ಬ್ರೇಕಿಂಗ್ ನ್ಯೂಸ್
21-04-22 06:46 pm HK Desk news ಕ್ರೈಂ
ಹುಬ್ಬಳ್ಳಿ, ಎ.21: ಹುಬ್ಬಳ್ಳಿಯ ಗಲಭೆ ಪ್ರಕರಣದಲ್ಲಿ ಮಾಸ್ಟರ್ ಮೈಂಡ್ ಎನ್ನಲಾದ, ತಲೆಮರೆಸಿಕೊಂಡು ತಿರುಗಾಡುತ್ತಿದ್ದ ಮೌಲವಿ ವಾಸಿಂ ಪಠಾಣ್ ಎಂಬಾತನನ್ನ ಕೊನೆಗೂ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ನಗರದಲ್ಲಿ ಬಂಧಿಸಿದ ಬಳಿಕ ಘಟನೆ ಬಗ್ಗೆ ಪ್ರಕರಣ ದಾಖಲಾಗಿರುವ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಕರೆದುಕೊಂಡು ಬರಲಾಗಿದೆ. ಠಾಣೆಗೆ ಕಲ್ಲು ತೂರಿ ದೊಂಬಿ ನಡೆಸಲು ಉದ್ರಿಕ್ತ ಜನರಿಗೆ ಪ್ರೇರಣೆ ನೀಡಿದ್ದ ಎಂಬ ಆರೋಪದಲ್ಲಿ ತನಿಖೆ ನಡೆಸಲಾಗುತ್ತಿದೆ. ಇದಕ್ಕೂ ಮುನ್ನ ನಿಗೂಢ ಜಾಗದಲ್ಲಿದ್ದುಕೊಂಡು ವಾಸಿಂ ಪಠಾಣ್ ವಿಡಿಯೋ ಬಿಡುಗಡೆ ಮಾಡಿದ್ದ.


ಇಸ್ಲಾಂ ಧರ್ಮಕ್ಕೆ ಅಪಮಾನ ಮಾಡಿದ ಬಗ್ಗೆ ಮುಸ್ಲಿಂ ಯುವಕರಲ್ಲಿ ಅಸಮಾಧಾನ ಇತ್ತು. ಈ ಬಗ್ಗೆ ದೂರು ನೀಡಲು ಯುವಕರು ಜಮಾಯಿಸಿದ್ದರು. ಜನರ ಜೊತೆಗೆ ಮಾತನಾಡಲು ಪೊಲೀಸರು ನನ್ನನ್ನು ಕರೆಸಿದ್ದರು. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಪೊಲೀಸರೇ ಜೀಪ್ ಹತ್ತಿ ಜನರಿಗೆ ತಿಳಿ ಹೇಳಲು ಹೇಳಿದರು. ನಾನು ವಾಹನದ ಮೇಲೆ ಹತ್ತಿದಾಗ ಅಲ್ಲಿ ಮೈಕ್ ಇರಲಿಲ್ಲ.

ಹೀಗಾಗಿ ಕೈ ಸನ್ನೆ ಮಾಡುವ ಮೂಲಕ ಜನರಲ್ಲಿ ಶಾಂತಿ ಕಾಪಾಡಲು ಹೇಳಿದ್ದೆ. ಆದರೆ ನಾನೇ ಒಟ್ಟು ಘಟನೆಯ ಪಿತೂರಿದಾರ ಎಂದು ಬಿಂಬಿಸಲಾಗುತ್ತಿದೆ. ನಾನು ಘಟನೆಯ ಮಾಸ್ಟರ್ ಮೈಂಡ್ ಅಲ್ಲ. ನನ್ನ ವಿರುದ್ಧ ಷಡ್ಯಂತ್ರ ರೂಪಿಸಲಾಗಿದೆ. ಹುಬ್ಬಳ್ಳಿಯ ವಾತಾವರಣ ಹದಗೆಡಿಸುವ ಉದ್ದೇಶ ನನ್ನದಾಗಿರಲಿಲ್ಲ. ಪೊಲೀಸ್ ಇಲಾಖೆಯ ಬಗ್ಗೆ ನನಗೆ ಭರವಸೆ ಇದೆ. ಪೊಲೀಸರ ಮುಂದೆ ಹಾಜರಾಗಿ ನನ್ನ ಹೇಳಿಕೆ ಕೊಡುತ್ತೇನೆ. ಸತ್ಯಕ್ಕೆ ನ್ಯಾಯ ಸಿಗುತ್ತದೆ ಎಂದು ನಂಬಿದ್ದೇನೆ ಎಂದು ವಿಡಿಯೋದಲ್ಲಿ ವಾಸಿಂ ಪಠಾಣ್ ಹೇಳಿಕೆ ನೀಡಿದ್ದರು.
Karnataka Police on Wednesday arrested the main accused in the Hubballi stone pelting case. The accused, identified as Waseem Pathan, is a local Maulvi allegedly involved in violence that broke out on Saturday.
03-08-26 04:45 pm
HK News Staffer
ಸುಪ್ರೀಂ ಕೋರ್ಟ್ ಮೆಟ್ಟಿಲೇರಿ ಎಂಕೆ ಪ್ರಾಣೇಶ್ ವಿರುದ...
03-08-26 03:23 pm
ಡಿಕೆಶಿ ಸರ್ಕಾರದ ಮೆಗಾ ಸಂಪುಟ ವಿಸ್ತರಣೆ ; ಸಂಜೆ 4ಕ್...
03-08-26 01:46 pm
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
03-08-26 01:48 pm
HK News Staffer
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm