ಬ್ರೇಕಿಂಗ್ ನ್ಯೂಸ್
16-04-22 11:57 am Mangalore Correspondent ಕ್ರೈಂ
ಮಂಗಳೂರು, ಎ.16: ಹಂಪನಕಟ್ಟೆ ವೃತ್ತದಲ್ಲಿ ಟ್ರಾಫಿಕ್ ಸಿಗ್ನಲ್ ಜಂಪ್ ಮಾಡಿ, ಬೈಕ್ ಸವಾರನ ಮೇಲೆ ಡಿಕ್ಕಿಯಾಗಿ ಬೈಕ್ ಜೊತೆಗೇ ನೂರು ಮೀಟರ್ ದೂರಕ್ಕೆ ಹೊತ್ತೊಯ್ದು ಬೆಂಕಿ ಹತ್ತಿಕೊಂಡಿದ್ದ ಘಟನೆ ಸಂಬಂಧಿಸಿ ಪಾಂಡೇಶ್ವರ ಟ್ರಾಫಿಕ್ ಪೊಲೀಸರು ಬಸ್ ಚಾಲಕನನ್ನು ಬಂಧಿಸಿದ್ದಾರೆ.
ಎಪ್ರಿಲ್ 8ರಂದು ಮಧ್ಯಾಹ್ನ ಘಟನೆ ನಡೆದಿತ್ತು. ಕೆಎಸ್ ರಾವ್ ರಸ್ತೆಯಿಂದ ಮಿಲಾಗ್ರಿಸ್ ಕಡೆಗೆ ತೆರಳುತ್ತಿದ್ದ ಬೈಕ್ ಮೇಲೆ ಬಸ್ ಡಿಕ್ಕಿಯಾಗಿತ್ತು. ಅಲ್ಲದೆ, ಬಸ್ಸಿಗೆ ಬೆಂಕಿ ಹತ್ತಿಕೊಂಡರೂ, ಪ್ರಯಾಣಿಕರಿದ್ದ ಬಸ್ಸನ್ನು ಚಾಲಕ ಸ್ಟೇಟ್ ಬ್ಯಾಂಕಿನತ್ತ ಚಲಾಯಿಸಿದ್ದು ನೂರು ಮೀಟರ್ ದೂರದಲ್ಲಿ ನಿಲ್ಲಿಸಿದ್ದಾನೆ. ಅಷ್ಟರಲ್ಲಿ ಬೈಕ್ ಘರ್ಷಣೆಯಿಂದಾಗಿ ಬಸ್ಸಿಗೆ ಬೆಂಕಿ ಹತ್ತಿಕೊಂಡಿತ್ತು.



ಆನಂತರ ಬೆಂಕಿ ಸಂಪೂರ್ಣ ಹತ್ತಿಕೊಂಡಿದ್ದು ಬಸ್ 75 ಶೇಕಡಾ ಸುಟ್ಟು ಹೋಗಿತ್ತು. ಬಸ್ ಚಾಲಕನ ನಿರ್ಲಕ್ಷ್ಯದ ಚಾಲನೆ ಬಗ್ಗೆ ಪ್ರಕರಣ ದಾಖಲಿಸಿದ್ದ ಪೊಲೀಸರು ಇದೀಗ ಬಸ್ ಚಾಲಕ ಬಿಜು ಮೋನುವನ್ನು ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಎ.26ರ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.



45 ನಂಬರಿನ ಬಸ್ ಜ್ಯೋತಿ ಕಡೆಯಿಂದ ಸ್ಟೇಟ್ ಬ್ಯಾಂಕಿನತ್ತ ತೆರಳುತ್ತಿದ್ದು ಹಂಪನಕಟ್ಟೆ ವೃತ್ತದಲ್ಲಿ ಟ್ರಾಫಿಕ್ ರೆಡ್ ಸಿಗ್ನಲ್ ಬೀಳುತ್ತಿರುವುದನ್ನು ಕಂಡು ವೇಗವಾಗಿ ಧಾವಿಸಿ ಹೋಗಿದ್ದ. ಈ ವೇಳೆ, ಬೈಕನ್ನು ಗಮನಿಸದೆ ಬಸ್ಸನ್ನು ಚಲಾಯಿಸಿದ್ದರಿಂದ ಅಪಘಾತ ಆಗಿತ್ತು. ಬೈಕ್ ಸವಾರ ದಿಲೋನ್ ಅದೃಷ್ಟವಶಾತ್ ಬೈಕಿನಿಂದ ಹಿಂಭಾಗಕ್ಕೆ ಎಸೆಯಲ್ಪಟ್ಟಿದ್ದು ಕಾಲಿನ ಭಾಗಕ್ಕೆ ಮಾತ್ರ ಗಾಯಗೊಂಡಿದ್ದ. ಆದರೆ ಬೈಕ್ ಬಸ್ಸಿನಡಿ ಸಿಲುಕಿಕೊಂಡು ಅದರ ಜೊತೆಗೇ ನೂರು ಮೀಟರ್ ಉದ್ದಕ್ಕೆ ರಸ್ತೆಗೆ ಘರ್ಷಿಸುತ್ತಾ ಚಲಿಸಿತ್ತು. ಆದರೂ ಬಸ್ ಚಾಲಕ ಬಸ್ಸನ್ನು ನಿಲ್ಲಿಸದೇ ಇದ್ದುದು ಪ್ರಯಾಣಿಕರ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದ ಬಗ್ಗೆ ಪ್ರಕರಣ ದಾಖಲಾಗಿತ್ತು.
Traffic East police arrested the driver, who jumped red signal, crashed on to a bike which caused fire and burnt the bus, putting the lives of bike rider as well as passengers in the bus in danger, on April 8, at Hampankatta in the city.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 07:49 pm
Mangalore Correspondent
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm