ಬ್ರೇಕಿಂಗ್ ನ್ಯೂಸ್
20-04-22 12:09 pm Bengaluru Correspondent ಕ್ರೈಂ
ಬೆಂಗಳೂರು, ಎ.20: ಜುವೆಲ್ಲರಿ ಮೇಲ್ಗಡೆಯ ಮಹಡಿಯಲ್ಲಿ ಬಾಡಿಗೆ ಪಡೆದಿದ್ದ ತಂಡವೊಂದು ಜುವೆಲ್ಲರಿಗೆ ಕನ್ನ ಹಾಕಿದ್ದಲ್ಲದೆ, 5 ಕೇಜಿ ಚಿನ್ನಾಭರಣ ದೋಚಿಕೊಂಡು ಹೋಗಿರುವ ಘಟನೆ ನಡೆದಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು 15 ಜನರ ವಿಶೇಷ ತಂಡವನ್ನು ರಚಿಸಿದ್ದಾರೆ.
ಜೆಪಿ ನಗರ ಠಾಣೆ ವ್ಯಾಪ್ತಿಯ ಪ್ರಿಯದರ್ಶಿನಿ ಜುವೆಲ್ಲರ್ಸ್ ನಲ್ಲಿ ಕಳವು ನಡೆದಿದ್ದು, ಆರೋಪಿಗಳು ವ್ಯವಸ್ಥಿತವಾಗಿ ಕಳ್ಳತನ ನಡೆಸಿದ್ದಾರೆ. ಒಂದು ತಿಂಗಳ ಹಿಂದೆ ದೆಹಲಿಯ ನಕಲಿ ವಿಳಾಸವನ್ನು ನೀಡಿ, ಮೂವರು ವ್ಯಕ್ತಿಗಳು ಜುವೆಲ್ಲರಿ ಕಟ್ಟಡದ ಮೂರನೇ ಮಹಡಿಯಲ್ಲಿ ಬಾಡಿಗೆ ಕೋಣೆ ಪಡೆದಿದ್ದರು. ಕೆಳಗಿನ ಎರಡು ಮಹಡಿಯಲ್ಲಿ ಜುವೆಲ್ಲರಿ ಇದ್ದು, ಮೇಲಿನ ಮೂರನೇ ಮಹಡಿ ಖಾಲಿ ಇತ್ತು. ಅಲ್ಲಿ ಬಾಡಿಗೆ ಪಡೆದು ಒಂದು ತಿಂಗಳ ಕಾಲ ಜುವೆಲ್ಲರಿ ದರೋಡೆಗೆ ಆರೋಪಿಗಳು ಸ್ಕೆಚ್ ಹಾಕಿದ್ದಾರೆ.

ಜುವೆಲ್ಲರಿಯ ಇಂಚಿಂಚು ಮಾಹಿತಿ ಸಂಗ್ರಹಿಸಿದ ಬಳಿಕ ಮೊನ್ನೆ ರಜಾದಿನವಾದ ಭಾನುವಾರ ಕಳವು ಕೃತ್ಯ ನಡೆಸಿದ್ದಾರೆ. ಮೂರನೇ ಮಹಡಿಯಿಂದ ಕೆಳಗಿನ ಭಾಗಕ್ಕೆ ಕಾಂಕ್ರೀಟನ್ನು ಕೊರೆದು ಸುರಂಗ ತೋಡಿದ್ದು ಅಲ್ಲಿಂದ ಜುವೆಲ್ಲರಿ ಒಳಕ್ಕಿಳಿದು ಚಿನ್ನಾಭರಣ ಕಳವು ಮಾಡಿದ್ದಾರೆ. ಮಂಗಳವಾರ ಬೆಳಗ್ಗೆ ಮಾಲೀಕರು ಬಂದು ಜುವೆಲ್ಲರಿ ಓಪನ್ ಮಾಡಿದಾಗ ಕಳವು ಕೃತ್ಯ ಬೆಳಕಿಗೆ ಬಂದಿದ್ದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಒಟ್ಟು 2.5 ಕೋಟಿ ಮೌಲ್ಯದ ಚಿನ್ನಾಭರಣ ಕಳವಾಗಿರುವುದಾಗಿ ಪೊಲೀಸರಿಗೆ ದೂರು ನೀಡಿದ್ದಾರೆ. ಕೊಠಡಿ ಬಾಡಿಗೆ ಪಡೆಯುವ ವೇಳೆ ವಿಳಾಸದ ಗುರುತಿಗಾಗಿ ಆಧಾರ್ ಕಾರ್ಡ್ ನೀಡಿದ್ದು, ಅದು ನಕಲಿಯೆಂದು ಪೊಲೀಸರು ತಿಳಿಸಿದ್ದಾರೆ.
ಭಾನುವಾರ ಸಂಜೆ ವರೆಗೂ ವ್ಯಾಪಾರ ಮಾಡಿದ್ದ ಮಾಲೀಕರು ರಾತ್ರಿ ವೇಳೆಗೆ ಬಂದ್ ಮಾಡಿ ಹೋಗಿದ್ದರು. ಅದೇ ದಿನ ರಾತ್ರಿ 2 ಗಂಟೆಯ ವೇಳೆಗೆ ಜುವೆಲ್ಲರಿಗೆ ಕನ್ನ ಕೊರೆಯಲಾಗಿದೆ. ಗ್ಯಾಸ್ ಕಟರ್ ಬಳಸಿ ಕನ್ನ ಹಾಕಿರುವುದು ಕಂಡುಬಂದಿದ್ದು, ಒಳಕ್ಕಿಳಿದು ಕಪಾಟು ಒಡೆದು ಚಿನ್ನ ದೋಚಿದ್ದಾರೆ.
Bangalore Robbers break Priyadarshini Jewellers at JP Nagar, escape with five kilos of gold. A 15 member police team has been formed to nab the robbers. JP Nagar police are now investigating the case.
03-08-26 04:45 pm
HK News Staffer
ಸುಪ್ರೀಂ ಕೋರ್ಟ್ ಮೆಟ್ಟಿಲೇರಿ ಎಂಕೆ ಪ್ರಾಣೇಶ್ ವಿರುದ...
03-08-26 03:23 pm
ಡಿಕೆಶಿ ಸರ್ಕಾರದ ಮೆಗಾ ಸಂಪುಟ ವಿಸ್ತರಣೆ ; ಸಂಜೆ 4ಕ್...
03-08-26 01:46 pm
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
03-08-26 01:48 pm
HK News Staffer
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm