ಬ್ರೇಕಿಂಗ್ ನ್ಯೂಸ್
04-04-22 08:22 pm HK Desk news ಕ್ರೈಂ
ಲಕ್ನೋ, ಎ.4: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರತಿನಿಧಿಸುವ ಕ್ಷೇತ್ರದ ಗೋರಖನಾಥ್ ದೇವಸ್ಥಾನದ ಆವರಣಕ್ಕೆ ಕತ್ತಿ ಹಿಡಿದು ನುಗ್ಗಿದ ಆಗಂತುಕನೊಬ್ಬ ಅಲ್ಲಿದ್ದ ಸೆಕ್ಯುರಿಟಿ ಗಾರ್ಡ್ ಆಗಿದ್ದ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ. ಭಾನುವಾರ ರಾತ್ರಿ ವ್ಯಕ್ತಿ ದೇವಸ್ಥಾನದ ಆವರಣಕ್ಕೆ ಬಂದಿದ್ದು, ಸಿಬಂದಿ ಆತನನ್ನು ಬೆನ್ನಟ್ಟಿ ಹಿಡಿಯುವ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಕೃತ್ಯವನ್ನು ಉತ್ತರ ಪ್ರದೇಶ ಗೃಹ ಸಚಿವಾಲಯ ಭಯೋತ್ಪಾದನಾ ಕೃತ್ಯ ಎಂದು ಹೇಳಿದ್ದು, ಘಟನೆ ಬಗ್ಗೆ ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನು ನೇಮಕ ಮಾಡಿದೆ. ಬಂಧಿತ ಯುವಕನನ್ನು ಅಹ್ಮದ್ ಮುರ್ತಾಜಾ ಅಬ್ಬಾಸಿ ಎಂದು ಗುರುತಿಸಲಾಗಿದ್ದು, ಆತ ಕೆಮಿಕಲ್ ಇಂಜಿನಿಯರ್ ಓದಿದ್ದ ವ್ಯಕ್ತಿ ಅನ್ನುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಘಟನೆ ಸಂದರ್ಭದಲ್ಲಿ ಇಬ್ಬರು ಸೆಕ್ಯುರಿಟಿ ಸಿಬಂದಿಗೆ ಗಾಯವಾಗಿದೆ.

ಆಗಂತುಕನನ್ನು ಸಕಾಲದಲ್ಲಿ ಹಿಡಿದು ಬಂಧಿಸಿದ ಇಬ್ಬರು ಪೊಲೀಸ್ ಸಿಬಂದಿಗೆ ಉತ್ತರ ಪ್ರದೇಶ ಸರಕಾರ ತಲಾ 5 ಲಕ್ಷ ಬಹುಮಾನ ಘೋಷಿಸಿದೆ. ಅಲ್ಲದೆ, ಘಟನೆ ಬಗ್ಗೆ ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನು ನೇಮಕ ಮಾಡಿದೆ. ಆರೋಪಿ ಆಹ್ಮದ್ ಮುರ್ತಾಜಾ 2015ರಲ್ಲಿ ಐಐಟಿ ಪದವಿ ಪೂರೈಸಿದ್ದು ಆನಂತರ ಎರಡು ಕಂಪನಿಗಳಲ್ಲಿ ಕೆಲಸ ಮಾಡಿದ್ದ. ಈ ನಡುವೆ ಮಾನಸಿಕ ಖಿನ್ನತೆಗೊಳಗಾಗಿ ಪತ್ನಿಯ ಜೊತೆಗೂ ಜಗಳ ಮಾಡಿದ್ದ. ಇದೇ ಕಾರಣದಿಂದ ದೇವಸ್ಥಾನ ಆವರಣಕ್ಕೆ ನುಗ್ಗಿರುವ ಸಾಧ್ಯತೆಯಿದೆ ಎಂದು ಆತನ ಕುಟುಂಬಸ್ಥರು ಪೊಲೀಸರಿಗೆ ತಿಳಿಸಿದ್ದಾರೆ.
The incident at Gorakhnath temple was part of a "serious conspiracy", the Uttar Pradesh government's Home department said in a statement on Monday.Ahmad Murtaza Abbasi, a chemical engineer, attacked security personnel deployed at the Gorakhnath temple in UP's Gorakhpur on Sunday night. A video of the incident shows the accused chasing security personnel with a sickle.Two jawans of the Uttar Pradesh Provincial Armed Constabulary suffered injuries in the incident.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm