ಬ್ರೇಕಿಂಗ್ ನ್ಯೂಸ್
11-04-22 01:08 pm Mangalore Correspondent ಕ್ರೈಂ
ಮಂಗಳೂರು, ಎ.11: ನಗರದ ವೆಲೆನ್ಸಿಯಾದಲ್ಲಿ ಚಿಕನ್ ಅಂಗಡಿಯ ಸಿಬಂದಿಗೆ ಹಲ್ಲೆಗೈದು ಸಾರ್ವಜನಿಕರಿಗೆ ಬೆದರಿಕೆ ಹಾಕಿದ ಪ್ರಕರಣ ನಡೆದಿದ್ದು, ಘಟನೆ ಸಂಬಂಧಿಸಿ ಪೊಲೀಸರು ಇಬ್ಬರು ರೌಡಿಗಳನ್ನು ಬಂಧಿಸಿದ್ದಾರೆ.
ಕಂಕನಾಡಿ ನಗರ ಠಾಣೆ ವ್ಯಾಪ್ತಿಯ ರೌಡಿ ಶೀಟರ್ ಗಳಾದ ಪ್ರೀತಂ ಅಲಿಯಾಸ್ ಪ್ರೀತಂ ಪೂಜಾರಿ ಮತ್ತು ಧೀರಜ್ ಕುಮಾರ್ ಅಲಿಯಾಸ್ ಧೀರು ಬಂಧಿತರು. ಭಾನುವಾರ ಸಂಜೆ ವೆಲೆನ್ಸಿಯಾದ ಕೋಳಿ ಅಂಗಡಿಯ ಮುಂದೆ ಇವರಿಬ್ಬರು ಸೇರಿ ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸುತ್ತಿದ್ದರು. ಈ ವೇಳೆ, ಕೋಳಿ ಅಂಗಡಿಯಲ್ಲಿದ್ದ ಸಿಬಂದಿ ಪ್ರಶ್ನೆ ಮಾಡಿದ್ದು, ಇಲ್ಲಿ ರಂಪ ಮಾಡದಂತೆ ಸೂಚಿಸಿದ್ದಾರೆ.


ಇದರಿಂದ ಸಿಟ್ಟಿಗೆದ್ದ ರೌಡಿಗಳು ಚಿಕನ್ ಸೆಂಟರಿನಲ್ಲಿದ್ದ ಸುನಿಲ್, ಅನಂತ ಮತ್ತು ಜೀವನ್ ಎಂಬ ಮೂವರು ಸಿಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲದೆ, ಚೂರಿಯಿಂದ ಇರಿಯಲು ಯತ್ನಿಸಿದ್ದಾರೆ. ಅಷ್ಟರಲ್ಲಿ ಇತರ ಸಾರ್ವಜನಿಕರು ಸೇರಿದ್ದು, ಚೂರಿಯಿಂದ ಇರಿಯುವುದನ್ನು ತಪ್ಪಿಸಿದ್ದಾರೆ. ಆನಂತರ ಸಾರ್ವಜನಿಕರಿಗೂ ಚೂರಿ ತೋರಿಸಿ ಬೆದರಿಸಿದ್ದು ಯಾರಾದ್ರೂ ಹತ್ತಿರ ಬಂದಲ್ಲಿ ತಲೆ ತೆಗೀತೀವಿ ಎಂದು ಬೆದರಿಕೆ ಹಾಕಿದ್ದಾರೆ. ಇಷ್ಟರಲ್ಲೇ ಪೊಲೀಸರ ಕಂಟ್ರೋಲ್ ರೂಂಗೆ ಫೋನ್ ಹೋಗಿತ್ತು. ಸಂಜೆ 7 ಗಂಟೆ ಸುಮಾರಿಗೆ ಬೀದಿ ರಂಪ ಮಾಡುತ್ತಿದ್ದ ಜಾಗಕ್ಕೆ ಪೊಲೀಸರು ಬಂದಿದ್ದು ಸಾರ್ವಜನಿಕರ ಸಹಾಯದಿಂದ ಇಬ್ಬರು ರೌಡಿಗಳನ್ನೂ ಹಿಡಿದು ಬಂಧಿಸಿದ್ದಾರೆ. ಹೆಲ್ಮೆಟ್, ಕಲ್ಲುಗಳನ್ನು ಬಳಸಿ ಚಿಕನ್ ಸೆಂಟರ್ ಸಿಬಂದಿಗೆ ಹಲ್ಲೆ ನಡೆಸಿದ್ದರು.

ಪೊಲೀಸರು ಅವರಲ್ಲಿದ್ದ ಎರಡು ಚೂರಿಯನ್ನು ವಶಕ್ಕೆ ಪಡೆದಿದ್ದಾರೆ. ಇಬ್ಬರನ್ನೂ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು ಕುಡಿದ ಮತ್ತಿನಲ್ಲಿದ್ದು, ಪ್ರೀತಂ ಗಾಂಜಾ ವ್ಯಸನಿಯೂ ಆಗಿದ್ದ. ಪ್ರೀತಂ ಬಜಾಲ್ ಜಲ್ಲಿಗುಡ್ಡೆ ನಿವಾಸಿಯಾಗಿದ್ದು, ಡಕಾಯಿತಿ, ಸುಲಿಗೆ, ಕೊಲೆಯತ್ನ ಸೇರಿ ಎಂಟು ಪ್ರಕರಣ ಎದುರಿಸುತ್ತಿದ್ದಾನೆ. ಕಂಕನಾಡಿ ನಗರ, ಗ್ರಾಮಾಂತರ ಮತ್ತು ಕದ್ರಿ ಠಾಣೆಯಲ್ಲಿ ಕೇಸುಗಳಿವೆ. ಧೀರಜ್ ಕುಮಾರ್ ಕೊಲೆಯತ್ನ, ರಾಬರಿ ಸೇರಿ ಹತ್ತು ಪ್ರಕರಣಗಳನ್ನು ಎದುರಿಸುತ್ತಿದ್ದಾನೆ. ಮಂಗಳೂರಿನ ನಾಲ್ಕು ಠಾಣೆಗಳ ವ್ಯಾಪ್ತಿಯಲ್ಲಿ ಈತನ ವಿರುದ್ಧ ಕೇಸುಗಳಿವೆ.
City south police station personnel arrested rowdy sheeters Preetam alias Preetam Poojary and Dheeraj Kumar alias Dheeru on Sunday April 10 evening for creating fear among the public and hitting staff working at Ideal Chicken stall of Valencia in the city.According to the details of the incident, accused Preetam and Dheeraj were beating a person with their fist in front of Ideal Chicken stall at Valencia at around 6.30 pm on Sunday.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm