ಬ್ರೇಕಿಂಗ್ ನ್ಯೂಸ್
20-04-22 12:09 pm Bengaluru Correspondent ಕ್ರೈಂ
ಬೆಂಗಳೂರು, ಎ.20: ಜುವೆಲ್ಲರಿ ಮೇಲ್ಗಡೆಯ ಮಹಡಿಯಲ್ಲಿ ಬಾಡಿಗೆ ಪಡೆದಿದ್ದ ತಂಡವೊಂದು ಜುವೆಲ್ಲರಿಗೆ ಕನ್ನ ಹಾಕಿದ್ದಲ್ಲದೆ, 5 ಕೇಜಿ ಚಿನ್ನಾಭರಣ ದೋಚಿಕೊಂಡು ಹೋಗಿರುವ ಘಟನೆ ನಡೆದಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು 15 ಜನರ ವಿಶೇಷ ತಂಡವನ್ನು ರಚಿಸಿದ್ದಾರೆ.
ಜೆಪಿ ನಗರ ಠಾಣೆ ವ್ಯಾಪ್ತಿಯ ಪ್ರಿಯದರ್ಶಿನಿ ಜುವೆಲ್ಲರ್ಸ್ ನಲ್ಲಿ ಕಳವು ನಡೆದಿದ್ದು, ಆರೋಪಿಗಳು ವ್ಯವಸ್ಥಿತವಾಗಿ ಕಳ್ಳತನ ನಡೆಸಿದ್ದಾರೆ. ಒಂದು ತಿಂಗಳ ಹಿಂದೆ ದೆಹಲಿಯ ನಕಲಿ ವಿಳಾಸವನ್ನು ನೀಡಿ, ಮೂವರು ವ್ಯಕ್ತಿಗಳು ಜುವೆಲ್ಲರಿ ಕಟ್ಟಡದ ಮೂರನೇ ಮಹಡಿಯಲ್ಲಿ ಬಾಡಿಗೆ ಕೋಣೆ ಪಡೆದಿದ್ದರು. ಕೆಳಗಿನ ಎರಡು ಮಹಡಿಯಲ್ಲಿ ಜುವೆಲ್ಲರಿ ಇದ್ದು, ಮೇಲಿನ ಮೂರನೇ ಮಹಡಿ ಖಾಲಿ ಇತ್ತು. ಅಲ್ಲಿ ಬಾಡಿಗೆ ಪಡೆದು ಒಂದು ತಿಂಗಳ ಕಾಲ ಜುವೆಲ್ಲರಿ ದರೋಡೆಗೆ ಆರೋಪಿಗಳು ಸ್ಕೆಚ್ ಹಾಕಿದ್ದಾರೆ.

ಜುವೆಲ್ಲರಿಯ ಇಂಚಿಂಚು ಮಾಹಿತಿ ಸಂಗ್ರಹಿಸಿದ ಬಳಿಕ ಮೊನ್ನೆ ರಜಾದಿನವಾದ ಭಾನುವಾರ ಕಳವು ಕೃತ್ಯ ನಡೆಸಿದ್ದಾರೆ. ಮೂರನೇ ಮಹಡಿಯಿಂದ ಕೆಳಗಿನ ಭಾಗಕ್ಕೆ ಕಾಂಕ್ರೀಟನ್ನು ಕೊರೆದು ಸುರಂಗ ತೋಡಿದ್ದು ಅಲ್ಲಿಂದ ಜುವೆಲ್ಲರಿ ಒಳಕ್ಕಿಳಿದು ಚಿನ್ನಾಭರಣ ಕಳವು ಮಾಡಿದ್ದಾರೆ. ಮಂಗಳವಾರ ಬೆಳಗ್ಗೆ ಮಾಲೀಕರು ಬಂದು ಜುವೆಲ್ಲರಿ ಓಪನ್ ಮಾಡಿದಾಗ ಕಳವು ಕೃತ್ಯ ಬೆಳಕಿಗೆ ಬಂದಿದ್ದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಒಟ್ಟು 2.5 ಕೋಟಿ ಮೌಲ್ಯದ ಚಿನ್ನಾಭರಣ ಕಳವಾಗಿರುವುದಾಗಿ ಪೊಲೀಸರಿಗೆ ದೂರು ನೀಡಿದ್ದಾರೆ. ಕೊಠಡಿ ಬಾಡಿಗೆ ಪಡೆಯುವ ವೇಳೆ ವಿಳಾಸದ ಗುರುತಿಗಾಗಿ ಆಧಾರ್ ಕಾರ್ಡ್ ನೀಡಿದ್ದು, ಅದು ನಕಲಿಯೆಂದು ಪೊಲೀಸರು ತಿಳಿಸಿದ್ದಾರೆ.
ಭಾನುವಾರ ಸಂಜೆ ವರೆಗೂ ವ್ಯಾಪಾರ ಮಾಡಿದ್ದ ಮಾಲೀಕರು ರಾತ್ರಿ ವೇಳೆಗೆ ಬಂದ್ ಮಾಡಿ ಹೋಗಿದ್ದರು. ಅದೇ ದಿನ ರಾತ್ರಿ 2 ಗಂಟೆಯ ವೇಳೆಗೆ ಜುವೆಲ್ಲರಿಗೆ ಕನ್ನ ಕೊರೆಯಲಾಗಿದೆ. ಗ್ಯಾಸ್ ಕಟರ್ ಬಳಸಿ ಕನ್ನ ಹಾಕಿರುವುದು ಕಂಡುಬಂದಿದ್ದು, ಒಳಕ್ಕಿಳಿದು ಕಪಾಟು ಒಡೆದು ಚಿನ್ನ ದೋಚಿದ್ದಾರೆ.
Bangalore Robbers break Priyadarshini Jewellers at JP Nagar, escape with five kilos of gold. A 15 member police team has been formed to nab the robbers. JP Nagar police are now investigating the case.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
30-03-26 10:31 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
30-03-26 07:35 pm
HK News Desk
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm