ಬ್ರೇಕಿಂಗ್ ನ್ಯೂಸ್
16-04-22 11:57 am Mangalore Correspondent ಕ್ರೈಂ
ಮಂಗಳೂರು, ಎ.16: ಹಂಪನಕಟ್ಟೆ ವೃತ್ತದಲ್ಲಿ ಟ್ರಾಫಿಕ್ ಸಿಗ್ನಲ್ ಜಂಪ್ ಮಾಡಿ, ಬೈಕ್ ಸವಾರನ ಮೇಲೆ ಡಿಕ್ಕಿಯಾಗಿ ಬೈಕ್ ಜೊತೆಗೇ ನೂರು ಮೀಟರ್ ದೂರಕ್ಕೆ ಹೊತ್ತೊಯ್ದು ಬೆಂಕಿ ಹತ್ತಿಕೊಂಡಿದ್ದ ಘಟನೆ ಸಂಬಂಧಿಸಿ ಪಾಂಡೇಶ್ವರ ಟ್ರಾಫಿಕ್ ಪೊಲೀಸರು ಬಸ್ ಚಾಲಕನನ್ನು ಬಂಧಿಸಿದ್ದಾರೆ.
ಎಪ್ರಿಲ್ 8ರಂದು ಮಧ್ಯಾಹ್ನ ಘಟನೆ ನಡೆದಿತ್ತು. ಕೆಎಸ್ ರಾವ್ ರಸ್ತೆಯಿಂದ ಮಿಲಾಗ್ರಿಸ್ ಕಡೆಗೆ ತೆರಳುತ್ತಿದ್ದ ಬೈಕ್ ಮೇಲೆ ಬಸ್ ಡಿಕ್ಕಿಯಾಗಿತ್ತು. ಅಲ್ಲದೆ, ಬಸ್ಸಿಗೆ ಬೆಂಕಿ ಹತ್ತಿಕೊಂಡರೂ, ಪ್ರಯಾಣಿಕರಿದ್ದ ಬಸ್ಸನ್ನು ಚಾಲಕ ಸ್ಟೇಟ್ ಬ್ಯಾಂಕಿನತ್ತ ಚಲಾಯಿಸಿದ್ದು ನೂರು ಮೀಟರ್ ದೂರದಲ್ಲಿ ನಿಲ್ಲಿಸಿದ್ದಾನೆ. ಅಷ್ಟರಲ್ಲಿ ಬೈಕ್ ಘರ್ಷಣೆಯಿಂದಾಗಿ ಬಸ್ಸಿಗೆ ಬೆಂಕಿ ಹತ್ತಿಕೊಂಡಿತ್ತು.



ಆನಂತರ ಬೆಂಕಿ ಸಂಪೂರ್ಣ ಹತ್ತಿಕೊಂಡಿದ್ದು ಬಸ್ 75 ಶೇಕಡಾ ಸುಟ್ಟು ಹೋಗಿತ್ತು. ಬಸ್ ಚಾಲಕನ ನಿರ್ಲಕ್ಷ್ಯದ ಚಾಲನೆ ಬಗ್ಗೆ ಪ್ರಕರಣ ದಾಖಲಿಸಿದ್ದ ಪೊಲೀಸರು ಇದೀಗ ಬಸ್ ಚಾಲಕ ಬಿಜು ಮೋನುವನ್ನು ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಎ.26ರ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.



45 ನಂಬರಿನ ಬಸ್ ಜ್ಯೋತಿ ಕಡೆಯಿಂದ ಸ್ಟೇಟ್ ಬ್ಯಾಂಕಿನತ್ತ ತೆರಳುತ್ತಿದ್ದು ಹಂಪನಕಟ್ಟೆ ವೃತ್ತದಲ್ಲಿ ಟ್ರಾಫಿಕ್ ರೆಡ್ ಸಿಗ್ನಲ್ ಬೀಳುತ್ತಿರುವುದನ್ನು ಕಂಡು ವೇಗವಾಗಿ ಧಾವಿಸಿ ಹೋಗಿದ್ದ. ಈ ವೇಳೆ, ಬೈಕನ್ನು ಗಮನಿಸದೆ ಬಸ್ಸನ್ನು ಚಲಾಯಿಸಿದ್ದರಿಂದ ಅಪಘಾತ ಆಗಿತ್ತು. ಬೈಕ್ ಸವಾರ ದಿಲೋನ್ ಅದೃಷ್ಟವಶಾತ್ ಬೈಕಿನಿಂದ ಹಿಂಭಾಗಕ್ಕೆ ಎಸೆಯಲ್ಪಟ್ಟಿದ್ದು ಕಾಲಿನ ಭಾಗಕ್ಕೆ ಮಾತ್ರ ಗಾಯಗೊಂಡಿದ್ದ. ಆದರೆ ಬೈಕ್ ಬಸ್ಸಿನಡಿ ಸಿಲುಕಿಕೊಂಡು ಅದರ ಜೊತೆಗೇ ನೂರು ಮೀಟರ್ ಉದ್ದಕ್ಕೆ ರಸ್ತೆಗೆ ಘರ್ಷಿಸುತ್ತಾ ಚಲಿಸಿತ್ತು. ಆದರೂ ಬಸ್ ಚಾಲಕ ಬಸ್ಸನ್ನು ನಿಲ್ಲಿಸದೇ ಇದ್ದುದು ಪ್ರಯಾಣಿಕರ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದ ಬಗ್ಗೆ ಪ್ರಕರಣ ದಾಖಲಾಗಿತ್ತು.
Traffic East police arrested the driver, who jumped red signal, crashed on to a bike which caused fire and burnt the bus, putting the lives of bike rider as well as passengers in the bus in danger, on April 8, at Hampankatta in the city.
03-08-26 04:45 pm
HK News Staffer
ಸುಪ್ರೀಂ ಕೋರ್ಟ್ ಮೆಟ್ಟಿಲೇರಿ ಎಂಕೆ ಪ್ರಾಣೇಶ್ ವಿರುದ...
03-08-26 03:23 pm
ಡಿಕೆಶಿ ಸರ್ಕಾರದ ಮೆಗಾ ಸಂಪುಟ ವಿಸ್ತರಣೆ ; ಸಂಜೆ 4ಕ್...
03-08-26 01:46 pm
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
03-08-26 01:48 pm
HK News Staffer
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm