ಬ್ರೇಕಿಂಗ್ ನ್ಯೂಸ್
24-09-20 12:30 pm Mangalore Correspondent ಕ್ರೈಂ
ಪುತ್ತೂರು, ಸೆಪ್ಟಂಬರ್ 24: ಪತಿಯೇ ತನ್ನ ಪತ್ನಿ ಹಾಗೂ ಆಕೆಯ ಚಿಕ್ಕಮ್ಮನ ಮೇಲೆ ಆಸಿಡ್ ದಾಳಿ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿಯ ಕೊಣಾಲು ಗ್ರಾಮದಲ್ಲಿ ನಡೆದಿದೆ.
ಕೇರಳ ಮೂಲದ, ನೆಲ್ಯಾಡಿ ನಿವಾಸಿ ಬಿಜು(38) ಎಂಬಾತ ತನ್ನ ಪತ್ನಿ ಶೈನಿ(33) ಹಾಗೂ ಪತ್ನಿಯ ಚಿಕ್ಕಮ್ಮ ಝಾನ್ಸಿ(63) ಮೇಲೆ ಆಸಿಡ್ ಎರಚಿ ಹಲ್ಲೆ ನಡೆಸಿದ್ದಾನೆ. ಆಸಿಡ್ ದಾಳಿಯಿಂದಾಗಿ ಇಬ್ಬರ ಮುಖ, ಕಣ್ಣಿನ ಭಾಗ ಸುಟ್ಟುಹೋಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಿಜು ಹಾಗೂ ಪತ್ನಿ ಶೈನಿ ನಡುವೆ ಜಗಳ ನಡೆದು, ಪತ್ನಿ ಮನೆ ಬಿಟ್ಟು ಬಂದಿದ್ದಳು. ಕೊಣಾಲು ಗ್ರಾಮದ ಪಾಂಡಿಬೆಟ್ಟು ಎಂಬಲ್ಲಿರುವ ತಂದೆಯ ತಮ್ಮನ ಮನೆಯಲ್ಲಿ ವಾಸವಿದ್ದರು. ಇದೇ ವೇಳೆ, ಅಲ್ಲಿಂದ ಶೈನಿ ತನ್ನ ಚಿಕ್ಕಮ್ಮ ಝಾನ್ಸಿ ಜೊತೆಗೆ ನೆಲ್ಯಾಡಿಯ ಆಶ್ರಮವೊಂದಕ್ಕೆ ಕೆಲಸಕ್ಕೆ ಹೋಗುತ್ತಿದ್ದಳು. ಎಂದಿನಂತೆ ಇಂದು ಬೆಳಗ್ಗೆ ಶೈನಿ ಹಾಗೂ ಝಾನ್ಸಿ ಕಾಲುದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಕಾದು ಕುಳಿತಿದ್ದ ಆರೋಪಿ ಬಿಜು, ಇಬ್ಬರ ಮೇಲೂ ಆಸಿಡ್ ದಾಳಿ ನಡೆಸಿ ಪರಾರಿಯಾಗಿದ್ದಾನೆ.
ಸುದ್ದಿ ತಿಳಿಯುತ್ತಲೇ ಶೈನಿಯ ಚಿಕ್ಕಪ್ಪ ಏಲಿಯಸ್, ಸ್ಥಳಕ್ಕೆ ಆಗಮಿಸಿದ್ದು ಇಬ್ಬರನ್ನೂ ರಿಕ್ಷಾದಲ್ಲಿ ನೆಲ್ಯಾಡಿಯ ಆಸ್ಪತ್ರೆಗೆ ಕರೆತಂದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ದಿದ್ದಾರೆ. ನೆಲ್ಯಾಡಿ ಪೊಲೀಸರು ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ.
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
15-03-26 05:37 pm
HK News Desk
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
ಅಮೆರಿಕ ವಿರುದ್ಧ ಯುದ್ಧಕ್ಕೆ ಹೌತಿಗಳು ಸಜ್ಜು ; ಹರ್ಮ...
15-03-26 04:57 pm
ಐತಿಹಾಸಿಕ ರಾಮಾಯಣ ಕ್ಷೇತ್ರಗಳ ದರ್ಶನಕ್ಕೆ ವಿಶೇಷ ರೈಲ...
15-03-26 01:08 pm
ಗಲ್ಫ್ ಯುದ್ಧ ನಡುವಲ್ಲೇ ಮಿಸೈಲ್ ಉಡಾಯಿಸಿದ ಉತ್ತರ ಕೊ...
14-03-26 10:31 pm
15-03-26 09:10 pm
Mangalurur Staffer
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am