ಬ್ರೇಕಿಂಗ್ ನ್ಯೂಸ್
03-04-22 05:25 pm Mangalore Correspondent ಕ್ರೈಂ
ಮಂಗಳೂರು, ಎ.3 : ಮಹಿಳೆಯೊಬ್ಬರ ಮೈಗೆ ಕೈ ಮಾಡಿದ್ದಲ್ಲದೆ, ಆಕೆಗೆ ದೈಹಿಕ ಹಲ್ಲೆಗೈದ ಆರೋಪದಲ್ಲಿ ಸಾಮಾಜಿಕ ಕಾರ್ಯಕರ್ತ ಆಸಿಫ್ ಆಪತ್ಬಾಂಧವ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಮೂಲತಃ ಶಿವಮೊಗ್ಗ ಮೂಲದ ವನಜಾ ಎಂಬ ಮಹಿಳೆ ಮಂಗಳೂರಿನ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದು ಪೊಲೀಸರು ಕ್ರಮ ಜರುಗಿಸಿದ್ದಾರೆ. ದೂರಿನ ಪ್ರಕಾರ, ಮಹಿಳೆಯು ಆಸಿಫ್ ಅವರ ಮೂಲ್ಕಿಯಲ್ಲಿರುವ ಮೈಮೂನ ಫೌಂಡೇಶನ್ ಅಡಿ ಕಾರ್ಯ ನಿರ್ವಹಿಸುವ ಆಶ್ರಮದಲ್ಲಿ ಕಳೆದ ಒಂದು ವರ್ಷದಿಂದ ಆಶ್ರಯ ಪಡೆದಿದ್ದರು. ಈ ವೇಳೆ ಅಲ್ಲಿ ಆಶ್ರಮ ನೋಡಿಕೊಳ್ಳುತ್ತಿದ್ದ ಶಶಿಧರ್ ಎಂಬಾತ ಹಣಕಾಸು ವಂಚನೆ ಮಾಡಿ ಪರಾರಿಯಾಗಿದ್ದ. ಆತನಿಗೆ ಮಹಿಳೆ ಸಹಾಯ ಮಾಡಿದ್ದಾಳೆ ಎನ್ನುವ ಆರೋಪದಲ್ಲಿ ಆಸಿಫ್, ಶಿವಲಿಂಗ ಮತ್ತು ಮಹಮ್ಮದ್ ಅಫ್ತಾಬ್ ಸೇರಿ ಹಲ್ಲೆಗೈದು ಮಾನಸಿಕ ಕಿರುಕುಳ ನೀಡಿದ್ದಾರೆ.
ಮಹಿಳೆ ವನಜಾ ಈ ಹಿಂದೆ ಮಂಗಳೂರಿನ ಆಸ್ಪತ್ರೆಯಲ್ಲಿ ಹೋಮ್ ನರ್ಸ್ ಆಗಿದ್ದು ಕೊರೊನಾ ಬಳಿಕ ಕೆಲಸ ಕಳಕೊಂಡು ಕೆಲಸಕ್ಕಾಗಿ ಪಂಪ್ವೆಲ್ ನಲ್ಲಿ ಅಂಗಡಿ ಹೊಂದಿರುವ ಶಿವಲಿಂಗ ಬಳಿಗೆ ಹೋಗಿದ್ದಳು. ಶಿವಲಿಂಗ, ಬಳಿಕ ಆಸಿಫ್ ಗೆ ಮಾಹಿತಿ ನೀಡಿ ಆಶ್ರಮಕ್ಕೆ ಸೇರಿಸುವಂತೆ ಸಲಹೆ ನೀಡಿದ್ದ. ಅದರಂತೆ ಆಸಿಫ್ ಮಹಿಳೆಯನ್ನು ಕರೆದೊಯ್ದು ಆಶ್ರಮದಲ್ಲಿ ಆಶ್ರಯ ನೀಡಿದ್ದರು. ಈ ವೇಳೆ, ಆಶ್ರಮದ ಹಣಕಾಸು ವಿಚಾರದಲ್ಲಿ ವಂಚನೆ ಆಗಿದ್ದರಿಂದ ಮಹಿಳೆ ಮತ್ತು ಶಶಿಧರ್ ಬಳಿ ಆಸಿಫ್ ಪ್ರಶ್ನೆ ಮಾಡಿದ್ದರು.


ಹಣ ಕೇಳಿ, ವಿಕೆಟ್ ಮತ್ತು ಬೆಲ್ಟ್ ನಲ್ಲಿ ಹೊಡೆದಿದ್ದಾರೆಂದು ಮಹಿಳೆ ಆರೋಪಿಸಿದ್ದು ಬಳಿಕ ಆಕೆಯನ್ನು ಎಜೆ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಲ್ಲಿ ಮಹಡಿಯಿಂದ ಬಿದ್ದು ಗಾಯಗೊಂಡಿರುವುದಾಗಿ ಸುಳ್ಳು ಹೇಳಲು ಆಸಿಫ್ ಹೇಳಿದ್ದ. ಇಲ್ಲದಿದ್ದರೆ ಜೀವ ಸಹಿತ ಬಿಡುವುದಿಲ್ಲ ಎಂದು ಆಸಿಫ್ ಬೆದರಿಕೆ ಹಾಕಿದ್ದು ಚಿಕಿತ್ಸೆ ನೀಡಿದ್ದ ವೈದ್ಯರು ಕೈಗೆ ಪೆಟ್ಟು ಬಿದ್ದ ಜಾಗಕ್ಕೆ ಪ್ಲಾಸ್ಟರ್ ಹಾಕಿದ್ದರು. ಕೈಗೆ ಬಿದ್ದ ಪೆಟ್ಟಿನ ಬಗ್ಗೆ ವೈದ್ಯರಿಗೆ ಅನುಮಾನ ಬಂದಿತ್ತು. ಬಳಿಕ ಮಹಿಳೆ ಪಾಂಡೇಶ್ವರ ಠಾಣೆಯಲ್ಲಿ ದೂರು ನೀಡಿದ್ದು ಆಸಿಫ್, ಶಿವಲಿಂಗ ಮತ್ತು ಅಫ್ತಾಬ್ ಸೇರಿ ಹಲ್ಲೆಗೈದ ಬಗ್ಗೆ ಪ್ರಕರಣ ದಾಖಲಾಗಿದೆ. ಮಾನಭಂಗ ಯತ್ನ, ಕೊಲೆ ಬೆದರಿಕೆ, ಹಲ್ಲೆಗೈದ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
The Pandeshwar Women’s police have arrested three persons including Asif Apathbandava for assaulting a woman at the Maimuna Foundation on April 2. The arrested have been identified as Mohammed Asif Apathbandava (39) from Mulki Karnad, Shivaling (40) from Pumpwell and Aftab (32) from Mulki.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 10:43 am
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm