ಬ್ರೇಕಿಂಗ್ ನ್ಯೂಸ್
18-04-22 10:08 pm Bengaluru Correspondent ಕ್ರೈಂ
ಬೆಂಗಳೂರು, ಎ.18 : ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಮತ್ತೊಂದು ಬಹುಕೋಟಿ ವಂಚನೆ ಎಸಗಿರುವ ಪ್ರಕರಣ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಶೇರ್ ಶಾ ಅಪ್ಲಿಕೇಷನ್ ಹೆಸರಿನಲ್ಲಿ ಹೂಡಿಕೆದಾರರಿಗೆ ಭಾರೀ ವಂಚನೆ ಎಸಗಲಾಗಿದೆ.
ಗ್ರಾಹಕರಿಗೆ ಕ್ರಿಪ್ಟೋ ಮೈನಿಂಗ್ ಯಂತ್ರ ನೀಡೋದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಎಸಗಿದ್ದು ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಬರೋಬ್ಬರಿ 44 ಬ್ಯಾಂಕ್ ಅಕೌಂಟ್ ನಲ್ಲಿದ್ದ 15 ಕೋಟಿ ರೂ. ಹಣ, 1 ಕೆಜಿ 650 ಗ್ರಾಂ ಚಿನ್ನ , 78 ಲಕ್ಷ ನಗದು ಸೇರಿ 17 ಕೋಟಿ ರೂಪಾಯಿ ವಶಕ್ಕೆ ಪಡೆಯಲಾಗಿದೆ.
ಕೋವಿಡ್ 2ನೇ ಲಾಕ್ಡೌನ್ ವೇಳೆ ಸಾಮಾಜಿಕ ಜಾಲತಾಣ ಮೂಲಕ HNT (HELIEAM CRIPTO TOKEN) ಕ್ರಿಪ್ಟೋ ಕರೆನ್ಸಿ ನೀಡೋದಾಗಿ ನಂಬಿಸಿ ಆರೋಪಿಗಳು ವಂಚನೆ ಎಸಗಿದ್ದಾರೆ. ಬೆಂಗಳೂರು ಸೇರಿ ವಿವಿಧ ರಾಜ್ಯಗಳಲ್ಲಿ ನೊಂದಾಯಿತ ಕಂಪನಿಗಳ ಮೂಲಕ ಗ್ರಾಹಕರು ಹಣ ಹೂಡಿಕೆ ಮಾಡಿದ್ದರು.
![]()
ಆದರೆ 2022 ರ ಜನವರಿ ತಿಂಗಳಲ್ಲಿ ಶೇರ್ ಷಾ ಅಪ್ಲಿಕೇಷನ್ ದೋಷಪೂರಿತವಾಗಿದೆ, ಅದನ್ನ ಅಪ್ಡೇಟ್ ಮಾಡಬೇಕು ಎಂದು ಗ್ರಾಹಕರಿಗೆ ಸಂದೇಶ ರವಾನಿಸಲಾಗಿತ್ತು. ಅಲ್ಲದೆ, ಹೊಸ ಅಪ್ಲಿಕೇಷನ್ 2.0 ಬಿಡುಗಡೆ ಮಾಡ್ತಿವಿ ಎಂದು ನಂಬಿಸಿದ್ದರು.
ಆದರೆ ಹೇಳಿದ ಸಮಯಕ್ಕೆ ಅಪ್ಲಿಕೇಷನ್ ಅಪ್ಡೇಟ್ ಆಗದೇ ಇದ್ದುದು ಸಂಶಯ ಬರುವಂತಾಗಿತ್ತು. ಹೂಡಿಕೆದಾರರಿಗೆ ಯಾವುದೇ ರಿಟರ್ನ್ ನೀಡದೆ, ಆದಾಯವನ್ನೂ ನೀಡದೆ ಕ್ರಿಪ್ಟೋ ಮೈನಿಂಗ್ ಯಂತ್ರವನ್ನೂ ನೀಡದೆ ವಂಚನೆ ಎಸಗಿದ್ದಾಗಿ ಹೇಳಲಾಗುತ್ತಿದೆ.
1 ಕೇಜಿ 650 ಗ್ರಾಂ ಗೋಲ್ಡ್ , 78ಲಕ್ಷ ಹಣ, 44 ಡಿಎಸ್ ಸಿ (digital signature certificate), ವಿವಿಧ ಕಂಪನಿಗಳ ಹೆಸರಿನ ಸೀಲ್, ಮೊಬೈಲ್ ಫೋನ್, ಲ್ಯಾಪ್ ಟ್ಯಾಪ್ ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದ್ದು ಎಷ್ಟು ಕೋಟಿ ವಂಚನೆಯಾಗಿದೆ ಎನ್ನುವ ಕುರಿತಾಗಿ ಮಾಹಿತಿ ಕಲೆಹಾಕಲಾಗುತ್ತಿದೆ.
A multi-crore money laundering case has come to light in the name of crypto currency. Police have arrested four people for allegedly defrauding an application. There have been multiple frauds in the name of the Sher Shaw app. Allegations of crypto mining are believed to have been imposed on millions of rupees.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm