ಸಂದರ್ಭದಲ್ಲಿ ಪ್ರತಿ ವರ್ಷ ಕರ್ನಾಟಕದ ಸಾವಿರಾರು ಭಕ್ತರು ಶ್ರೀಶೈಲಕ್ಕೆ ಹೋಗುವ ವಾಡಿಕೆಯಿದೆ. ಹೀಗಾಗಿ ಕಳೆದ ಎರಡು ದಿನಗಳಿಂದ ಕನ್ನಡಿಗ ಭಕ್ತರು ಅಲ್ಲಿಗೆ ತೆರಳಿದ್ದರು. ಚೂರಿ ಇರಿತಕ್ಕೊಳಗಾಗಿರುವ ಯುವಕ ಕಳೆದ ಹದಿನೈದು ವರ್ಷದಿಂದ ಶ್ರೀಶೈಲಕ್ಕೆ ಹೋಗುತ್ತಿದ್ದು ಶ್ರೀಶೈಲ ಮಲ್ಲಿಕಾರ್ಜುನ ಭಕ್ತನಾಗಿದ್ದ. ಯುವಕನ ಹೆಸರನ್ನೂ ಶ್ರೀಶೈಲದ ಹೆಸರಿನಲ್ಲೇ ಹೆತ್ತವರು ಇಟ್ಟಿದ್ದು ಬಾಗಲಕೋಟ, ವಿಜಯಪುರ, ರಾಯಚೂರು ಭಾಗದ ಮಂದಿ ಅತಿ ಹೆಚ್ಚು ಸಂಖ್ಯೆಯಲ್ಲಿ ಶ್ರೀಶೈಲ ಹೋಗುವುದನ್ನು ರೂಢಿಸಿಕೊಂಡಿದ್ದಾರೆ.
ವದಂತಿ ಹರಡಿ ಗಲಾಟೆ, ಯುವಕ ಸುರಕ್ಷಿತ - ಸ್ವಾಮೀಜಿ ಹೇಳಿಕೆ

ಕರ್ನಾಟಕ ಭಕ್ತರು ಹಾಗೂ ಆಂಧ್ರ ಪ್ರದೇಶದ ವ್ಯಾಪಾರಿಗಳ ಮಧ್ಯೆ ಗಲಾಟೆ ನಡೆದಿರುವ ಹಿನ್ನೆಲೆಯಲ್ಲಿ ಘಟನೆ ಕುರಿತು ಶ್ರೀಶೈಲದ ಸ್ವಾಮೀಜಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಶ್ರೀಶೈಲ ಜಗದ್ದುರು ಡಾ. ಶ್ರೀ ಚೆನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿ ಹೇಳಿಕೆ ನೀಡಿದ್ದು ನಿನ್ನೆ ರಾತ್ರಿ ಕರ್ನಾಟಕ ಓರ್ವ ಭಕ್ತ ಹಾಗೂ ಸ್ಥಳಿಯ ಹೊಟೇಲ್ ನಡೆಸುತ್ತಿದ್ದ ವ್ಯಕ್ತಿ ನಡುವೆ ಜಗಳವಾಗಿದೆ. ಇದೇ ಜಗಳ ಎರಡು ಸಮುದಾಯಗಳ ನಡುವೆ ಹಬ್ಬಿ ಗಲಾಟೆಯಾಗಿದೆ. ಕರ್ನಾಟಕದ ವ್ಯಕ್ತಿ ಮೇಲೆ ಸ್ಥಳೀಯ ವ್ಯಕ್ತಿ ಹಲ್ಲೆ ಮಾಡಿದ್ದಾನೆ. ಕರ್ನಾಟಕದ ವ್ಯಕ್ತಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಆದರೆ ಗಾಯಾಳು ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ಸುದ್ದಿ ಹರಡಿದೆ. ಇದೇ ಸುದ್ದಿ ಹರಡಿರುವ ಕಾರಣ ಇಲ್ಲಿ ಗಲಾಟೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಆಬಳಿಕ ನಾವೇ ಸ್ವತಃ ಸ್ಥಳಕ್ಕೆ ಭೇಟಿ ನೀಡಿ ಎಲ್ಲರಿಗೂ ಸಮಾಧಾನ ಮಾಡಿದ್ದೇವೆ. ಸದ್ಯಕ್ಕೆ ಇಲ್ಲಿ ಪರಸ್ಥಿತಿ ಸಹಜವಾಗಿದೆ ಎಂದು ಹೇಳಿಕೆ ನೀಡಿದ್ದಾರೆ.

ಅಲ್ಲದೆ, ಕರ್ನಾಟಕದ ಭಕ್ತರೆಲ್ಲ ಇಲ್ಲಿ ಸುರಕ್ಷಿತವಾಗಿದ್ದಾರೆ. ಕನ್ನಡಿಗರಿಗೆ ಇಲ್ಲಿ ಯಾವುದೇ ತೊಂದರೆ, ಜೀವಭಯ ಇಲ್ಲ. ಗಲಾಟೆಯಲ್ಲಿ ಹಲ್ಲೆಗೊಳಗಾದ ಕರ್ನಾಟಕದ ವ್ಯಕ್ತಿ ಮೃತಪಟ್ಟಿಲ್ಲ. ತಲೆಗೆ ಪೆಟ್ಟಾಗಿರುವ ಕಾರಣ ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಸೊನ್ನಿ ಪೇಟೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ, ಆತನ ಆರೋಗ್ಯ ವಿಚಾರಿಸಿಕೊಂಡು ಬಂದಿದ್ದೇನೆ. ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ಸ್ವಾಮೀಜಿ ಹೇಳಿಕೆ ನೀಡಿದ್ದಾರೆ.
Fight erupts at Srisailam in Andhra, 50 cars of kannadigas damaged, youth from Karnataka stabbed.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm