ಬ್ರೇಕಿಂಗ್ ನ್ಯೂಸ್
23-09-20 07:39 pm Bangalore Correspondent ಕ್ರೈಂ
ಬೆಂಗಳೂರು, ಸೆಪ್ಟಂಬರ್ 23: ಸಿಸಿಬಿ ಪೊಲೀಸರು ಒಂದೆಡೆ ಡ್ರಗ್ಸ್ ಪ್ರಕರಣದ ಬುಡವನ್ನೇ ಜಾಲಾಡುತ್ತಿದ್ದರೆ, ಸಿಸಿಬಿಯಲ್ಲೇ ಇದ್ದ ಎಸಿಪಿ ದರ್ಜೆಯ ಅಧಿಕಾರಿಯೊಬ್ಬ ತನಿಖೆಯ ಮಾಹಿತಿಗಳನ್ನು ಆರೋಪಿಗಳಿಗೆ ಸೋರಿಕೆ ಮಾಡುತ್ತಿದ್ದರು. ಡ್ರಗ್ಸ್ ಪ್ರಕರಣದಲ್ಲಿ ಆರೋಪಿಗಳ ವಿಚಾರಣೆ ವೇಳೆ ಎಸಿಪಿಯ ಕೈವಾಡ ಕಂಡುಬಂದಿತ್ತು. ಇದನ್ನು ತಿಳಿದ ಬೆಂಗಳೂರು ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್, ಸರಕಾರಕ್ಕೆ ಪತ್ರ ಬರೆದು ಕ್ರಮಕ್ಕೆ ಒತ್ತಾಯಿಸಿದ್ದರು. ಇದೀಗ ಸಿಸಿಬಿಯ ಎಸಿಪಿ ಆಗಿದ್ದ ಮುದವಿ ಎಂಬವರನ್ನು ರಾಜ್ಯ ಸರಕಾರ ಅಮಾನತುಗೊಳಿಸಿ ಆದೇಶ ಮಾಡಿದೆ.
ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣದಲ್ಲಿ ಕಿಂಗ್ ಪಿನ್ ಎನ್ನಲಾಗುತ್ತಿರುವ ದೆಹಲಿ ಮೂಲದ ವೀರೇನ್ ಖನ್ನಾ ಜೊತೆಗೆ ಎಸಿಪಿ ಮುದವಿ ಸಂಪರ್ಕ ಹೊಂದಿದ್ದಲ್ಲದೆ, ತನಿಖಾ ಮಾಹಿತಿಯನ್ನು ಆರೋಪಿಗಳಿಗೆ ಸೋರಿಕೆ ಮಾಡುತ್ತಿದ್ದರು. ಈ ವಿಚಾರ ಆರೋಪಿಗಳ ತನಿಖೆ ಸಂದರ್ಭದಲ್ಲಿ ಸಿಸಿಬಿ ಮುಖ್ಯಸ್ಥರಿಗೆ ತಿಳಿದುಬಂದಿತ್ತು. ಖಚಿತ ಮಾಹಿತಿ ಜೊತೆಗೆ ಸಂದೀಪ್ ಪಾಟೀಲ್, ಈ ಬಗ್ಗೆ ಸರಕಾರಕ್ಕೆ ಪತ್ರ ಬರೆದಿದ್ದರು. ಎಸಿಪಿ ಮುದವಿ, ಡ್ರಗ್ಸ್ ಪ್ರಕರಣದಲ್ಲಿ ಸಿಸಿಬಿ ತನಿಖಾ ತಂಡದಲ್ಲಿ ಇರಲಿಲ್ಲ. ಸಿಸಿಬಿ ಮಹಿಳಾ ಸುರಕ್ಷತಾ ವಿಭಾಗದಲ್ಲಿ ಎಸಿಪಿ ಆಗಿದ್ದರು. ಆದರೆ, ತಂಡದಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿದ್ದ ಮಲ್ಲಿಕಾರ್ಜುನ ಎಸಿಪಿಗೆ ಮಾಹಿತಿ ನೀಡುತ್ತಿದ್ದರು. ಇವರಿಬ್ಬರು ಡ್ರಗ್ಸ್ ಪ್ರಕರಣದಲ್ಲಿ ಆರೋಪಿಗಳಿಗೆ ತನಿಖೆಯ ಮಾಹಿತಿಗಳನ್ನು ಸೋರಿಕೆ ಮಾಡುತ್ತಿದ್ದ ವಿಚಾರ ವಿಚಾರಣೆಯಲ್ಲಿ ತಿಳಿದುಬಂದಿತ್ತು. ಇದೀಗ ಹೆಡ್ ಕಾನ್ಸ್ ಟೇಬಲ್ ಮತ್ತು ಎಸಿಪಿ ಇಬ್ಬರನ್ನೂ ಸರಕಾರ ಸಸ್ಪೆಂಡ್ ಮಾಡಿದೆ.
ವೀರೇನ್ ಖನ್ನಾ ಬಂಧನವಾದ ನಂತರವೂ ಎಸಿಪಿ ಆತನಿಗೆ ಸಹಕರಿಸುತ್ತಿದ್ದರು. ಕಸ್ಟಡಿಯಲ್ಲಿದ್ದ ಸಂದರ್ಭ ಖನ್ನಾಗೆ ಮೊಬೈಲ್ ನೀಡಿದ್ದ ಆರೋಪವೂ ಎಸಿಪಿ ಮೇಲಿದೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm